ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Last Updated 29 ಮಾರ್ಚ್ 2022, 1:59 IST
ಅಕ್ಷರ ಗಾತ್ರ

ಬಾದಾಮಿ: 11 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲ್ಲೂಕು ಘಟಕದ ಆಶಾ ಕಾರ್ಯಕರ್ತೆಯರು ಸೋಮವಾರ ಪ್ರತಿಭಟಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಎಐಯುಟಿಯುಸಿ ಆಶ್ರಯದಲ್ಲಿ ತಾಲ್ಲೂಕು ಘಟಕದ ಆಶಾ ಕಾರ್ಯಕರ್ತೆಯರು ತಾಲ್ಲೂಕು ಆಡಳಿತ ಕಾರ್ಯಾಲಯದ ಬಳಿ ಪ್ರತಿಭಟಿಸಿದರು.

ರಾಜ್ಯ ಮಟ್ಟದಲ್ಲಿ ಎರಡು ಬಾರಿ ಪ್ರತಿಭಟಿಸಿ ಮನವಿ ಸಲ್ಲಿಸಿದರೂ ಸರ್ಕಾರ ಬೇಡಿಕೆಗಳನ್ನು ಈಡೇರಿಸಲಿಲ್ಲ. ಗೌರವ ಧನ ₹ 2000 ಬದಲಿಗೆ ₹ 1,000 ಹೆಚ್ಚಿಸಿದ್ದಾರೆ. ಆದರೆ ಇನ್ನುಳಿದ 11 ಪ್ರಮಖ ಬೇಡಿಕೆಗಳನ್ನು ಸರ್ಕಾರ ಕಡೆಗೆಣಿಸಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕು ಘಟಕದ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೈಲಾ ಕರಿಗಾರ ಮನವಿ ಸಲ್ಲಿಸಿದರು. ತಾಲ್ಲೂಕಿನ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT