<p><strong>ಬಾಗಲಕೋಟೆ</strong>: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಅನಂತವಾಗಿದೆ. ಶ್ರದ್ಧೆ, ದೃಢ ನಿರ್ಧಾರ, ಸತತ ಪರಿಶ್ರಮ ಇದ್ದರೆ ಯಶಸ್ಸು ಸಾಧ್ಯ ಎಂಬುದಕ್ಕೆ ವಜ್ಜರಮಟ್ಟಿಯ ಅಂಕಿತಾ ಕೊಣ್ಣೂರ ಸಾಕ್ಷಿಯಾಗಿದ್ದಾಳೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.</p>.<p>ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಮೆಳ್ಳಿಗೇರಿ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಅವರಿಗೆ ₹2 ಲಕ್ಷ ನಗದು ಪುರಸ್ಕಾರ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನಿರಾಣಿ ಸಮೂಹವು ಆರ್ಥಿಕ ನೆರವು ನೀಡಲು ಸಿದ್ಧವಿದೆ ಎಂದರು.</p>.<p>ವಿದ್ಯಾರ್ಥಿ ಬಯಸಿದಲ್ಲಿ ಬಾಗಲಕೋಟೆಯ ತೇಜಸ್ ಅಂತರರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಉಚಿತ ಶಿಕ್ಷಣದ ಜೊತೆಗೆ ಭವಿಷ್ಯದ ಉನ್ನತ ವ್ಯಾಸಂಗದ ಖರ್ಚು ಸಹ ನಿರಾಣಿ ಸಮೂಹದಿಂದ ನೋಡಿಕೊಳ್ಳಲಾಗುವುದು ಎಂದು ಪಾಲಕರಿಗೆ ತಿಳಿಸಿದರು.</p>.<p>ಟ್ರ್ಯೂ ಆಲ್ಟ್ ವ್ಯವಸ್ಥಾಪಕ ನಿರ್ದೇಶಕ ವಿಜಯ ನಿರಾಣಿ ವಿದ್ಯಾರ್ಥಿನಿಗೆ ಶುಭ ಕೋರಿದರು. ಎಂ.ಆರ್.ಎನ್. ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ, ನಿರ್ದೇಶಕ ವಿಶಾಲ ನಿರಾಣಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಅನಂತವಾಗಿದೆ. ಶ್ರದ್ಧೆ, ದೃಢ ನಿರ್ಧಾರ, ಸತತ ಪರಿಶ್ರಮ ಇದ್ದರೆ ಯಶಸ್ಸು ಸಾಧ್ಯ ಎಂಬುದಕ್ಕೆ ವಜ್ಜರಮಟ್ಟಿಯ ಅಂಕಿತಾ ಕೊಣ್ಣೂರ ಸಾಕ್ಷಿಯಾಗಿದ್ದಾಳೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.</p>.<p>ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಮೆಳ್ಳಿಗೇರಿ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಅವರಿಗೆ ₹2 ಲಕ್ಷ ನಗದು ಪುರಸ್ಕಾರ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನಿರಾಣಿ ಸಮೂಹವು ಆರ್ಥಿಕ ನೆರವು ನೀಡಲು ಸಿದ್ಧವಿದೆ ಎಂದರು.</p>.<p>ವಿದ್ಯಾರ್ಥಿ ಬಯಸಿದಲ್ಲಿ ಬಾಗಲಕೋಟೆಯ ತೇಜಸ್ ಅಂತರರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಉಚಿತ ಶಿಕ್ಷಣದ ಜೊತೆಗೆ ಭವಿಷ್ಯದ ಉನ್ನತ ವ್ಯಾಸಂಗದ ಖರ್ಚು ಸಹ ನಿರಾಣಿ ಸಮೂಹದಿಂದ ನೋಡಿಕೊಳ್ಳಲಾಗುವುದು ಎಂದು ಪಾಲಕರಿಗೆ ತಿಳಿಸಿದರು.</p>.<p>ಟ್ರ್ಯೂ ಆಲ್ಟ್ ವ್ಯವಸ್ಥಾಪಕ ನಿರ್ದೇಶಕ ವಿಜಯ ನಿರಾಣಿ ವಿದ್ಯಾರ್ಥಿನಿಗೆ ಶುಭ ಕೋರಿದರು. ಎಂ.ಆರ್.ಎನ್. ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ, ನಿರ್ದೇಶಕ ವಿಶಾಲ ನಿರಾಣಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>