<p><strong>ಬಾದಾಮಿ</strong>: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬಾದಾಮಿ ರೈಲ್ವೆ ಸ್ಟೇಷನ್ನಲ್ಲಿ ಹೆಚ್ಚಿನ ರೈಲು ಸೌಲಭ್ಯವನ್ನು ಒದಗಿಸಿ ಎಂದು ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಶನಿವಾರ ಸಂಸದ ಪಿ.ಸಿ.ಗದ್ದಿಗೌಡರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಪ್ರವಾಸಿ ಸ್ಥಳಗಳಾದ ಬಾದಾಮಿ, ಪಟ್ಟದಕಲ್ಲು, ಐಹೊಳೆ ಮತ್ತು ಧಾರ್ಮಿಕ ಪುಣ್ಯ ಕ್ಷೇತ್ರಗಳಾದ ಮಹಾಕೂಟ, ಬನಶಂಕರಿ ಮತ್ತು ಶಿವಯೋಗಮಂದಿರ ಹೋಗಲು ಬಾದಾಮಿ ನಿಲ್ದಾಣಕ್ಕೆ ಪ್ರವಾಸಿಗರು ಬರುವರು. ಎಲ್ಲ ರೈಲುಗಳ ನಿಲುಗಡೆಯಾಗಿ ಪ್ರವಾಸಿಗರಿಗೆ ಸೌಲಭ್ಯ ದೊರೆಯಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಯಶವಂತಪುರ-ಬಿಕೆನೇರ ರೈಲು ನಿಲ್ದಾಣದಲ್ಲಿ ನಿಲುಗಡೆ, ವಿಜಯಪುರ-ಯಶವಂತಪುರ, ಹೊಸಪೇಟೆ-ಮುಂಬಯಿ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸುವುದು ಮತ್ತು ಹುಬ್ಬಳ್ಳಿ-ವಾರಣಾಸಿ ವಾರಕ್ಕೆ ಎರಡು ಸಲ ಸಂಚರಿಸಬೇಕು. ವಿಜಯಪುರ-ಬೆಂಗಳೂರಿಗೆ ‘ ವಂದೇ ಮಾತರಂ ’ ರೈಲು ಆರಂಭಿಸಬೇಕು ಎಂದು ಆಗ್ರಹಿಸಿದರು.</p>.<p>ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ ಇಷ್ಟಲಿಂಗ ನರೇಗಲ್ ಮತ್ತು ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬಾದಾಮಿ ರೈಲ್ವೆ ಸ್ಟೇಷನ್ನಲ್ಲಿ ಹೆಚ್ಚಿನ ರೈಲು ಸೌಲಭ್ಯವನ್ನು ಒದಗಿಸಿ ಎಂದು ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಶನಿವಾರ ಸಂಸದ ಪಿ.ಸಿ.ಗದ್ದಿಗೌಡರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಪ್ರವಾಸಿ ಸ್ಥಳಗಳಾದ ಬಾದಾಮಿ, ಪಟ್ಟದಕಲ್ಲು, ಐಹೊಳೆ ಮತ್ತು ಧಾರ್ಮಿಕ ಪುಣ್ಯ ಕ್ಷೇತ್ರಗಳಾದ ಮಹಾಕೂಟ, ಬನಶಂಕರಿ ಮತ್ತು ಶಿವಯೋಗಮಂದಿರ ಹೋಗಲು ಬಾದಾಮಿ ನಿಲ್ದಾಣಕ್ಕೆ ಪ್ರವಾಸಿಗರು ಬರುವರು. ಎಲ್ಲ ರೈಲುಗಳ ನಿಲುಗಡೆಯಾಗಿ ಪ್ರವಾಸಿಗರಿಗೆ ಸೌಲಭ್ಯ ದೊರೆಯಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಯಶವಂತಪುರ-ಬಿಕೆನೇರ ರೈಲು ನಿಲ್ದಾಣದಲ್ಲಿ ನಿಲುಗಡೆ, ವಿಜಯಪುರ-ಯಶವಂತಪುರ, ಹೊಸಪೇಟೆ-ಮುಂಬಯಿ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸುವುದು ಮತ್ತು ಹುಬ್ಬಳ್ಳಿ-ವಾರಣಾಸಿ ವಾರಕ್ಕೆ ಎರಡು ಸಲ ಸಂಚರಿಸಬೇಕು. ವಿಜಯಪುರ-ಬೆಂಗಳೂರಿಗೆ ‘ ವಂದೇ ಮಾತರಂ ’ ರೈಲು ಆರಂಭಿಸಬೇಕು ಎಂದು ಆಗ್ರಹಿಸಿದರು.</p>.<p>ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ ಇಷ್ಟಲಿಂಗ ನರೇಗಲ್ ಮತ್ತು ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>