ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಳಲಿ: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ

ಕ್ವಾರೆಂಟೈನ್‌ಗೆ ಮಹಿಳೆಯನ್ನು ಕರೆತರಲು ಹೋದಾಗ ಘಟನೆ
Last Updated 21 ಮೇ 2020, 14:49 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆಯನ್ನು ಕ್ವಾರೆಂಟೈನ್‌ಗೆ ಒಳಪಡಿಸಲು ಕರೆತರಲು ಹೋಗಿದ್ದ ಆಶಾ ಕಾರ್ಯಕರ್ತೆಯ ಮೇಲೆ ಗುರುವಾರ ಹಲ್ಲೆ ನಡೆಸಲಾಗಿದೆ.

ಗ್ರಾಮಕ್ಕೆ ಮಹಾರಾಷ್ಟ್ರದ ಸಾಂಗ್ಲಿಯಿಂದ ಮಹಿಳೆಯೊಬ್ಬರು ತವರಿಗೆ ಬಂದಿರುವ ಸುದ್ದಿ ತಿಳಿದು ಆಶಾ ಕಾರ್ಯಕರ್ತೆ ಜ್ಯೋತಿ ಪೋಳ ಅವರ ಮನೆಗೆ ತೆರಳಿದ್ದಾರೆ. ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾದಾಗ ಆಕೆಯ ಸಹೋದರ ವಿಠ್ಠಲ ಎಂಬುವವರು ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಹಲ್ಲೆಯಿಂದ ಗಾಯಗೊಂಡ ಜ್ಯೋತಿ ಅವರನ್ನು ಮುಧೋಳ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT