<p><strong>ಬಾಗಲಕೋಟೆ:</strong> ‘ಬಾದಾಮಿ ಮಾತ್ರವಲ್ಲ, ರಾಜ್ಯದ ಇನ್ನೂ ಐದಾರು ಕಡೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಂತಿಮವಾಗಿ ಹೈಕಮಾಂಡ್ನವರು ಎಲ್ಲಿ ನಿಲ್ಲಲು ಹೇಳುವರೋ ಅಲ್ಲಿ ಸ್ಪರ್ಧಿಸುವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಗುಳೇದಗುಡ್ಡ ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾದಾಮಿಯವರೂ ಕರೀತಾರೆ, ಚಾಮರಾಜಪೇಟೆ, ಕೊಪ್ಪಳ, ಕೋಲಾರ, ಹುಣಸೂರು, ಚಿಕ್ಕನಾಯಕಹಳ್ಳಿಯವರೂ ಕರೆಯುತ್ತಿದ್ದಾರೆ. ಆದರೆ ಎಲ್ಲಿ ನಿಲ್ಲಬೇಕು ಎಂಬುದರ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ’ ಎಂದರು.</p>.<p>‘ಚುನಾವಣೆ ಸಂದರ್ಭದಲ್ಲಿ ನಾನು ರಾಜ್ಯದ ತುಂಬೆಲ್ಲ ಓಡಾಡಿ ಪ್ರಚಾರ ಮಾಡಬೇಕಿದೆ. ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವೆ’ ಎಂದರು. ಆಗ ಸ್ಥಳದಲ್ಲಿದ್ದ ಬೆಂಬಲಿಗರು, ‘ನಮಗೆ ನೀವೇ ಹೈಕಮಾಂಡ್. ಬಾದಾಮಿಯಿಂದಲೇ ಸ್ಪರ್ಧಿಸಿ’ ಎಂದು ಒತ್ತಾಯಿಸಿದರು. ‘ನಿಮ್ಮ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡಿರುತ್ತೇನೆ’ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಬಾದಾಮಿ ಮಾತ್ರವಲ್ಲ, ರಾಜ್ಯದ ಇನ್ನೂ ಐದಾರು ಕಡೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಂತಿಮವಾಗಿ ಹೈಕಮಾಂಡ್ನವರು ಎಲ್ಲಿ ನಿಲ್ಲಲು ಹೇಳುವರೋ ಅಲ್ಲಿ ಸ್ಪರ್ಧಿಸುವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಗುಳೇದಗುಡ್ಡ ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾದಾಮಿಯವರೂ ಕರೀತಾರೆ, ಚಾಮರಾಜಪೇಟೆ, ಕೊಪ್ಪಳ, ಕೋಲಾರ, ಹುಣಸೂರು, ಚಿಕ್ಕನಾಯಕಹಳ್ಳಿಯವರೂ ಕರೆಯುತ್ತಿದ್ದಾರೆ. ಆದರೆ ಎಲ್ಲಿ ನಿಲ್ಲಬೇಕು ಎಂಬುದರ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ’ ಎಂದರು.</p>.<p>‘ಚುನಾವಣೆ ಸಂದರ್ಭದಲ್ಲಿ ನಾನು ರಾಜ್ಯದ ತುಂಬೆಲ್ಲ ಓಡಾಡಿ ಪ್ರಚಾರ ಮಾಡಬೇಕಿದೆ. ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವೆ’ ಎಂದರು. ಆಗ ಸ್ಥಳದಲ್ಲಿದ್ದ ಬೆಂಬಲಿಗರು, ‘ನಮಗೆ ನೀವೇ ಹೈಕಮಾಂಡ್. ಬಾದಾಮಿಯಿಂದಲೇ ಸ್ಪರ್ಧಿಸಿ’ ಎಂದು ಒತ್ತಾಯಿಸಿದರು. ‘ನಿಮ್ಮ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡಿರುತ್ತೇನೆ’ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>