<p><strong>ಬಾಗಲಕೋಟೆ</strong>: ಇಲ್ಲಿನ ದಡ್ಡೆನ್ನವರ ಆಸ್ಪತ್ರೆ ಪಕ್ಕದಲ್ಲಿರುವ ಬಡಾವಣೆಯಲ್ಲಿ ಅನುಮತಿ ಇಲ್ಲದಿದ್ದರೂ ನಿರ್ಮಿಸುತ್ತಿರುವ ಮಸೀದಿ ನಿರ್ಮಾಣ ಕಾರ್ಯವನ್ನು ತಡೆಯಬೇಕು ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಈಗಾಗಲೇ ಅನೇಕ ಬಾರಿ ಮನವಿ ಸಲ್ಲಿಸಿದರೂ ತಡೆದಿಲ್ಲ. ಮಸೀದಿ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ನಗರಸಭೆಯಲ್ಲಿ ಇದಕ್ಕೆ ಅನುಮತಿ ದೊರೆತಿಲ್ಲ. ಹತ್ತಿರದಲ್ಲೇ ಆಸ್ಪತ್ರೆ, ಶಾಲಾ–ಕಾಲೇಜು, ಜನ ವಸತಿಗಳಿವೆ. ಧ್ವನಿವರ್ಧಕದಿಂದ ಆಸ್ಪತ್ರೆ ರೋಗಿಗಳಿಗೆ ತೊಂದರೆಯಾಗಲಿದೆ ಎಂದು ಮನವಿಯಲ್ಲಿ ದೂರಿದ್ದಾರೆ.</p>.<p>ವಿದ್ಯಾಗಿರಿಯ ನಾಲ್ಕನೇ ರಸ್ತೆ, ಆಶ್ರಯ ಬಡಾವಣೆ, ಕೊಳಚೆ ನಿರ್ಮೂಲನಾ ಮಂಡಳಿ ಸೇರಿದಂತೆ ಹಲವು ಕಡೆಗಳಲ್ಲಿ ಅಕ್ರಮವಾಗಿ ಶೆಡ್ಗಳನ್ನು ನಿರ್ಮಿಸಲಾಗುತ್ತಿದೆ. ಕೂಡಲೇ ನಗರಸಭೆ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಕುಮಾರಸ್ವಾಮಿ ಹಿರೇಮಠ, ಮಸೀದಿ ಕುರಿತು ತೀರ್ಮಾನ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಗರಸಭೆಯ ಎಲ್ಲ ಪಕ್ಷದ ಸದಸ್ಯರೂ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು. ಕ್ರಮಕೈಗೊಳ್ಳದಿದ್ದರೆ ನಗರಸಭೆ ಅಧ್ಯಕ್ಷೆ ಮನೆ ಹಾಗೂ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ನಗರಸಭೆ ಪೌರಾಯುಕ್ತ ವಾಸಣ್ಣ ಮಾತನಾಡಿ, ವೀಕ್ಷಣೆಗೆ ಅಧಿಕಾರಿಗಳನ್ನು ಕಳುಹಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ನಗರಸಭೆ ಸದಸ್ಯರಾದ ಶಶಿಕಲಾ ಮಜ್ಜಗಿ, ಸ್ಮಿತಾ ಪವಾರ್, ಮುಖಂಡ ಈರಣ್ಣ ಲಾಯಗುಂದಿ, ಸುರೇಶ ಮಜ್ಜಗಿ, ನಾಗರಾಜ ಅಂಬಿಗೇರ, ಚಂದ್ರು ರಾಮವಾಡಗಿ, ನಾಗರಾಜ ಹೊರಕೇರ, ಶಂಕರ ಕದಂ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಇಲ್ಲಿನ ದಡ್ಡೆನ್ನವರ ಆಸ್ಪತ್ರೆ ಪಕ್ಕದಲ್ಲಿರುವ ಬಡಾವಣೆಯಲ್ಲಿ ಅನುಮತಿ ಇಲ್ಲದಿದ್ದರೂ ನಿರ್ಮಿಸುತ್ತಿರುವ ಮಸೀದಿ ನಿರ್ಮಾಣ ಕಾರ್ಯವನ್ನು ತಡೆಯಬೇಕು ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಈಗಾಗಲೇ ಅನೇಕ ಬಾರಿ ಮನವಿ ಸಲ್ಲಿಸಿದರೂ ತಡೆದಿಲ್ಲ. ಮಸೀದಿ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ನಗರಸಭೆಯಲ್ಲಿ ಇದಕ್ಕೆ ಅನುಮತಿ ದೊರೆತಿಲ್ಲ. ಹತ್ತಿರದಲ್ಲೇ ಆಸ್ಪತ್ರೆ, ಶಾಲಾ–ಕಾಲೇಜು, ಜನ ವಸತಿಗಳಿವೆ. ಧ್ವನಿವರ್ಧಕದಿಂದ ಆಸ್ಪತ್ರೆ ರೋಗಿಗಳಿಗೆ ತೊಂದರೆಯಾಗಲಿದೆ ಎಂದು ಮನವಿಯಲ್ಲಿ ದೂರಿದ್ದಾರೆ.</p>.<p>ವಿದ್ಯಾಗಿರಿಯ ನಾಲ್ಕನೇ ರಸ್ತೆ, ಆಶ್ರಯ ಬಡಾವಣೆ, ಕೊಳಚೆ ನಿರ್ಮೂಲನಾ ಮಂಡಳಿ ಸೇರಿದಂತೆ ಹಲವು ಕಡೆಗಳಲ್ಲಿ ಅಕ್ರಮವಾಗಿ ಶೆಡ್ಗಳನ್ನು ನಿರ್ಮಿಸಲಾಗುತ್ತಿದೆ. ಕೂಡಲೇ ನಗರಸಭೆ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಕುಮಾರಸ್ವಾಮಿ ಹಿರೇಮಠ, ಮಸೀದಿ ಕುರಿತು ತೀರ್ಮಾನ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಗರಸಭೆಯ ಎಲ್ಲ ಪಕ್ಷದ ಸದಸ್ಯರೂ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು. ಕ್ರಮಕೈಗೊಳ್ಳದಿದ್ದರೆ ನಗರಸಭೆ ಅಧ್ಯಕ್ಷೆ ಮನೆ ಹಾಗೂ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ನಗರಸಭೆ ಪೌರಾಯುಕ್ತ ವಾಸಣ್ಣ ಮಾತನಾಡಿ, ವೀಕ್ಷಣೆಗೆ ಅಧಿಕಾರಿಗಳನ್ನು ಕಳುಹಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ನಗರಸಭೆ ಸದಸ್ಯರಾದ ಶಶಿಕಲಾ ಮಜ್ಜಗಿ, ಸ್ಮಿತಾ ಪವಾರ್, ಮುಖಂಡ ಈರಣ್ಣ ಲಾಯಗುಂದಿ, ಸುರೇಶ ಮಜ್ಜಗಿ, ನಾಗರಾಜ ಅಂಬಿಗೇರ, ಚಂದ್ರು ರಾಮವಾಡಗಿ, ನಾಗರಾಜ ಹೊರಕೇರ, ಶಂಕರ ಕದಂ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>