<p><strong>ಬಾದಾಮಿ:</strong> ‘ಚಾಲುಕ್ಯ ಉತ್ಸವಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಮ್ಮಡಿ ಪುಲಿಕೇಶಿ ಮೂರ್ತಿ ಪ್ರತಿಷ್ಠಾಪನೆಗೆ ಚಾಲನೆ ನೀಡಿದ್ದು, ಅತೀ ಶೀಘ್ರದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗುವುದು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಇಲ್ಲಿನ ಶಿವಯೋಗಮಂದಿರ ಸಂಸ್ಥೆಯ ಕುಮಾರೇಶ್ವರ ಭವನದಲ್ಲಿ ಶುಕ್ರವಾರ ನಡೆದ ಚಾಲುಕ್ಯ ಉತ್ಸವ–2026ರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ದಶಕದ ನಂತರ ಚಾಲುಕ್ಯ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸಿನ ನೆರವು ನೀಡಿದ್ದಾರೆ. ಚಾಲುಕ್ಯರ ಸಂಸ್ಕೃತಿ, ಇತಿಹಾಸ, ಪರಂಪರೆಯ ಗತವೈಭವವನ್ನು ಜನಮಾನಸದಲ್ಲಿ ಬಿತ್ತುವಂತೆ ಮಾಡಿದ್ದಾರೆ’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಅನೇಕ ಸಚಿವರು, ಶಾಸಕರು, ಜಿಲ್ಲೆ–ತಾಲ್ಲೂಕಿನ ಅಧಿಕಾರಿಗಳು ಮತ್ತು ಸ್ಥಳೀಯ ಸಮಿತಿ ಸದಸ್ಯರು ಚಾಲುಕ್ಯ ಉತ್ಸವದ ಯಶಸ್ಸಿಗೆ ಸಹಕರಿಸಿದ್ದಾರೆ’ ಎಂದು ತಿಳಿಸಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಡಿವೇಂದ್ರ ಇನಾಂದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಎಸ್.ಎಫ್. ಬೊಮ್ಮನ್ನವರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಿವು ಹಿರೇಮಠ, ಪಾಂಡಪ್ಪ ಕಟ್ಟಿಮನಿ, ಆರ್.ಸಿ. ಭಂಡಾರಿ, ಸಂಗೀತಾ ಕೋಲಾರ, ಅಶೋಕ ಕೋಟನಕರ ಇದ್ದರು.</p>.<div><blockquote>ಚಾಲುಕ್ಯ ಉತ್ಸವವು ದಶಕದ ನಂತರ ನಡೆದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಕಾರದಿಂದ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಜರುಗಿದೆ </blockquote><span class="attribution">ಸಂತೋಷ ಜಗಲಾಸರ ಬಾಗಲಕೋಟೆ ಉಪವಿಭಾಗಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ಚಾಲುಕ್ಯ ಉತ್ಸವಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಮ್ಮಡಿ ಪುಲಿಕೇಶಿ ಮೂರ್ತಿ ಪ್ರತಿಷ್ಠಾಪನೆಗೆ ಚಾಲನೆ ನೀಡಿದ್ದು, ಅತೀ ಶೀಘ್ರದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗುವುದು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಇಲ್ಲಿನ ಶಿವಯೋಗಮಂದಿರ ಸಂಸ್ಥೆಯ ಕುಮಾರೇಶ್ವರ ಭವನದಲ್ಲಿ ಶುಕ್ರವಾರ ನಡೆದ ಚಾಲುಕ್ಯ ಉತ್ಸವ–2026ರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ದಶಕದ ನಂತರ ಚಾಲುಕ್ಯ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸಿನ ನೆರವು ನೀಡಿದ್ದಾರೆ. ಚಾಲುಕ್ಯರ ಸಂಸ್ಕೃತಿ, ಇತಿಹಾಸ, ಪರಂಪರೆಯ ಗತವೈಭವವನ್ನು ಜನಮಾನಸದಲ್ಲಿ ಬಿತ್ತುವಂತೆ ಮಾಡಿದ್ದಾರೆ’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಅನೇಕ ಸಚಿವರು, ಶಾಸಕರು, ಜಿಲ್ಲೆ–ತಾಲ್ಲೂಕಿನ ಅಧಿಕಾರಿಗಳು ಮತ್ತು ಸ್ಥಳೀಯ ಸಮಿತಿ ಸದಸ್ಯರು ಚಾಲುಕ್ಯ ಉತ್ಸವದ ಯಶಸ್ಸಿಗೆ ಸಹಕರಿಸಿದ್ದಾರೆ’ ಎಂದು ತಿಳಿಸಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಡಿವೇಂದ್ರ ಇನಾಂದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಎಸ್.ಎಫ್. ಬೊಮ್ಮನ್ನವರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಿವು ಹಿರೇಮಠ, ಪಾಂಡಪ್ಪ ಕಟ್ಟಿಮನಿ, ಆರ್.ಸಿ. ಭಂಡಾರಿ, ಸಂಗೀತಾ ಕೋಲಾರ, ಅಶೋಕ ಕೋಟನಕರ ಇದ್ದರು.</p>.<div><blockquote>ಚಾಲುಕ್ಯ ಉತ್ಸವವು ದಶಕದ ನಂತರ ನಡೆದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಕಾರದಿಂದ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಜರುಗಿದೆ </blockquote><span class="attribution">ಸಂತೋಷ ಜಗಲಾಸರ ಬಾಗಲಕೋಟೆ ಉಪವಿಭಾಗಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>