<p><strong>ಬಾಗಲಕೋಟೆ</strong>: ನಗರದ ಚರಂತಿಮಠ ಶಿವಾನುಭವ ಮಂಟಪದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಸ್. ಪಾವಟೆ ಅವರಿಗೆ ಶರಣ ಸಾಹಿತ್ಯ ದೀಪಕ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಬಾಗಲಕೋಟೆ ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಶರಣ ಸಾಹಿತ್ಯ ಪರಿಷತ್, ಶಿವಾನುಭವ ಸಮಿತಿ ಮತ್ತು ಕದಳಿ ಮಹಿಳಾ ವೇದಿಕೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಎಚ್.ಜಿ. ಮೃತ್ಯುಂಜಯ ಪ್ರತಿಷ್ಠಾನ, ಕೊಡಮಾಡುವ ಪ್ರಶಸ್ತಿಯನ್ನು ಪಾವಟೆ ಅವರು ಸ್ವೀಕರಿಸಿದರು.</p>.<p>ಇದೇ ಸಂದರ್ಭದಲ್ಲಿ ಎ.ಎಸ್.ಪಾವಟೆ ಅವರ ಕೃತಿ ‘ವಚನ ವಿಹಾರ-1’ ಬಿಡುಗಡೆ ಮಾಡಿ ಮಾತನಾಡಿದ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಪಾವಟೆ ಅವರ ಶರಣ ಸೇವೆ ಸಾರ್ಥಕವಾಗಿದೆ ಎಂದರು.</p>.<p>ಪ್ರಶಸ್ತಿ ಸ್ವೀಕರಿಸಿ ಎ.ಎಸ್. ಪಾವಟೆ ಮಾತನಾಡಿ, ಮನೆತನದ ಸಂಸ್ಕಾರ, ಬಿವಿವಿ ಸಂಘ ಮತ್ತು ಚರಂತಿಮಠದ ಶ್ರೀಗ ಸಾಮೀಪ್ಯದಿಂದಾಗಿ ಶರಣ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು ಎಂದರು.</p>.<p>ಚರಂತಿಮಠದ ಪ್ರಭು ಸ್ವಾಮೀಜಿ, ಯರನಾಳದ ಗುರುಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ.ದಯಾನಂದ ನೂಲಿ, ‘ಇಷ್ಟಲಿಂಗದ ವ್ಶೆಜ್ಞಾನಿಕ ಪರಿಕಲ್ಪನೆ’ ಕುರಿತು ಉಪನ್ಯಾಸ ನೀಡಿದರು. ಇಷ್ಟಲಿಂಗ ಪೂಜೆ, ನಿರೀಕ್ಷಣೆಯಿಂದಾಗುವ ಶಾರೀರಿಕ, ಮಾನಸಿಕ ಸ್ವಾಸ್ಥ್ಯಗಳನ್ನು ದೃಶ್ಯ ಮಾಧ್ಯಮದ ಮೂಲಕ ವಿವರಿಸಿದರು.</p>.<p>ಶಸಾಪ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟರ್, ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಎಚ್.ಎಚ್. ಶೆಟ್ಟರ್, ಪಂಡಿತ ಅರಬ್ಬಿ, ಕಸಾಪ ಜಿಲ್ಲಾ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ತಾಲ್ಲೂಕು ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಬಸವರಾಜ ಮುಕ್ಕುಪ್ಪಿ, ಸುಮಿತ್ರಾಬಾಯಿ ಹಿರೇಮಠ, ರಾಜೇಶ್ವರಿ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ನಗರದ ಚರಂತಿಮಠ ಶಿವಾನುಭವ ಮಂಟಪದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಸ್. ಪಾವಟೆ ಅವರಿಗೆ ಶರಣ ಸಾಹಿತ್ಯ ದೀಪಕ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಬಾಗಲಕೋಟೆ ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಶರಣ ಸಾಹಿತ್ಯ ಪರಿಷತ್, ಶಿವಾನುಭವ ಸಮಿತಿ ಮತ್ತು ಕದಳಿ ಮಹಿಳಾ ವೇದಿಕೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಎಚ್.ಜಿ. ಮೃತ್ಯುಂಜಯ ಪ್ರತಿಷ್ಠಾನ, ಕೊಡಮಾಡುವ ಪ್ರಶಸ್ತಿಯನ್ನು ಪಾವಟೆ ಅವರು ಸ್ವೀಕರಿಸಿದರು.</p>.<p>ಇದೇ ಸಂದರ್ಭದಲ್ಲಿ ಎ.ಎಸ್.ಪಾವಟೆ ಅವರ ಕೃತಿ ‘ವಚನ ವಿಹಾರ-1’ ಬಿಡುಗಡೆ ಮಾಡಿ ಮಾತನಾಡಿದ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಪಾವಟೆ ಅವರ ಶರಣ ಸೇವೆ ಸಾರ್ಥಕವಾಗಿದೆ ಎಂದರು.</p>.<p>ಪ್ರಶಸ್ತಿ ಸ್ವೀಕರಿಸಿ ಎ.ಎಸ್. ಪಾವಟೆ ಮಾತನಾಡಿ, ಮನೆತನದ ಸಂಸ್ಕಾರ, ಬಿವಿವಿ ಸಂಘ ಮತ್ತು ಚರಂತಿಮಠದ ಶ್ರೀಗ ಸಾಮೀಪ್ಯದಿಂದಾಗಿ ಶರಣ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು ಎಂದರು.</p>.<p>ಚರಂತಿಮಠದ ಪ್ರಭು ಸ್ವಾಮೀಜಿ, ಯರನಾಳದ ಗುರುಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ.ದಯಾನಂದ ನೂಲಿ, ‘ಇಷ್ಟಲಿಂಗದ ವ್ಶೆಜ್ಞಾನಿಕ ಪರಿಕಲ್ಪನೆ’ ಕುರಿತು ಉಪನ್ಯಾಸ ನೀಡಿದರು. ಇಷ್ಟಲಿಂಗ ಪೂಜೆ, ನಿರೀಕ್ಷಣೆಯಿಂದಾಗುವ ಶಾರೀರಿಕ, ಮಾನಸಿಕ ಸ್ವಾಸ್ಥ್ಯಗಳನ್ನು ದೃಶ್ಯ ಮಾಧ್ಯಮದ ಮೂಲಕ ವಿವರಿಸಿದರು.</p>.<p>ಶಸಾಪ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟರ್, ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಎಚ್.ಎಚ್. ಶೆಟ್ಟರ್, ಪಂಡಿತ ಅರಬ್ಬಿ, ಕಸಾಪ ಜಿಲ್ಲಾ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ತಾಲ್ಲೂಕು ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಬಸವರಾಜ ಮುಕ್ಕುಪ್ಪಿ, ಸುಮಿತ್ರಾಬಾಯಿ ಹಿರೇಮಠ, ರಾಜೇಶ್ವರಿ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>