ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುನಗುಂದ ತಾಲ್ಲೂಕು ಗುಡೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯ ಅಕ್ಕಿ ವಶ

Last Updated 9 ಜುಲೈ 2018, 16:44 IST
ಅಕ್ಷರ ಗಾತ್ರ

ಬಾಗಲಕೋಟೆ:ಹುನಗುಂದ ತಾಲ್ಲೂಕಿನ ಗುಡೂರು(ಎಸ್.ಸಿ) ಗ್ರಾಮದಲ್ಲಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯದ 6 ಕ್ವಿಂಟಲ್‌ ಅಕ್ಕಿಯನ್ನು ತಹಶೀಲ್ದಾರ್ ಸುಭಾಸ ಸಂಪಗಾವಿ ನೇತೃತ್ವದಲ್ಲಿ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ.

ಗುಡೂರು ಗ್ರಾಮದ ಮಹಾಗುಂಡಪ್ಪ ಅಳವಂಡಿ ಎಂಬ ವ್ಯಕ್ತಿ ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಂದ ₹10ಕ್ಕೆ ಕೆ.ಜಿ ಅಕ್ಕಿ ಖರೀದಿಸಿ ₹12ಕ್ಕೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿಯಿಂದ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಷ್ಟೇ ಅಲ್ಲದೇ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡುತ್ತಿದ ಹೊಟೆಲ್‌ಗಳ ಮೇಲೆ ದಾಳಿ ಮಾಡಲಾಗಿದ್ದು, ಅಕ್ರಮ ಬಳಕೆಯ 6 ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ.

ತಹಶೀಲ್ದಾರ್ ಸುಭಾಸ ಸಂಪಗಾವಿ ಅವರ ನೇತೃತ್ವದ ದಾಳಿಯಲ್ಲಿ ,ಉಪ ತಹಶೀಲ್ದಾರ್ ಎಸ್.ಬಿ.ಕುಂದರಗಿ, ಗ್ರಾಮ ಲೆಕ್ಕಾಧಿಕಾರಿ ಎಸ್.ಸಿ.ಕೊಣ್ಣೂರು ಇದ್ದರು.

ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯದ ಅಕ್ಕಿ
ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯದ ಅಕ್ಕಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT