<p>ಅಮೀನಗಡ : ಪಟ್ಟಣದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ನಂ.2 ಶಾಲೆಗೆ ಮಂಗಳವಾರ ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಭೇಟಿ ನೀಡಿದರು.</p>.<p>ಪ್ರಸಕ್ತ ಸಾಲಿನಲ್ಲಿ ಎಲ್ಕೆಜಿ, ಯುಕೆಜಿ ಹಾಗೂ 1 ರಿಂದ 8 ನೇ ತರಗತಿ ಪ್ರಾರಂಭವಾಗಿದ್ದು, ಪಟ್ಟಣದ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಅವರು ಕೋರಿದರು.</p>.<p>ದ್ವಿಭಾಷಾ ಬೋಧನೆ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಪೌಷ್ಟಿಕ ಆಹಾರ ಜೊತೆಗೆ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದೆ. ಖಾಸಗಿ ಶಾಲೆಯಿಂದ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಪಿ.ಎಂ.ಶ್ರೀ ಶಾಲೆಗೆ ದಾಖಲಾತಿ ಆಗಿದ್ದಾರೆ. ಈ ಶೈಕ್ಷಣಿಕ ವರ್ಷದಿಂದ 8 ನೇ ತರಗತಿ ಕೂಡ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲಿದೆ ಎಂದರು. ಶಿಕ್ಷಕರಾದ ಎಸ್.ಎಸ್.ಲಮಾಣಿ, ಮಲ್ಲಿಕಾರ್ಜುನ ಸಜ್ಜನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-19-2055933599</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಮೀನಗಡ : ಪಟ್ಟಣದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ನಂ.2 ಶಾಲೆಗೆ ಮಂಗಳವಾರ ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಭೇಟಿ ನೀಡಿದರು.</p>.<p>ಪ್ರಸಕ್ತ ಸಾಲಿನಲ್ಲಿ ಎಲ್ಕೆಜಿ, ಯುಕೆಜಿ ಹಾಗೂ 1 ರಿಂದ 8 ನೇ ತರಗತಿ ಪ್ರಾರಂಭವಾಗಿದ್ದು, ಪಟ್ಟಣದ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಅವರು ಕೋರಿದರು.</p>.<p>ದ್ವಿಭಾಷಾ ಬೋಧನೆ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಪೌಷ್ಟಿಕ ಆಹಾರ ಜೊತೆಗೆ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದೆ. ಖಾಸಗಿ ಶಾಲೆಯಿಂದ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಪಿ.ಎಂ.ಶ್ರೀ ಶಾಲೆಗೆ ದಾಖಲಾತಿ ಆಗಿದ್ದಾರೆ. ಈ ಶೈಕ್ಷಣಿಕ ವರ್ಷದಿಂದ 8 ನೇ ತರಗತಿ ಕೂಡ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲಿದೆ ಎಂದರು. ಶಿಕ್ಷಕರಾದ ಎಸ್.ಎಸ್.ಲಮಾಣಿ, ಮಲ್ಲಿಕಾರ್ಜುನ ಸಜ್ಜನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-19-2055933599</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>