ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಆಸ್ತಿ ತೆರಿಗೆ ವಸೂಲಾತಿಗೆ ವಿವಿಧ ವಾದ್ಯಗಳನ್ನು ಬಾರಿಸಿ ಬುಧವಾರ ವಿನೂತನವಾಗಿ ಕಾರ್ಯಕ್ರಮ ನಡೆಸಲಾಯಿತು.
ಪಂಚಾಯ್ತಿಯ ಪೌರಕಾರ್ಮಿಕರು, ನೀರು ಸರಬರಾಜು ಸಿಬ್ಬಂದಿ ಹಾಗೂ ಕಚೇರಿ ಸಿಬ್ಬಂದಿ ಸೇರಿ ಆಸ್ತಿ ತೆರಿಗೆ ಬಾಕಿ ಇರುವ ಮನೆಗಳಿಗೆ ತೆರಳಿ ಹಲಿಗೆ, ಕೈತಾಳ ಹಾಗೂ ಶಹನಾಯಿ ಬಾರಿಸಿ ಆಸ್ತಿ ತೆರಿಗೆ ಪಾವತಿಸುವಂತೆ ಜಾಗೃತಿ ಮೂಡಿಸಿದರು.
ಮುಖ್ಯಾಧಿಕಾರಿ ಎನ್.ಎ.ಲಮಾಣಿ ಮಾತನಾಡಿ, ಸಾರ್ವಜನಿಕ ಆಸ್ತಿಗಳ ಪುನಃ ನವೀಕರಣಗೊಳಿಸಲು ಮತ್ತು ಪಟ್ಟಣದ ಅಭಿವೃದ್ಧಿಗೆ ವಿವಿಧ ತೆರಿಗೆ ಸಂಗ್ರಹಗಳ ಜೊತೆಗೆ ಆಸ್ತಿ ತೆರಿಗೆ ಸಂಗ್ರಹ ಪ್ರಮುಖವಾಗಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನೀಡುವ ತೆರಿಗೆ ಒಂದು ಆಸ್ತಿಯಾಗಿದ್ದು, ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.