ಈಗ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರೋಗಿಗಳಿಗೆ ಊಟೋಪಹಾರದ ಜೊತೆಗೆ ಕಷಾಯ, ಹಣ್ಣು, ಸೂಪ್, ಗಂಜಿ, ಮೊಟ್ಟೆ, ಮೊಸರು ಕೊಡಲಾಗುತ್ತಿದೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ರೋಗಿಗಳನ್ನು ನೆಲದ ಮೇಲೆ ಮಲಗಿಸಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರ. ಎಲ್ಲರಿಗೂ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.