<p><strong> ಕುಳಗೇರಿ ಕ್ರಾಸ್: </strong>ಸಮೀಪದ ಗೋವನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮಂಗಳವಾರ ಬಾದಾಮಿ ತಹಶೀಲ್ದಾರ್ ಕಾವ್ಯಾಶ್ರೀ ಎಚ್. ಭೇಟಿ ನೀಡಿ ಶಿಥಿಲಗೊಂಡ 6 ಕೊಠಡಿಗಳನ್ನು ವೀಕ್ಷಿಸಿದರು. </p>.<p>‘ಶಿಥಿಲಗೊಂಡ ಕಟ್ಟಡದಲ್ಲಿ ಬೋಧನೆ ಮಾಡುವಾಗ ಮಕ್ಕಳ ಜೀವಕ್ಕೆ ತೊಂದರೆಯಾದರೆ ಯಾರು ಜವಾಬ್ದಾರರು. ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಿ’ ಎಂದು ಮುಖ್ಯಶಿಕ್ಷಕಿ ಎಸ್.ವಿ. ಸಾಲಿಮಠ ಅವರಿಗೆ ಸೂಚಿಸಿದರು.</p>.<p>‘ಕೊಠಡಿ ಶಿಥಿಲಗೊಂಡಿದ್ದು, ಹೊಸ ಕೊಠಡಿಗಳನ್ನು ನಿರ್ಮಿಸುವಂತೆ ಹಲವು ಬಾರಿ ಶಿಕ್ಷಣ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿದೆ. ಸದ್ಯಕ್ಕೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಹಾಗೂ ಪ್ರೌಢಶಾಲೆಯ ಸಿಬ್ಬಂದಿಯ ಧನ ಸಹಾಯದಲ್ಲಿ ತರಗತಿಗಳನ್ನು ನಡೆಸಲು ತಾತ್ಕಾಲಿಕವಾಗಿ ಎರಡು ಶೆಡ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ’ ಎಂದು ಸಾಲಿಮಠ ತಿಳಿಸಿದರು.</p>.<p>‘ಹೊಸ ಕೊಠಡಿಗಳ ನಿರ್ಮಾಣವಾಗುವವರೆಗೆ ಮಠ-ಮಂದಿರಗಳಲ್ಲಿ ಅಥವಾ ಗ್ರಾಮದಲ್ಲಿ ಯಾವುದಾದರೂ ಖಾಲಿ ಇರುವ ಕಟ್ಟಡಗಳಲ್ಲಿ ಪಾಠ ಮಾಡಿ. ಶಾಲೆಗೆ ರಜೆ ನೀಡುವ ಬಗ್ಗೆಯೂ ಜಿಲ್ಲಾಧಿಕಾರಿ ಜೊತೆ ಮಾತನಾಡುವೆ’ ಎಂದು ತಹಶೀಲ್ದಾರ್ .</p>.<p>ಈ ಬಗ್ಗೆ ಎನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಬಾದಾಮಿ ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಅವರನ್ನು ಪ್ರಶ್ನಿಸಿದರು.</p>.<p>‘ಎರಡು ದಿನಗಳ ಹಿಂದೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ₹ 14 ಲಕ್ಷ ವೆಚ್ಚದಲ್ಲಿ ಒಂದು ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದಾರೆ. ಅತಿ ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> ಕುಳಗೇರಿ ಕ್ರಾಸ್: </strong>ಸಮೀಪದ ಗೋವನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮಂಗಳವಾರ ಬಾದಾಮಿ ತಹಶೀಲ್ದಾರ್ ಕಾವ್ಯಾಶ್ರೀ ಎಚ್. ಭೇಟಿ ನೀಡಿ ಶಿಥಿಲಗೊಂಡ 6 ಕೊಠಡಿಗಳನ್ನು ವೀಕ್ಷಿಸಿದರು. </p>.<p>‘ಶಿಥಿಲಗೊಂಡ ಕಟ್ಟಡದಲ್ಲಿ ಬೋಧನೆ ಮಾಡುವಾಗ ಮಕ್ಕಳ ಜೀವಕ್ಕೆ ತೊಂದರೆಯಾದರೆ ಯಾರು ಜವಾಬ್ದಾರರು. ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಿ’ ಎಂದು ಮುಖ್ಯಶಿಕ್ಷಕಿ ಎಸ್.ವಿ. ಸಾಲಿಮಠ ಅವರಿಗೆ ಸೂಚಿಸಿದರು.</p>.<p>‘ಕೊಠಡಿ ಶಿಥಿಲಗೊಂಡಿದ್ದು, ಹೊಸ ಕೊಠಡಿಗಳನ್ನು ನಿರ್ಮಿಸುವಂತೆ ಹಲವು ಬಾರಿ ಶಿಕ್ಷಣ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿದೆ. ಸದ್ಯಕ್ಕೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಹಾಗೂ ಪ್ರೌಢಶಾಲೆಯ ಸಿಬ್ಬಂದಿಯ ಧನ ಸಹಾಯದಲ್ಲಿ ತರಗತಿಗಳನ್ನು ನಡೆಸಲು ತಾತ್ಕಾಲಿಕವಾಗಿ ಎರಡು ಶೆಡ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ’ ಎಂದು ಸಾಲಿಮಠ ತಿಳಿಸಿದರು.</p>.<p>‘ಹೊಸ ಕೊಠಡಿಗಳ ನಿರ್ಮಾಣವಾಗುವವರೆಗೆ ಮಠ-ಮಂದಿರಗಳಲ್ಲಿ ಅಥವಾ ಗ್ರಾಮದಲ್ಲಿ ಯಾವುದಾದರೂ ಖಾಲಿ ಇರುವ ಕಟ್ಟಡಗಳಲ್ಲಿ ಪಾಠ ಮಾಡಿ. ಶಾಲೆಗೆ ರಜೆ ನೀಡುವ ಬಗ್ಗೆಯೂ ಜಿಲ್ಲಾಧಿಕಾರಿ ಜೊತೆ ಮಾತನಾಡುವೆ’ ಎಂದು ತಹಶೀಲ್ದಾರ್ .</p>.<p>ಈ ಬಗ್ಗೆ ಎನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಬಾದಾಮಿ ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಅವರನ್ನು ಪ್ರಶ್ನಿಸಿದರು.</p>.<p>‘ಎರಡು ದಿನಗಳ ಹಿಂದೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ₹ 14 ಲಕ್ಷ ವೆಚ್ಚದಲ್ಲಿ ಒಂದು ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದಾರೆ. ಅತಿ ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>