<p><strong>ಮುಧೋಳ:</strong> ಗ್ರಾಮ ಪಂಚಾಯ್ತಿ, ಆಶಾ, ಅಂಗನವಾಡಿ, ಬಿಸಿಯೂಟ ಸಿಬ್ಬಂದಿಯ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಾಲ್ಲೂಕು ಸಿಬ್ಬಂದಿಗಳ ಒಕ್ಕೂಟದ ಪದಾಧಿಕಾರಿಗಳು ತಾಲ್ಲೂಕು ಪಂಚಾಯ್ತಿ ಇಒ ಅವರ ಮೂಲಕ ಮನವಿ ಸಲ್ಲಿಸಿದರು.</p>.<p>ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಮನಗಾಂವಿ, ಪಂಚಾಯ್ತಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆಯಾಗಿಲ್ಲ ಹಾಗೂ ಅನುದಾನ ಕಡಿತ ಸಹ ಮಾಡಲಾಗಿದೆ. ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರಲಾಗಿದೆ.</p>.<p>ಶಿಕ್ಷಣ, ಆರೋಗ್ಯ, ರೈಲ್ವೆ, ಹೆಸ್ಕಾಂ, ಬಿಸ್ಎನ್ಎಲ್, ವಿಮಾ ಬ್ಯಾಂಕ್ ಸೇರಿದಂತೆ ನಾನಾ ಇಲಾಖೆಗಳನ್ನು ಖಾಸಗೀಕರಣ ಮಾಡಬಾರದು. ಸಿಬ್ಬಂದಿ ಸಂಬಳ ನಿಯಮಿತವಾಗಿ ನೀಡಬೇಕೆಂದು ಒತ್ತಾಯಿಸಿದರು.</p>.<p>ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶರ್ಮಿಳಾ ಸ್ವಾಮಿ ಮಾತನಾಡಿ, ಎಲ್ಲ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು. ತಾಲ್ಲೂಕು ಪಂಚಾಯಿತಿ ಇಒ ಪರವಾಗಿ ಸಹಾಯಕ ನಿರ್ದೇಶಕ ವಿವೇಕ ಬಿರಾದಾರ ಮನವಿ ಸ್ವೀಕರಿಸಿದರು.</p>.<p>ಸುಭಾಸ ಹಾದಿಮನಿ, ಹನಮಂತ ಬಂದಿ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೀಲಾ ಮೆಳ್ಳಿಗೇರಿ, ರುಕ್ಸಾನಾ ನಾಗಠಾಣ, ಬಿಸಿಯೂಟ ಸಿಬ್ಬಂದಿ ಅಧ್ಯಕ್ಷೆ ಜ್ಯೋತಿ ಕಾಟೆ, ಮಾಲಾ ನಾಗರಾಳ, ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟದ ಅಧ್ಯಕ್ಷೆ ಶರ್ಮಿಳಾ ಸ್ವಾಮಿ, ಶಕುಂತಲಾ ಕಾಳವಾರ ನೂರಾರು ಜನರ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ:</strong> ಗ್ರಾಮ ಪಂಚಾಯ್ತಿ, ಆಶಾ, ಅಂಗನವಾಡಿ, ಬಿಸಿಯೂಟ ಸಿಬ್ಬಂದಿಯ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಾಲ್ಲೂಕು ಸಿಬ್ಬಂದಿಗಳ ಒಕ್ಕೂಟದ ಪದಾಧಿಕಾರಿಗಳು ತಾಲ್ಲೂಕು ಪಂಚಾಯ್ತಿ ಇಒ ಅವರ ಮೂಲಕ ಮನವಿ ಸಲ್ಲಿಸಿದರು.</p>.<p>ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಮನಗಾಂವಿ, ಪಂಚಾಯ್ತಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆಯಾಗಿಲ್ಲ ಹಾಗೂ ಅನುದಾನ ಕಡಿತ ಸಹ ಮಾಡಲಾಗಿದೆ. ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರಲಾಗಿದೆ.</p>.<p>ಶಿಕ್ಷಣ, ಆರೋಗ್ಯ, ರೈಲ್ವೆ, ಹೆಸ್ಕಾಂ, ಬಿಸ್ಎನ್ಎಲ್, ವಿಮಾ ಬ್ಯಾಂಕ್ ಸೇರಿದಂತೆ ನಾನಾ ಇಲಾಖೆಗಳನ್ನು ಖಾಸಗೀಕರಣ ಮಾಡಬಾರದು. ಸಿಬ್ಬಂದಿ ಸಂಬಳ ನಿಯಮಿತವಾಗಿ ನೀಡಬೇಕೆಂದು ಒತ್ತಾಯಿಸಿದರು.</p>.<p>ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶರ್ಮಿಳಾ ಸ್ವಾಮಿ ಮಾತನಾಡಿ, ಎಲ್ಲ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು. ತಾಲ್ಲೂಕು ಪಂಚಾಯಿತಿ ಇಒ ಪರವಾಗಿ ಸಹಾಯಕ ನಿರ್ದೇಶಕ ವಿವೇಕ ಬಿರಾದಾರ ಮನವಿ ಸ್ವೀಕರಿಸಿದರು.</p>.<p>ಸುಭಾಸ ಹಾದಿಮನಿ, ಹನಮಂತ ಬಂದಿ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೀಲಾ ಮೆಳ್ಳಿಗೇರಿ, ರುಕ್ಸಾನಾ ನಾಗಠಾಣ, ಬಿಸಿಯೂಟ ಸಿಬ್ಬಂದಿ ಅಧ್ಯಕ್ಷೆ ಜ್ಯೋತಿ ಕಾಟೆ, ಮಾಲಾ ನಾಗರಾಳ, ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟದ ಅಧ್ಯಕ್ಷೆ ಶರ್ಮಿಳಾ ಸ್ವಾಮಿ, ಶಕುಂತಲಾ ಕಾಳವಾರ ನೂರಾರು ಜನರ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>