ಬಾಗಲಕೋಟೆ: ಆರ್ಎಸ್ಎಸ್ ಹಾಗೂ ಚಡ್ಡಿ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಟೀಕೆ ಯಾರಿಗೂ ಶೋಭೆ ತರುವಂತಹದಲ್ಲ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿರೋಧ ಪಕ್ಷದ ನಾಯಕರಾಗಿ ಗೌರವದಿಂದ ನಡೆದುಕೊಳ್ಳುತ್ತಾರೆ ಎಂಬ ನಿರೀಕ್ಷೆ ಮಾಡಿದ್ವಿ. ಈಗ ಅವರು ಮಾಡುತ್ತಿರುವ ಟೀಕೆಯಿಂದ ಅವರಿಗಿರುವ ಗೌರವವು ಹಾಳಾಗುತ್ತದೆ ಎಂದರು.
ಪಠ್ಯ ಪರಿಷ್ಕರಣೆಯಲ್ಲಿ ಲೋಪಗಳಾಗಿದ್ದರೆ, ಸರಿಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು