<p><strong>ಬಾದಾಮಿ:</strong> ಚಾಲುಕ್ಯ ಉತ್ಸವ -2026ರ ಅಂಗವಾಗಿ ನಡೆದ ‘ಚಾಲುಕ್ಯ ನಡಿಗೆ ಸ್ಮಾರಕಗಳ ಕಡೆಗೆ’ ಯಶಸ್ವಿಯಾಗಿ ಸಂಭ್ರಮದಿಂದ ನಡೆಯಿತು.</p>.<p>ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಭಾನುವಾರ ಬೆಳಿಗ್ಗೆ ಸರ್ಕಾರಿ ಪ್ರೌಢ ಶಾಲೆಯಿಂದ ಗುಹಾಂತರ ದೇವಾಲಯಗಳವರೆಗೆ ನಡೆಯಿತು.</p>.<p>ಶಾಸಕ ಭೀಮಸೇನ ಚಿಮ್ಮನಕಟ್ಟಿ ‘ಚಾಲುಕ್ಯ ನಡಿಗೆ ಸ್ಮಾರಕಗಳ ಕಡೆಗೆ ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>‘ಮೇಣಬಸದಿಯಲ್ಲಿ ನಡೆದ ಸಮಾರಂಭದಲ್ಲಿ ಚಾಲುಕ್ಯರ ಸ್ಮಾರಕಗಳನ್ನು ಮುಂದಿನ ಪೀಳೆಗೆಗೆ ಸಂರಕ್ಷಿಸಬೇಕಿದೆ. ಗತವೈಭವದ ಸಾಮ್ರಾಜ್ಯದ ಇತಿಹಾಸದ ಬಗ್ಗೆ ನಮಗೆಲ್ಲ ಅಭಿಮಾನ ಇರಬೇಕು’ ಎಂದರು.</p>.<p>ಸ್ಥಳೀಯ ಗಣ್ಯರು, ಸರ್ಕಾರಿ ಇಲಾಖೆಗಳ ನೌಕರರು, ಶಾಲಾ ಕಾಲೇಜುಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಂದಾಜು ಮೂರು ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.</p>.<p>ಯುವಕರಿಗೆ ಸ್ಪರ್ಧೆ: ‘ಗ್ರಾಮೀಣ ಕ್ರೀಡೆಗಳು ಇಂದು ಮಾಯವಾಗುತ್ತಿವೆ. ಯುವಕರು ದೈಹಿಕವಾಗಿ ಸದೃಢರಾಗಲು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸಬೇಕು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಚಾಲನೆ ನೀಡಿದರು.</p>.<p>ಇಮ್ಮಡಿ ಪುಲಿಕೇಶಿ ವೇದಿಕೆಯ ಆವರಣದಲ್ಲಿ ಪುರುಷರಿಗೆ ಸಂಗ್ರಾಣಿ ಕಲ್ಲು, ಗುಂಡು ಕಲ್ಲು ಮತ್ತು ಭಾರದ ಚೀಲವನ್ನು ಎತ್ತುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಮತ್ತು ಜಿಲ್ಲೆಯ, ತಾಲ್ಲೂಕಿನ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ಚಾಲುಕ್ಯ ಉತ್ಸವ -2026ರ ಅಂಗವಾಗಿ ನಡೆದ ‘ಚಾಲುಕ್ಯ ನಡಿಗೆ ಸ್ಮಾರಕಗಳ ಕಡೆಗೆ’ ಯಶಸ್ವಿಯಾಗಿ ಸಂಭ್ರಮದಿಂದ ನಡೆಯಿತು.</p>.<p>ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಭಾನುವಾರ ಬೆಳಿಗ್ಗೆ ಸರ್ಕಾರಿ ಪ್ರೌಢ ಶಾಲೆಯಿಂದ ಗುಹಾಂತರ ದೇವಾಲಯಗಳವರೆಗೆ ನಡೆಯಿತು.</p>.<p>ಶಾಸಕ ಭೀಮಸೇನ ಚಿಮ್ಮನಕಟ್ಟಿ ‘ಚಾಲುಕ್ಯ ನಡಿಗೆ ಸ್ಮಾರಕಗಳ ಕಡೆಗೆ ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>‘ಮೇಣಬಸದಿಯಲ್ಲಿ ನಡೆದ ಸಮಾರಂಭದಲ್ಲಿ ಚಾಲುಕ್ಯರ ಸ್ಮಾರಕಗಳನ್ನು ಮುಂದಿನ ಪೀಳೆಗೆಗೆ ಸಂರಕ್ಷಿಸಬೇಕಿದೆ. ಗತವೈಭವದ ಸಾಮ್ರಾಜ್ಯದ ಇತಿಹಾಸದ ಬಗ್ಗೆ ನಮಗೆಲ್ಲ ಅಭಿಮಾನ ಇರಬೇಕು’ ಎಂದರು.</p>.<p>ಸ್ಥಳೀಯ ಗಣ್ಯರು, ಸರ್ಕಾರಿ ಇಲಾಖೆಗಳ ನೌಕರರು, ಶಾಲಾ ಕಾಲೇಜುಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಂದಾಜು ಮೂರು ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.</p>.<p>ಯುವಕರಿಗೆ ಸ್ಪರ್ಧೆ: ‘ಗ್ರಾಮೀಣ ಕ್ರೀಡೆಗಳು ಇಂದು ಮಾಯವಾಗುತ್ತಿವೆ. ಯುವಕರು ದೈಹಿಕವಾಗಿ ಸದೃಢರಾಗಲು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸಬೇಕು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಚಾಲನೆ ನೀಡಿದರು.</p>.<p>ಇಮ್ಮಡಿ ಪುಲಿಕೇಶಿ ವೇದಿಕೆಯ ಆವರಣದಲ್ಲಿ ಪುರುಷರಿಗೆ ಸಂಗ್ರಾಣಿ ಕಲ್ಲು, ಗುಂಡು ಕಲ್ಲು ಮತ್ತು ಭಾರದ ಚೀಲವನ್ನು ಎತ್ತುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಮತ್ತು ಜಿಲ್ಲೆಯ, ತಾಲ್ಲೂಕಿನ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>