<p><strong>ಶಿವಯೋಗಮಂದಿರ (ಬಾದಾಮಿ):</strong> ಶಿವಯೋಗಮಂದಿರದ ಸಂಸ್ಥಾಪಕ ವೀರಶೈವ ಲಿಂಗಾಯತ ಧರ್ಮ ಜಾಗೃತಿ ರೂವಾರಿ ಪರಮ ತಪಸ್ವಿ ಹಾನಗಲ್ ಕುಮಾರೇಶ್ವರ ಸ್ವಾಮೀಜಿ ರಥೋತ್ಸವವು ಸೋಮವಾರ ಭಕ್ತಸ್ತೋಮದ ಹರ್ಷೋದ್ಘಾರದೊಂದಿಗೆ ಸಂಭ್ರಮದಿಂದ ನಡೆಯಿತು.</p>.<p>ಬಾಳೆಗಿಡ, ಪುಷ್ಪಮಾಲೆ, ರುದ್ರಾಕ್ಷಿ ಸರದೊಂದಿಗೆ ಅಲಂಕಾರ ಕೈಗೊಂಡ ರಥದಲ್ಲಿ ಕುಮಾರ ಸ್ವಾಮೀಜಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ರಥಕ್ಕೆ ಚಾಲನೆ ನೀಡಿದರು.</p>.<p>ಶಿವಯೋಗಮಂದಿರ ಸಮೀಪ ಉತ್ತರವಾಹಿನಿಯಾಗಿ ಶಾಂತವಾಗಿ ಹರಿಯುತ್ತಿರುವ ಮಲಪ್ರಭೆ ನದಿಯಂತೆ ರಥವು ಉತ್ತರ ವಾಹಿನಿಯತ್ತ ಶಾಂತವಾಗಿ ಸಾಗಿತು. ರಥವು ಸಾಗಿದಂತೆ ಪರಮ ತಪಸ್ವಿ ಕುಮಾರ ಶ್ರೀಗಳಿಗೆ ಭಕ್ತರ ಜೈಕಾರದ ಹರ್ಷೋದ್ಘಾರ ಮುಗಿಲು ಮುಟ್ಟುವಂತಿತ್ತು.</p>.<p>ಭಕ್ತರು ರಥದ ಚಕ್ರಕ್ಕೆ ತೆಂಗಿನಕಾಯಿ ಮತ್ತು ರಥಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿಭಾವ ಮೆರೆದರು. ರಥೋತ್ಸವದ ನಂತರ ಭಕ್ತರು ಕುಮಾರಶ್ರೀಗಳ ಕರ್ತೃ ಗದ್ದುಗೆಯ ದರ್ಶನ ಪಡೆದರು.</p>.<p>ಶಿವಯೋಗಮಂದಿರ ಸಂಸ್ಥೆಯ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಫಕೀರೇಶ್ವರಮಠದ ದಿಂಗಾಲೇಶ್ವರ ಸ್ವಾಮೀಜಿ, ನಾಡಿನ ವಿವಿಧ ಮಠಾಧೀಶರು, ಶಿವಯೋಗಮಂದಿರ ವಟುಸಾಧಕರು, ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಗಣ್ಯರು ಮತ್ತು ಸುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಯೋಗಮಂದಿರ (ಬಾದಾಮಿ):</strong> ಶಿವಯೋಗಮಂದಿರದ ಸಂಸ್ಥಾಪಕ ವೀರಶೈವ ಲಿಂಗಾಯತ ಧರ್ಮ ಜಾಗೃತಿ ರೂವಾರಿ ಪರಮ ತಪಸ್ವಿ ಹಾನಗಲ್ ಕುಮಾರೇಶ್ವರ ಸ್ವಾಮೀಜಿ ರಥೋತ್ಸವವು ಸೋಮವಾರ ಭಕ್ತಸ್ತೋಮದ ಹರ್ಷೋದ್ಘಾರದೊಂದಿಗೆ ಸಂಭ್ರಮದಿಂದ ನಡೆಯಿತು.</p>.<p>ಬಾಳೆಗಿಡ, ಪುಷ್ಪಮಾಲೆ, ರುದ್ರಾಕ್ಷಿ ಸರದೊಂದಿಗೆ ಅಲಂಕಾರ ಕೈಗೊಂಡ ರಥದಲ್ಲಿ ಕುಮಾರ ಸ್ವಾಮೀಜಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ರಥಕ್ಕೆ ಚಾಲನೆ ನೀಡಿದರು.</p>.<p>ಶಿವಯೋಗಮಂದಿರ ಸಮೀಪ ಉತ್ತರವಾಹಿನಿಯಾಗಿ ಶಾಂತವಾಗಿ ಹರಿಯುತ್ತಿರುವ ಮಲಪ್ರಭೆ ನದಿಯಂತೆ ರಥವು ಉತ್ತರ ವಾಹಿನಿಯತ್ತ ಶಾಂತವಾಗಿ ಸಾಗಿತು. ರಥವು ಸಾಗಿದಂತೆ ಪರಮ ತಪಸ್ವಿ ಕುಮಾರ ಶ್ರೀಗಳಿಗೆ ಭಕ್ತರ ಜೈಕಾರದ ಹರ್ಷೋದ್ಘಾರ ಮುಗಿಲು ಮುಟ್ಟುವಂತಿತ್ತು.</p>.<p>ಭಕ್ತರು ರಥದ ಚಕ್ರಕ್ಕೆ ತೆಂಗಿನಕಾಯಿ ಮತ್ತು ರಥಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿಭಾವ ಮೆರೆದರು. ರಥೋತ್ಸವದ ನಂತರ ಭಕ್ತರು ಕುಮಾರಶ್ರೀಗಳ ಕರ್ತೃ ಗದ್ದುಗೆಯ ದರ್ಶನ ಪಡೆದರು.</p>.<p>ಶಿವಯೋಗಮಂದಿರ ಸಂಸ್ಥೆಯ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಫಕೀರೇಶ್ವರಮಠದ ದಿಂಗಾಲೇಶ್ವರ ಸ್ವಾಮೀಜಿ, ನಾಡಿನ ವಿವಿಧ ಮಠಾಧೀಶರು, ಶಿವಯೋಗಮಂದಿರ ವಟುಸಾಧಕರು, ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಗಣ್ಯರು ಮತ್ತು ಸುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>