ಕಟ್ಟಡದ ಹಿಂಬದಿ ಕಿಟಕಿ ಮುರಿದು ಬ್ಯಾಂಕ್ ಒಳಗೆ ಹೊಕ್ಕಿರುವ ಕಳ್ಳರು ಗ್ಯಾಸ್ ಕಟರ್, ಕಳ್ಳತನಕ್ಕೆ ಬಳಸಿದ ಸಲಕರಣೆ ಗಳನ್ನು ಸ್ಥಳದಲ್ಲೇ ಬಿಟ್ಟಿದ್ದಾರೆ.
ಬ್ಯಾಂಕಿನ ಸಿ.ಸಿ ಟಿ.ವಿ ಕ್ಯಾಮೆರಾದ ಹಾರ್ಡ್ ಡಿಸ್ಕ್ ಹೊತ್ತೊಯ್ದಿದ್ದಾರೆ. ಸ್ಥಳಕ್ಕೆ ಕೆರೂರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬ್ಯಾಂಕ್ನಲ್ಲಿ ನಗದು, ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಬ್ಯಾಂಕ್ ವ್ಯವಸ್ಥಾಪಕ ಎಚ್.ಡಿ.ಪೂಜಾರ ಬೇರೆ ಊರಿಗೆ ತೆರಳಿದ್ದು, ಅವರಿಗೆ ಮಾಹಿತಿ ನೀಡಿದ್ದೇವೆ. ಅವರು ಬಂದ ಮೇಲೆ ಕಳ್ಳತನ ನಡೆದಿರುವ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.