<p><strong>ಬಾದಾಮಿ:</strong> ‘ಭಾರತೀಯ ಜನತಾ ಪಕ್ಷವನ್ನು ಕಾರ್ಯಕರ್ತರು ಬೂತ್ ಮಟ್ಟ, ಶಕ್ತಿ ಮತ್ತು ಮಹಾಶಕ್ತಿ ಮಟ್ಟದಲ್ಲಿ ಗಟ್ಟಿಗೊಳಿಸಿ. ಪಕ್ಷದಲ್ಲಿನ ಶಿಸ್ತು ಮತ್ತು ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್.ರವಿ ಕುಮಾರ ಹೇಳಿದರು.</p>.<p>ಮಹಾಕೂಟದಲ್ಲಿ ಸೋಮವಾರ ನಡೆದ ಪಂ.ದೀನದಯಾಳ್ ಉಪಾ ಧ್ಯಾಯ ಪ್ರಶಿಕ್ಷಣ ಅಭಿಯಾನದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪಕ್ಷದ ಸಂಘಟನೆಯಲ್ಲಿ ತೊಡಗಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಗೌರವ ವಿದೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮನೆಗೆಲಸ ಮಾಡುವ ಮಹಿಳೆಯೊಬ್ಬರು ಶಾಸಕರಾಗಿ ಆಯ್ಕೆಯಾಗಿರುವುದನ್ನು ನೆನಪಿಸಿದರು.</p>.<p>ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಕುರಿತು ಬಾಗಲ ಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಶಾಸಕರಾದ ಸಿದ್ದು ಸವದಿ, ಶಶಿಕಲಾ ಜೊಲ್ಲೆ, ಮಾಜಿ ಶಾಸಕರಾದ ರಾಜಶೇಖರ್ ಶೀಲವಂತರ, ಎಂ.ಕೆ.ಪಟ್ಟಣಶೆಟ್ಟಿ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ ಮಾತನಾಡಿದರು.</p>.<p>ಮುಖಂಡಾದ ರಾಜು ನಾಯ್ಕರ್, ರಾಜು ಮುದೇನೂರ, ಸಿ.ಟಿ.ಉಪಾ ಧ್ಯಾಯ, ಭಾಗ್ಯ ಉದ್ನೂರ, ಮಲ್ಲಯ್ಯ ಮೂಗನೂರಮಠ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರು ಪ್ರಶಿಕ್ಷಣ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-19-1094483812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ಭಾರತೀಯ ಜನತಾ ಪಕ್ಷವನ್ನು ಕಾರ್ಯಕರ್ತರು ಬೂತ್ ಮಟ್ಟ, ಶಕ್ತಿ ಮತ್ತು ಮಹಾಶಕ್ತಿ ಮಟ್ಟದಲ್ಲಿ ಗಟ್ಟಿಗೊಳಿಸಿ. ಪಕ್ಷದಲ್ಲಿನ ಶಿಸ್ತು ಮತ್ತು ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್.ರವಿ ಕುಮಾರ ಹೇಳಿದರು.</p>.<p>ಮಹಾಕೂಟದಲ್ಲಿ ಸೋಮವಾರ ನಡೆದ ಪಂ.ದೀನದಯಾಳ್ ಉಪಾ ಧ್ಯಾಯ ಪ್ರಶಿಕ್ಷಣ ಅಭಿಯಾನದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪಕ್ಷದ ಸಂಘಟನೆಯಲ್ಲಿ ತೊಡಗಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಗೌರವ ವಿದೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮನೆಗೆಲಸ ಮಾಡುವ ಮಹಿಳೆಯೊಬ್ಬರು ಶಾಸಕರಾಗಿ ಆಯ್ಕೆಯಾಗಿರುವುದನ್ನು ನೆನಪಿಸಿದರು.</p>.<p>ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಕುರಿತು ಬಾಗಲ ಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಶಾಸಕರಾದ ಸಿದ್ದು ಸವದಿ, ಶಶಿಕಲಾ ಜೊಲ್ಲೆ, ಮಾಜಿ ಶಾಸಕರಾದ ರಾಜಶೇಖರ್ ಶೀಲವಂತರ, ಎಂ.ಕೆ.ಪಟ್ಟಣಶೆಟ್ಟಿ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ ಮಾತನಾಡಿದರು.</p>.<p>ಮುಖಂಡಾದ ರಾಜು ನಾಯ್ಕರ್, ರಾಜು ಮುದೇನೂರ, ಸಿ.ಟಿ.ಉಪಾ ಧ್ಯಾಯ, ಭಾಗ್ಯ ಉದ್ನೂರ, ಮಲ್ಲಯ್ಯ ಮೂಗನೂರಮಠ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರು ಪ್ರಶಿಕ್ಷಣ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-19-1094483812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>