<p><strong>ಬಾದಾಮಿ:</strong> ‘ಐತಿಹಾಸಿಕ ಪ್ರವಾಸಿ ತಾಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಪಾರಂಪರಿಕ ರೈಲು ನಿಲ್ದಾಣವನ್ನು ನಿರ್ಮಿಸಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯವನ್ನು ಕಲ್ಪಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.</p>.<p>ಇಲ್ಲಿನ ರೈಲ್ವೆ ಸ್ಟೇಷನ್ನಲ್ಲಿ ಹುಬ್ಬಳ್ಳಿ ನೈರುತ್ಯ ವಲಯದ ರೈಲ್ವೆ ಇಲಾಖೆ ಆಶ್ರಯದಲ್ಲಿ ಸೋಮವಾರ ಅಮೃತ ಭಾರತ ಸ್ಟೇಷನ್ ಯೋಜನೆ ಕಾಮಗಾರಿಯಲ್ಲಿ ನೂತನ ರೈಲ್ವೆ ಸ್ಟೇಶನ್ ಲೋಕಾರ್ಪಣೆ ಮತ್ತು ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಸಮಾರಂಭಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಗೆ ₹103.37 ಕೋಟಿ ಅನುದಾನ ಕೊಟ್ಟಿದ್ದಾರೆ ’ ಎಂದರು.</p>.<p>‘ಉನ್ನತೀಕರಣಗೊಳ್ಳುತ್ತಿರುವ ಬಾದಾಮಿ ರೈಲ್ವೆ ಸ್ಟೇಷನ್ ಕಟ್ಟಡ ನಿರ್ಮಾಣಕ್ಕೆ ₹15.1 ಕೋಟಿ ಮತ್ತು ರಸ್ತೆ ಮೇಲ್ಸೇತುವೆಗೆ ₹39.63 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2024ರ ಡಿಸೆಂಬರೊಳಗೆ ಸ್ಟೇಷನ್ ಕಾಮಗಾರಿ ಮುಗಿಯಲಿದ್ದು ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಹೊಂದುವ ರೈಲ್ವೆ ನಿಲ್ದಾಣವಾಗಲಿದೆ ’ ಎಂದು ತಿಳಿಸಿದರು.</p>.<p>‘ಬಾದಾಮಿ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಸ್ಟೇಷನ್ನಲ್ಲಿ ಎರಡು ಲಿಫ್ಟ್ , ಎರಡು ಎಸ್ಕಲೇಟರ್, ಪ್ಲಾಟ್ ಫಾರ್ಮ, ವೈ ಫೈ ಸೌಲಭ್ಯ, ಸೂಚನಾ ಫಲಕಗಳು ಮತ್ತು ಪಾರ್ಕಿಂಗ್ ಮತ್ತಿತರ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು’ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಎಂಜಿನಿಯರ್ ಆಂಜನೇಯ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಆಡಗಲ್ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗಮ್ಮ ಮುಷ್ಟಿಗೇರಿ, ಉಪಾಧ್ಯಕ್ಷೆ ಸುವರ್ಣ ಕೊಳ್ಳನ್ನವರ, ಬಿಜೆಪಿ ಮುಖಂಡರಾದ ಬಿ.ಪಿ. ಹಳ್ಳೂರ, ಶಿವನಗೌಡ ಸುಂಕದ, ಎನ್. ಎಸ್. ಬೊಮ್ಮನಗೌಡರ ಅತಿಥಿಗಳಾಗಿ ಆಗಮಿಸಿದ್ದರು.</p>.<p>ರೈಲ್ವೆ ಇಲಾಖೆಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ ನಿಬಂಧ, ಭಾಷಣ ಮತ್ತು ಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ಐತಿಹಾಸಿಕ ಪ್ರವಾಸಿ ತಾಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಪಾರಂಪರಿಕ ರೈಲು ನಿಲ್ದಾಣವನ್ನು ನಿರ್ಮಿಸಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯವನ್ನು ಕಲ್ಪಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.</p>.<p>ಇಲ್ಲಿನ ರೈಲ್ವೆ ಸ್ಟೇಷನ್ನಲ್ಲಿ ಹುಬ್ಬಳ್ಳಿ ನೈರುತ್ಯ ವಲಯದ ರೈಲ್ವೆ ಇಲಾಖೆ ಆಶ್ರಯದಲ್ಲಿ ಸೋಮವಾರ ಅಮೃತ ಭಾರತ ಸ್ಟೇಷನ್ ಯೋಜನೆ ಕಾಮಗಾರಿಯಲ್ಲಿ ನೂತನ ರೈಲ್ವೆ ಸ್ಟೇಶನ್ ಲೋಕಾರ್ಪಣೆ ಮತ್ತು ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಸಮಾರಂಭಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಗೆ ₹103.37 ಕೋಟಿ ಅನುದಾನ ಕೊಟ್ಟಿದ್ದಾರೆ ’ ಎಂದರು.</p>.<p>‘ಉನ್ನತೀಕರಣಗೊಳ್ಳುತ್ತಿರುವ ಬಾದಾಮಿ ರೈಲ್ವೆ ಸ್ಟೇಷನ್ ಕಟ್ಟಡ ನಿರ್ಮಾಣಕ್ಕೆ ₹15.1 ಕೋಟಿ ಮತ್ತು ರಸ್ತೆ ಮೇಲ್ಸೇತುವೆಗೆ ₹39.63 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2024ರ ಡಿಸೆಂಬರೊಳಗೆ ಸ್ಟೇಷನ್ ಕಾಮಗಾರಿ ಮುಗಿಯಲಿದ್ದು ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಹೊಂದುವ ರೈಲ್ವೆ ನಿಲ್ದಾಣವಾಗಲಿದೆ ’ ಎಂದು ತಿಳಿಸಿದರು.</p>.<p>‘ಬಾದಾಮಿ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಸ್ಟೇಷನ್ನಲ್ಲಿ ಎರಡು ಲಿಫ್ಟ್ , ಎರಡು ಎಸ್ಕಲೇಟರ್, ಪ್ಲಾಟ್ ಫಾರ್ಮ, ವೈ ಫೈ ಸೌಲಭ್ಯ, ಸೂಚನಾ ಫಲಕಗಳು ಮತ್ತು ಪಾರ್ಕಿಂಗ್ ಮತ್ತಿತರ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು’ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಎಂಜಿನಿಯರ್ ಆಂಜನೇಯ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಆಡಗಲ್ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗಮ್ಮ ಮುಷ್ಟಿಗೇರಿ, ಉಪಾಧ್ಯಕ್ಷೆ ಸುವರ್ಣ ಕೊಳ್ಳನ್ನವರ, ಬಿಜೆಪಿ ಮುಖಂಡರಾದ ಬಿ.ಪಿ. ಹಳ್ಳೂರ, ಶಿವನಗೌಡ ಸುಂಕದ, ಎನ್. ಎಸ್. ಬೊಮ್ಮನಗೌಡರ ಅತಿಥಿಗಳಾಗಿ ಆಗಮಿಸಿದ್ದರು.</p>.<p>ರೈಲ್ವೆ ಇಲಾಖೆಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ ನಿಬಂಧ, ಭಾಷಣ ಮತ್ತು ಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>