<p><strong>ಬಾದಾಮಿ</strong>: ‘ಹಿರಿಯ ನಾಗರಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಲು ಡಿ. 16 ರಂದು ಬೆಳಿಗ್ಗೆ 10ಕ್ಕೆ ಬೆಳಗಾವಿಯಲ್ಲಿ ಹಿರಿಯ ನಾಗರಿಕರ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ಹಿರಿಯ ನಾಗರಿಕರ ಜೀವನ ಗೌರವ ಅಭಿಯಾನದ ರಾಜ್ಯ ಕಾರ್ಯದರ್ಶಿ ಬಿ.ಪಿ.ಹಳ್ಳೂರ ತಿಳಿಸಿದರು.</p>.<p>‘ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುಬ್ಬಳ್ಳಿ-ಬೆಂಗಳೂರು ಆಶ್ರಯದಲ್ಲಿ ಬೆಳಗಾವಿ ಅಧಿವೇಶನದ ಹೊರಗೆ ಧರಣಿ ನಡೆಯಲಿದೆ’ ಎಂದು ಸೋಮವಾರ ಪತ್ರಕರ್ತರಿಗೆ ತಿಳಿಸಿದರು.</p>.<p>‘ಹಿರಿಯರ ಆಸ್ತಿ, ಜೀವ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯಲ್ಲಿ ಅವಶ್ಯವಾದ ವೃದ್ಧಾಪ್ಯ ವೇತನ ನೀಡುವುದು ಸರ್ಕಾರದ ಕರ್ತವ್ಯ. ಹಿರಿಯ ನಾಗರಿಕರ ಕೆಲವು ಸೌಲಭ್ಯಗಳನ್ನು ಸರ್ಕಾರ ಮೊಟಕುಗೊಳಿಸಿ ಹಿರಿಯರನ್ನು ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಪ್ರತಿ ವರ್ಷ ಅ. 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮಾಡಬೇಕಿತ್ತು. ಆದರೆ ಈ ಬಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ನ. 28 ರಂದು ಆಚರಿಸಿದ್ದಾರೆ. ಅರ್ಜಿ ಸಲ್ಲಿಸಿದ ಸಂಘ– ಸಂಸ್ಥೆಯ ಅರ್ಜಿಯನ್ನು ಸರಿಯಾಗಿ ಪರಿಶೀಲಿಸದೆ ತಮಗೆ ಬೇಕಾದ ಸಂಘಕ್ಕೆ ಪ್ರಶಸ್ತಿ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಹಿರಿಯ ನಾಗರಿಕರ ಜೀವನ ಗೌರವ ಅಭಿಯಾನದ ರಾಜ್ಯ ಸಂಚಾಲಕ ಆರ್.ಕೆ. ಮಠಪತಿ ಮತ್ತು ರಾಜ್ಯದ ಪದಾಧಿಕಾರಿಗಳು ಆಗಮಿಸುವರು’ ಎಂದು ತಿಳಿಸಿದರು.</p>.<p>ಹಿರಿಯ ನಾಗರಿಕರಾದ ಸಿದ್ದಣ್ಣ ಶಿವನಗುತ್ತಿ, ಎನ್.ಎಸ್. ಬೊಮ್ಮನಗೌಡ್ರ, ಬಿ.ಎಸ್. ಮಠಪತಿ, ಎಂ.ಪಿ. ಪಾಟೀಲ, ವಿಠ್ಠಲಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ‘ಹಿರಿಯ ನಾಗರಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಲು ಡಿ. 16 ರಂದು ಬೆಳಿಗ್ಗೆ 10ಕ್ಕೆ ಬೆಳಗಾವಿಯಲ್ಲಿ ಹಿರಿಯ ನಾಗರಿಕರ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ಹಿರಿಯ ನಾಗರಿಕರ ಜೀವನ ಗೌರವ ಅಭಿಯಾನದ ರಾಜ್ಯ ಕಾರ್ಯದರ್ಶಿ ಬಿ.ಪಿ.ಹಳ್ಳೂರ ತಿಳಿಸಿದರು.</p>.<p>‘ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುಬ್ಬಳ್ಳಿ-ಬೆಂಗಳೂರು ಆಶ್ರಯದಲ್ಲಿ ಬೆಳಗಾವಿ ಅಧಿವೇಶನದ ಹೊರಗೆ ಧರಣಿ ನಡೆಯಲಿದೆ’ ಎಂದು ಸೋಮವಾರ ಪತ್ರಕರ್ತರಿಗೆ ತಿಳಿಸಿದರು.</p>.<p>‘ಹಿರಿಯರ ಆಸ್ತಿ, ಜೀವ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯಲ್ಲಿ ಅವಶ್ಯವಾದ ವೃದ್ಧಾಪ್ಯ ವೇತನ ನೀಡುವುದು ಸರ್ಕಾರದ ಕರ್ತವ್ಯ. ಹಿರಿಯ ನಾಗರಿಕರ ಕೆಲವು ಸೌಲಭ್ಯಗಳನ್ನು ಸರ್ಕಾರ ಮೊಟಕುಗೊಳಿಸಿ ಹಿರಿಯರನ್ನು ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಪ್ರತಿ ವರ್ಷ ಅ. 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮಾಡಬೇಕಿತ್ತು. ಆದರೆ ಈ ಬಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ನ. 28 ರಂದು ಆಚರಿಸಿದ್ದಾರೆ. ಅರ್ಜಿ ಸಲ್ಲಿಸಿದ ಸಂಘ– ಸಂಸ್ಥೆಯ ಅರ್ಜಿಯನ್ನು ಸರಿಯಾಗಿ ಪರಿಶೀಲಿಸದೆ ತಮಗೆ ಬೇಕಾದ ಸಂಘಕ್ಕೆ ಪ್ರಶಸ್ತಿ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಹಿರಿಯ ನಾಗರಿಕರ ಜೀವನ ಗೌರವ ಅಭಿಯಾನದ ರಾಜ್ಯ ಸಂಚಾಲಕ ಆರ್.ಕೆ. ಮಠಪತಿ ಮತ್ತು ರಾಜ್ಯದ ಪದಾಧಿಕಾರಿಗಳು ಆಗಮಿಸುವರು’ ಎಂದು ತಿಳಿಸಿದರು.</p>.<p>ಹಿರಿಯ ನಾಗರಿಕರಾದ ಸಿದ್ದಣ್ಣ ಶಿವನಗುತ್ತಿ, ಎನ್.ಎಸ್. ಬೊಮ್ಮನಗೌಡ್ರ, ಬಿ.ಎಸ್. ಮಠಪತಿ, ಎಂ.ಪಿ. ಪಾಟೀಲ, ವಿಠ್ಠಲಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>