<p><strong>ಬಾದಾಮಿ:</strong> ‘ತಾಲ್ಲೂಕಿನ ಉಗಲವಾಟ ಗ್ರಾಮದಲ್ಲಿದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಸೆ.24ರಂದು ಬಾದಾಮಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ’ ಎಂದು ದಲಿತ ಮುಖಂಡ ರುದ್ರೇಶ ಹುಣಸಿಗಿಡದ ಹೇಳಿದರು.</p>.<p>ಗ್ರಾಮದಲ್ಲಿ ದಲಿತರ ಮೇಲೆ ಬಹಿಷ್ಕಾರ ಹಾಕಿದ ವ್ಯಕ್ತಿಗಳ ಮೇಲೆ ದೂರು ನೀಡಿದ್ದರೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಗುರುವಾರ ಪತ್ರಕರ್ತರಿಗೆ ತಿಳಿಸಿದರು.</p>.<p>‘ದಲಿತರ ಮೇಲೆ ಸಾಮಾಜಿಕ ಬಹಿಷ್ಕಾರ ಹಾಕಿರುವುದರಿಂದ ಅಂಗಡಿಯಲ್ಲಿ ದಿನಸಿ ವಸ್ತು ಕೊಡುವುದಿಲ್ಲ ಕೆಲಸಕ್ಕೆ ಕರೆಯುತ್ತಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಕೆಲವರು ಗ್ರಾಮದಲ್ಲಿ ಇದ್ದಾರೆ. ಇದುವರೆಗೂ ಅವರನ್ನು ಬಂಧಿಸಿಲ್ಲ. ಬದುಕಲು ದಲಿತರಿಗೆ ಭಯದ ವಾತಾವರಣ ಉಂಟಾಗಿದೆ ’ ಎಂದು ಮಂಜುನಾಥ ಮಾದರ ಹೇಳಿದರು.</p>.<p>ಯಲ್ಲಪ್ಪ ಮಾದರ, ಮಲ್ಲಪ್ಪ ಮಾದರ, ಹೊಳಿಯಪ್ಪ ಮಾದರ, ಕನಕಪ್ಪ ಮಾದರ, ರಂಗನಾಥ ಕಾತರಕಿ, ಬಸವರಾಜ ಮಾದರ, ಹೊಳಿಯಪ್ಪ ಭೋವಿ. ಸಿ.ಬಿ. ತೆಳಗಿಮನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ತಾಲ್ಲೂಕಿನ ಉಗಲವಾಟ ಗ್ರಾಮದಲ್ಲಿದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಸೆ.24ರಂದು ಬಾದಾಮಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ’ ಎಂದು ದಲಿತ ಮುಖಂಡ ರುದ್ರೇಶ ಹುಣಸಿಗಿಡದ ಹೇಳಿದರು.</p>.<p>ಗ್ರಾಮದಲ್ಲಿ ದಲಿತರ ಮೇಲೆ ಬಹಿಷ್ಕಾರ ಹಾಕಿದ ವ್ಯಕ್ತಿಗಳ ಮೇಲೆ ದೂರು ನೀಡಿದ್ದರೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಗುರುವಾರ ಪತ್ರಕರ್ತರಿಗೆ ತಿಳಿಸಿದರು.</p>.<p>‘ದಲಿತರ ಮೇಲೆ ಸಾಮಾಜಿಕ ಬಹಿಷ್ಕಾರ ಹಾಕಿರುವುದರಿಂದ ಅಂಗಡಿಯಲ್ಲಿ ದಿನಸಿ ವಸ್ತು ಕೊಡುವುದಿಲ್ಲ ಕೆಲಸಕ್ಕೆ ಕರೆಯುತ್ತಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಕೆಲವರು ಗ್ರಾಮದಲ್ಲಿ ಇದ್ದಾರೆ. ಇದುವರೆಗೂ ಅವರನ್ನು ಬಂಧಿಸಿಲ್ಲ. ಬದುಕಲು ದಲಿತರಿಗೆ ಭಯದ ವಾತಾವರಣ ಉಂಟಾಗಿದೆ ’ ಎಂದು ಮಂಜುನಾಥ ಮಾದರ ಹೇಳಿದರು.</p>.<p>ಯಲ್ಲಪ್ಪ ಮಾದರ, ಮಲ್ಲಪ್ಪ ಮಾದರ, ಹೊಳಿಯಪ್ಪ ಮಾದರ, ಕನಕಪ್ಪ ಮಾದರ, ರಂಗನಾಥ ಕಾತರಕಿ, ಬಸವರಾಜ ಮಾದರ, ಹೊಳಿಯಪ್ಪ ಭೋವಿ. ಸಿ.ಬಿ. ತೆಳಗಿಮನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>