<p><strong>ಬಾಗಲಕೋಟೆ:</strong> 'ರಾಜ್ಯದಲ್ಲಿ ಕೃಷಿಗೆ ಉಪಯುಕ್ತವಲ್ಲದ ಸವಳು–ಜವಳು ಭೂಮಿಯನ್ನು ಮೀನುಗಾರಿಕೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಹೀಗೆ ಲಭ್ಯವಿರುವ ಜಮೀನಿನ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‘ ಎಂದು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಹೀಗೆ ಗುರುತಿಸಿದ ಸವಳು–ಜವಳು ಭೂಮಿಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗುತ್ತದೆ. ಆ ಬಗ್ಗೆ ಕಾಲಮಿತಿಯಲ್ಲಿಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಬುಧವಾರ ಇಲ್ಲಿ ತಿಳಿಸಿದರು.</p>.<p>ರೈತರಿಗೆ ಸಿಗುವ ಸವಲತ್ತುಗಳು ಮೀನುಗಾರರಿಗೂ ಸಿಗುವಂತಾಗಲು ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುತ್ತಿದೆ. ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 200 ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ. ಕಾರ್ಡ್ ಹೊಂದಿದ ಮೀನುಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ₹3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ ಎಂದರು.</p>.<p>ಕಿಸಾನ್ ಕಾರ್ಡ್ಗಾಗಿ ಸಲ್ಲಿಸಿದ ಅರ್ಜಿಯನ್ನು ಒಂದು ತಿಂಗಳೊಳಗಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> 'ರಾಜ್ಯದಲ್ಲಿ ಕೃಷಿಗೆ ಉಪಯುಕ್ತವಲ್ಲದ ಸವಳು–ಜವಳು ಭೂಮಿಯನ್ನು ಮೀನುಗಾರಿಕೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಹೀಗೆ ಲಭ್ಯವಿರುವ ಜಮೀನಿನ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‘ ಎಂದು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಹೀಗೆ ಗುರುತಿಸಿದ ಸವಳು–ಜವಳು ಭೂಮಿಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗುತ್ತದೆ. ಆ ಬಗ್ಗೆ ಕಾಲಮಿತಿಯಲ್ಲಿಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಬುಧವಾರ ಇಲ್ಲಿ ತಿಳಿಸಿದರು.</p>.<p>ರೈತರಿಗೆ ಸಿಗುವ ಸವಲತ್ತುಗಳು ಮೀನುಗಾರರಿಗೂ ಸಿಗುವಂತಾಗಲು ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುತ್ತಿದೆ. ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 200 ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ. ಕಾರ್ಡ್ ಹೊಂದಿದ ಮೀನುಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ₹3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ ಎಂದರು.</p>.<p>ಕಿಸಾನ್ ಕಾರ್ಡ್ಗಾಗಿ ಸಲ್ಲಿಸಿದ ಅರ್ಜಿಯನ್ನು ಒಂದು ತಿಂಗಳೊಳಗಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>