<p><strong>ಬಾದಾಮಿ</strong>: ಕೇಂದ್ರ ಸರ್ಕಾರದ ಅಮೃತ ಭಾರತ ಯೋಜನೆಯಲ್ಲಿ ₹15.1 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಐತಿಹಾಸಿಕ ಪ್ರವಾಸಿ ತಾಣ ಬಾದಾಮಿ ರೈಲ್ವೆ ನಿಲ್ದಾಣದ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ.</p>.<p>ಸ್ವದೇಶಿ ಮತ್ತು ವಿದೇಶಿ ಪ್ರವಾಸಿಗರು ಚಾಲುಕ್ಯರ ಸ್ಮಾರಕಗಳಾದ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಮಹಾಕೂಟ, ಹುಲಿಗೆಮ್ಮನಕೊಳ್ಳ, ನಾಗನಾಥಕೊಳ್ಳ, ಸಿದ್ದನಕೊಳ್ಳ, ಕೋಟೆ ಕೊತ್ತಲಗಳು, ಮಳೆಗಾಲದಲ್ಲಿ ಜಲಪಾತಗಳು ಮತ್ತು ನಿಸರ್ಗ ಸೌಂದರ್ಯದ ಬೃಹತ್ ಹೆಬ್ಬಂಡೆಗಳ ಸಾಲನ್ನು ವೀಕ್ಷಿಸಲು ಆಗಮಿಸುವರು.</p>.<p>ಫೆ.2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವಿಡಿಯೊ ಕಾನ್ಫರನ್ಸ್ ಮೂಲಕ ಅಮೃತ ಭಾರತ ಯೋಜನೆಯಡಿ ನೂತನ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ₹15.1 ಕೋಟಿ ಮತ್ತು ರೈಲ್ವೆ ಮೇಲ್ಸೇತುವೆ ನಿರ್ಮಿಸಲು ₹39. 63 ಕೋಟಿ ವೆಚ್ಚದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಶಂಕುಸ್ಥಾಪನೆ ನೆರವೇರಿಸಿದ್ದರು.</p>.<p>ರೈಲ್ವೆ ನಿಲ್ದಾಣ ಕಾಮಗಾರಿಯಲ್ಲಿ ಪ್ರವೇಶ ದ್ವಾರವನ್ನು ಗುಹಾಂತರ ದೇವಾಲಯದ ಸ್ತಂಭದಂತೆ ನಿರ್ಮಿಸಿ ಮೂರ್ತಿ ಶಿಲ್ಪಗಳನ್ನು ಆಕರ್ಷಕವಾಗಿ ರೂಪಿಸಿದ್ದಾರೆ. ಒಳಗೆ ಬರುತ್ತಿದ್ದಂತೆ ಭಿತ್ತಿಯಲ್ಲಿ ಪಟ್ಟದಕಲ್ಲಿನ ದ್ರಾವಿಡ ಮತ್ತು ನಾಗರ ಶೈಲಿಯ ದೇವಾಲಯಗಳನ್ನು ರೂಪಿಸಿದ್ದಾರೆ.</p>.<p>ರೈಲ್ವೆ ನಿಲ್ದಾಣದಲ್ಲಿ ನಾಲ್ಕು ಟಿಕೆಟ್ ಕೌಂಟರ್, ಮಹಿಳೆಯರ ಮತ್ತು ಪುರುಷರ ನಿರೀಕ್ಷಣಾಲಯ, ಅಂಗವಿಕಲರಿಗೆ ಶೌಚಾಲಯ, ಹವಾನಿಯಂತ್ರಿತ ಪ್ರತಿಕ್ಷಾಲಯ, ಟಿಕೆಟ್ ಬುಕಿಂಗ್ ಕೊಠಡಿ, ನಿಲ್ದಾಣ ವ್ಯವಸ್ಥಾಪಕರ ಕೊಠಡಿ, ವಿಶ್ರಾಂತಿ ಕೊಠಡಿ, ಎರಡು ಪ್ಲಾಟ್ಫಾರ್ಮ್ಗೆ ಪಾದಚಾರಿ, ಎರಡು ಮೇಲ್ಸೇತುವೆ ಮತ್ತು ಲಿಫ್ಟ್ ಸೌಲಭ್ಯಗಳನ್ನು ಒಳಗೊಂಡಿದೆ.</p>.<p>ಪ್ರವೇಶ ದ್ವಾರದ ಸ್ತಂಭದಲ್ಲಿ ದ್ವಾರಪಾಲಕರು, ಚಾಲುಕ್ಯರ ಲಾಂಛನ, ವೈವಿಧ್ಯಮಯ ಮೂರ್ತಿಶಿಲ್ಪಗಳು, ಹೊರಗೋಡೆಯಲ್ಲಿ ನಟರಾಜ ಮೂರ್ತಿ, ವಿಶ್ರಾಂತಿ ಕೊಠಡಿಗಳಲ್ಲಿ ಅಗಸ್ತ್ಯತೀರ್ಥ ಕೆರೆ, ಭೂತನಾಥ ದೇವಾಲಯ, ಬಾದಾಮಿ, ಪಟ್ಟದಕಲ್ಲಿನ ಸ್ಮಾರಕಗಳನ್ನು ಅಂದವಾಗಿ ವರ್ಣದಲ್ಲಿ ಚಿತ್ರಿಸಲಾಗಿದೆ.</p>.<p>‘ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದಲ್ಲಿ ಪ್ರಯಾಣಿಕರಿಗೆ ಎಲ್ಲ ಸೌಲಭ್ಯಗಳಿವೆ. ಆದರೆ, ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಹೆಚ್ಚಿಸಿ ಪ್ರವಾಸಿಗರು ಬರುವಂತೆ ಆಕರ್ಷಿಸಬೇಕು’ ಎಂದು ಹುಬ್ಬಳ್ಳಿಗೆ ಪ್ರಯಾಣಿಸಲು ಆಗಮಿಸಿದ ವಿನಿತಾ ಮರ್ದಾ ಪ್ರತಿಕ್ರಿಯಿಸಿದರು.</p>.<p>‘ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಎಸ್ಕಲೆಟರ್ ಸೌಲಭ್ಯದ ಕಾಮಗಾರಿ ಮತ್ತು ಬಾದಾಮಿ-ಬಾಗಲಕೋಟೆ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬೇಗ ಪೂರ್ಣಗೊಳಿಸಬೇಕು’ ಎಂದು ನಗರ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ ಇಷ್ಟಲಿಂಗ ನರೇಗಲ್ ಆಗ್ರಹಿಸಿದ್ದಾರೆ.</p>.<p>‘ಎಸ್ಕಲೆಟರ್ ಕಾಮಗಾರಿ ಆರಂಭಿಸಲಾಗುವುದು’ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ ಎಂಜಿನಿಯರ್ ನವೀನ ತಿಳಿಸಿದರು.</p>.<p>ಎಕ್ಸ್ಪ್ರೆಸ್ ರೈಲುಗಳು ನಿಲುಗಡೆಯಾಗಲಿ ಎಸ್ಕಲೆಟರ್ ಮತ್ತು ರಸ್ತೆ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಿ ಸ್ಮಾರಕಗಳ ಮಾಹಿತಿ ಫಲಕ ಹಾಕಲು ಆಗ್ರಹ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ಕೇಂದ್ರ ಸರ್ಕಾರದ ಅಮೃತ ಭಾರತ ಯೋಜನೆಯಲ್ಲಿ ₹15.1 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಐತಿಹಾಸಿಕ ಪ್ರವಾಸಿ ತಾಣ ಬಾದಾಮಿ ರೈಲ್ವೆ ನಿಲ್ದಾಣದ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ.</p>.<p>ಸ್ವದೇಶಿ ಮತ್ತು ವಿದೇಶಿ ಪ್ರವಾಸಿಗರು ಚಾಲುಕ್ಯರ ಸ್ಮಾರಕಗಳಾದ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಮಹಾಕೂಟ, ಹುಲಿಗೆಮ್ಮನಕೊಳ್ಳ, ನಾಗನಾಥಕೊಳ್ಳ, ಸಿದ್ದನಕೊಳ್ಳ, ಕೋಟೆ ಕೊತ್ತಲಗಳು, ಮಳೆಗಾಲದಲ್ಲಿ ಜಲಪಾತಗಳು ಮತ್ತು ನಿಸರ್ಗ ಸೌಂದರ್ಯದ ಬೃಹತ್ ಹೆಬ್ಬಂಡೆಗಳ ಸಾಲನ್ನು ವೀಕ್ಷಿಸಲು ಆಗಮಿಸುವರು.</p>.<p>ಫೆ.2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವಿಡಿಯೊ ಕಾನ್ಫರನ್ಸ್ ಮೂಲಕ ಅಮೃತ ಭಾರತ ಯೋಜನೆಯಡಿ ನೂತನ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ₹15.1 ಕೋಟಿ ಮತ್ತು ರೈಲ್ವೆ ಮೇಲ್ಸೇತುವೆ ನಿರ್ಮಿಸಲು ₹39. 63 ಕೋಟಿ ವೆಚ್ಚದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಶಂಕುಸ್ಥಾಪನೆ ನೆರವೇರಿಸಿದ್ದರು.</p>.<p>ರೈಲ್ವೆ ನಿಲ್ದಾಣ ಕಾಮಗಾರಿಯಲ್ಲಿ ಪ್ರವೇಶ ದ್ವಾರವನ್ನು ಗುಹಾಂತರ ದೇವಾಲಯದ ಸ್ತಂಭದಂತೆ ನಿರ್ಮಿಸಿ ಮೂರ್ತಿ ಶಿಲ್ಪಗಳನ್ನು ಆಕರ್ಷಕವಾಗಿ ರೂಪಿಸಿದ್ದಾರೆ. ಒಳಗೆ ಬರುತ್ತಿದ್ದಂತೆ ಭಿತ್ತಿಯಲ್ಲಿ ಪಟ್ಟದಕಲ್ಲಿನ ದ್ರಾವಿಡ ಮತ್ತು ನಾಗರ ಶೈಲಿಯ ದೇವಾಲಯಗಳನ್ನು ರೂಪಿಸಿದ್ದಾರೆ.</p>.<p>ರೈಲ್ವೆ ನಿಲ್ದಾಣದಲ್ಲಿ ನಾಲ್ಕು ಟಿಕೆಟ್ ಕೌಂಟರ್, ಮಹಿಳೆಯರ ಮತ್ತು ಪುರುಷರ ನಿರೀಕ್ಷಣಾಲಯ, ಅಂಗವಿಕಲರಿಗೆ ಶೌಚಾಲಯ, ಹವಾನಿಯಂತ್ರಿತ ಪ್ರತಿಕ್ಷಾಲಯ, ಟಿಕೆಟ್ ಬುಕಿಂಗ್ ಕೊಠಡಿ, ನಿಲ್ದಾಣ ವ್ಯವಸ್ಥಾಪಕರ ಕೊಠಡಿ, ವಿಶ್ರಾಂತಿ ಕೊಠಡಿ, ಎರಡು ಪ್ಲಾಟ್ಫಾರ್ಮ್ಗೆ ಪಾದಚಾರಿ, ಎರಡು ಮೇಲ್ಸೇತುವೆ ಮತ್ತು ಲಿಫ್ಟ್ ಸೌಲಭ್ಯಗಳನ್ನು ಒಳಗೊಂಡಿದೆ.</p>.<p>ಪ್ರವೇಶ ದ್ವಾರದ ಸ್ತಂಭದಲ್ಲಿ ದ್ವಾರಪಾಲಕರು, ಚಾಲುಕ್ಯರ ಲಾಂಛನ, ವೈವಿಧ್ಯಮಯ ಮೂರ್ತಿಶಿಲ್ಪಗಳು, ಹೊರಗೋಡೆಯಲ್ಲಿ ನಟರಾಜ ಮೂರ್ತಿ, ವಿಶ್ರಾಂತಿ ಕೊಠಡಿಗಳಲ್ಲಿ ಅಗಸ್ತ್ಯತೀರ್ಥ ಕೆರೆ, ಭೂತನಾಥ ದೇವಾಲಯ, ಬಾದಾಮಿ, ಪಟ್ಟದಕಲ್ಲಿನ ಸ್ಮಾರಕಗಳನ್ನು ಅಂದವಾಗಿ ವರ್ಣದಲ್ಲಿ ಚಿತ್ರಿಸಲಾಗಿದೆ.</p>.<p>‘ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದಲ್ಲಿ ಪ್ರಯಾಣಿಕರಿಗೆ ಎಲ್ಲ ಸೌಲಭ್ಯಗಳಿವೆ. ಆದರೆ, ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಹೆಚ್ಚಿಸಿ ಪ್ರವಾಸಿಗರು ಬರುವಂತೆ ಆಕರ್ಷಿಸಬೇಕು’ ಎಂದು ಹುಬ್ಬಳ್ಳಿಗೆ ಪ್ರಯಾಣಿಸಲು ಆಗಮಿಸಿದ ವಿನಿತಾ ಮರ್ದಾ ಪ್ರತಿಕ್ರಿಯಿಸಿದರು.</p>.<p>‘ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಎಸ್ಕಲೆಟರ್ ಸೌಲಭ್ಯದ ಕಾಮಗಾರಿ ಮತ್ತು ಬಾದಾಮಿ-ಬಾಗಲಕೋಟೆ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬೇಗ ಪೂರ್ಣಗೊಳಿಸಬೇಕು’ ಎಂದು ನಗರ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ ಇಷ್ಟಲಿಂಗ ನರೇಗಲ್ ಆಗ್ರಹಿಸಿದ್ದಾರೆ.</p>.<p>‘ಎಸ್ಕಲೆಟರ್ ಕಾಮಗಾರಿ ಆರಂಭಿಸಲಾಗುವುದು’ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ ಎಂಜಿನಿಯರ್ ನವೀನ ತಿಳಿಸಿದರು.</p>.<p>ಎಕ್ಸ್ಪ್ರೆಸ್ ರೈಲುಗಳು ನಿಲುಗಡೆಯಾಗಲಿ ಎಸ್ಕಲೆಟರ್ ಮತ್ತು ರಸ್ತೆ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಿ ಸ್ಮಾರಕಗಳ ಮಾಹಿತಿ ಫಲಕ ಹಾಕಲು ಆಗ್ರಹ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>