<p><strong>ಬಾದಾಮಿ:</strong> ‘ಚಾಲುಕ್ಯರ ಪಟ್ಟಣ ಯಾವಾಗಲು ಸೌಹಾರ್ದದ ಶಾಂತಿಯ ನಾಡಾಗಿದೆ. ಹಬ್ಬದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಸಂಭ್ರಮದಿಂದ ಆಚರಿಸಿ’ ಎಂದು ತಹಶೀಲ್ದಾರ್ ಕಾವ್ಯಶ್ರೀ ಎಚ್. ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ಗಣೇಶೋತ್ಸವದ ಅಂಗವಾಗಿ ಪೊಲೀಸ್ ಇಲಾಖೆ ಹಮ್ಮಿಕೊಂಡ ಪೂರ್ವಭಾವಿ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮೆರವಣಿಗೆಯಲ್ಲಿ ಏನಾದರೂ ಗಲಭೆ ಗದ್ದಲ ಉಂಟಾದರೆ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಕೊಳ್ಳುವುದು. ಗಲಭೆಗೆ ಅವಕಾಶ ಕೊಡದೆ ಶಾಂತಿಯಿಂದ ಹಬ್ಬವನ್ನು ಆಚರಿಸಿ. ಪೊಲೀಸ್ ಇಲಾಖೆಯ ಜೊತೆಗೆ ಸಹಕರಿಸಿ ’ ಎಂದು ತಿಳಿಸಿದರು.</p>.<p>‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಿಯಿದ ಮೆರವಣಿಗೆಯಲ್ಲಿ ಡಿಜೆ ಬಳಸುವಂತಿಲ್ಲ. ಬಳಸಿದರೆ ಪ್ರಕರಣ ದಾಖಲಿಸಲಾಗುವುದು’ ಎಂದು ಡಿಎಸ್ಪಿ ವಿಶ್ವನಾಥ ಕುಲಕರ್ಣಿ ಎಚ್ಚರಿಕೆ ನೀಡಿದರು.</p>.<p>‘ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಘ ಸಂಸ್ಥೆಗಳಿಂದ ಸಾವಿರಕ್ಕೂ ಅಧಿಕ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಾಗುತ್ತವೆ. ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಕೊರತೆ ಇದೆ. ಗಜಾನನ ಸಮಿತಿ ಸದಸ್ಯರು ಪೊಲೀಸರ ಜೊತೆಗೆ ಸಹಕರಿಸಬೇಕು’ ಎಂದು ಸಿಪಿಐ ಕರಿಯಪ್ಪ ಬನ್ನೆ ಹೇಳಿದರು.</p>.<p>‘ಪಿಒಪಿ ಗಣಪತಿ ಮಾರಾಟ ನಿಷೇಧಿಸಲಾಗಿದೆ. ಮಣ್ಣಿನ ಗಣಪತಿಯನ್ನು ಮಾರಾಟ ಮಾಡಬೇಕು. ಗಣೇಶನ ಪ್ರತಿಷ್ಠಾಪನೆ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುವಂತಿಲ್ಲ. ರಾತ್ರಿ 10 ಕ್ಕೆ ಧ್ವನಿವರ್ಧಕ ಬಂದ್ ಮಾಡಬೇಕು’ ಎಂದು ಪಿಎಸ್ಐ ಹನುಮಂತ ನೇರಳೆ ಹೇಳಿದರು.</p>.<p>ಪ್ರೊಬೆಷನರಿ ಪಿಎಸ್ಐ ಮಂಜುನಾಥಗೌಡ, ಕೆಇಬಿ ಅಧಿಕಾರಿ ಬಿ.ಎಸ್.ಗುರಿಕಾರ, ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಅಶೋಕ ಕೋರಿ, ಅಗ್ನಿಶಾಮಕ, ಪುರಸಭೆ ಅಧಿಕಾರಿಗಳು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಗಣೇಶ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ಚಾಲುಕ್ಯರ ಪಟ್ಟಣ ಯಾವಾಗಲು ಸೌಹಾರ್ದದ ಶಾಂತಿಯ ನಾಡಾಗಿದೆ. ಹಬ್ಬದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಸಂಭ್ರಮದಿಂದ ಆಚರಿಸಿ’ ಎಂದು ತಹಶೀಲ್ದಾರ್ ಕಾವ್ಯಶ್ರೀ ಎಚ್. ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ಗಣೇಶೋತ್ಸವದ ಅಂಗವಾಗಿ ಪೊಲೀಸ್ ಇಲಾಖೆ ಹಮ್ಮಿಕೊಂಡ ಪೂರ್ವಭಾವಿ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮೆರವಣಿಗೆಯಲ್ಲಿ ಏನಾದರೂ ಗಲಭೆ ಗದ್ದಲ ಉಂಟಾದರೆ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಕೊಳ್ಳುವುದು. ಗಲಭೆಗೆ ಅವಕಾಶ ಕೊಡದೆ ಶಾಂತಿಯಿಂದ ಹಬ್ಬವನ್ನು ಆಚರಿಸಿ. ಪೊಲೀಸ್ ಇಲಾಖೆಯ ಜೊತೆಗೆ ಸಹಕರಿಸಿ ’ ಎಂದು ತಿಳಿಸಿದರು.</p>.<p>‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಿಯಿದ ಮೆರವಣಿಗೆಯಲ್ಲಿ ಡಿಜೆ ಬಳಸುವಂತಿಲ್ಲ. ಬಳಸಿದರೆ ಪ್ರಕರಣ ದಾಖಲಿಸಲಾಗುವುದು’ ಎಂದು ಡಿಎಸ್ಪಿ ವಿಶ್ವನಾಥ ಕುಲಕರ್ಣಿ ಎಚ್ಚರಿಕೆ ನೀಡಿದರು.</p>.<p>‘ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಘ ಸಂಸ್ಥೆಗಳಿಂದ ಸಾವಿರಕ್ಕೂ ಅಧಿಕ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಾಗುತ್ತವೆ. ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಕೊರತೆ ಇದೆ. ಗಜಾನನ ಸಮಿತಿ ಸದಸ್ಯರು ಪೊಲೀಸರ ಜೊತೆಗೆ ಸಹಕರಿಸಬೇಕು’ ಎಂದು ಸಿಪಿಐ ಕರಿಯಪ್ಪ ಬನ್ನೆ ಹೇಳಿದರು.</p>.<p>‘ಪಿಒಪಿ ಗಣಪತಿ ಮಾರಾಟ ನಿಷೇಧಿಸಲಾಗಿದೆ. ಮಣ್ಣಿನ ಗಣಪತಿಯನ್ನು ಮಾರಾಟ ಮಾಡಬೇಕು. ಗಣೇಶನ ಪ್ರತಿಷ್ಠಾಪನೆ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುವಂತಿಲ್ಲ. ರಾತ್ರಿ 10 ಕ್ಕೆ ಧ್ವನಿವರ್ಧಕ ಬಂದ್ ಮಾಡಬೇಕು’ ಎಂದು ಪಿಎಸ್ಐ ಹನುಮಂತ ನೇರಳೆ ಹೇಳಿದರು.</p>.<p>ಪ್ರೊಬೆಷನರಿ ಪಿಎಸ್ಐ ಮಂಜುನಾಥಗೌಡ, ಕೆಇಬಿ ಅಧಿಕಾರಿ ಬಿ.ಎಸ್.ಗುರಿಕಾರ, ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಅಶೋಕ ಕೋರಿ, ಅಗ್ನಿಶಾಮಕ, ಪುರಸಭೆ ಅಧಿಕಾರಿಗಳು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಗಣೇಶ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>