<p>ಬಾದಾಮಿ: ಹೊರವಲಯದ ಗದಗ ಬೈಪಾಸ್ ರಸ್ತೆಯಲ್ಲಿ ದರೋಡೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬುಧವಾರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎಂದು ಪಿಎಸ್ಐ ವಿಠ್ಠಲ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಐವರ ಗುಂಪಿನಲ್ಲಿ ಒಬ್ಬ ವ್ಯಕ್ತಿ ಮತ್ತು ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ಅರೋಪಿ ಪರಾರಿಯಾಗಿದ್ದಾನೆ. ಆರೋಪಿಗಳಿಂದ ₹ 10 ಲಕ್ಷ ಮೌಲ್ಯದ ಕಾರು, ₹ 6.27 ಲಕ್ಷ ಮೌಲ್ಯದ 42 ಮೊಬೈಲ್ ಫೋನ್ ಮತ್ತು ದರೋಡೆ ಕೃತ್ಯಕ್ಕೆ ಬಳಸುವ ಹಗ್ಗ, ರಾಡ್ ಮತ್ತು ಕಾರದಪುಡಿಯನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಮೂವರು ಬಾಲಕರನ್ನು ಬಾಲ ನ್ಯಾಯ ಮಂಡಳಿಗೆ ಒಪ್ಪಿಸಲಾಗಿದೆ. ಪರಾರಿಯಾದ ಒಬ್ಬ ಆರೋಪಿಯ ಹುಡುಕಾಟ ಮುಂದುವರಿದಿದೆ.</p>.<p>ವಿವಿಧ ಸಂತೆಗಳಲ್ಲಿ ಮೊಬೈಲ್ ಕದಿಯುತ್ತಿದ್ದ ಬಾಲಕರು, ಅವುಗಳನ್ನು ಪರಾರಿಯಾದ ವ್ಯಕ್ತಿಗೆ ಕೊಡುತ್ತಿದ್ದರು ಎಂದು ಬಾಲಕರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>ರಾತ್ರಿ ಗಸ್ತು ತಿರುಗುತ್ತಿದ್ದಾಗ ಪೊಲೀಸರನ್ನು ಕಂಡು ಆರೋಪಿಗಳು ಓಡಿ ಪರಾರಿಯಾಗಲು ಯತ್ನಿಸಿದರು. ಅವರನ್ನು ಬೆನ್ನತ್ತಿದ ಪೊಲೀಸರು ನಾಲ್ವರನ್ನು ಸೆರೆ ಹಿಡಿದಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರಡ್ಡಿ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ, ಡಿವೈಎಸ್ಪಿ ಮಹಾಂತೇಶ ಜಿದ್ದಿ, ಹೆಚ್ಚುವರಿ ಡಿವೈಎಸ್ಪಿ ನಾರಾಯಣ ಕುಲಕರ್ಣಿ ನಿರ್ದೇಶನದಲ್ಲಿ ಸಿಪಿಐ ಕರಿಯಪ್ಪ ಬನ್ನೆ, ಅಪರಾಧ ವಿಭಾಗದ ಪಿಎಸ್ಐ ವಿಜಯಕುಮಾರ ರಾಠೋಡ ಕಾರ್ಯಾಚರಣೆ ನಡೆಸಿದರು.</p>.<p>ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾದಾಮಿ: ಹೊರವಲಯದ ಗದಗ ಬೈಪಾಸ್ ರಸ್ತೆಯಲ್ಲಿ ದರೋಡೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬುಧವಾರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎಂದು ಪಿಎಸ್ಐ ವಿಠ್ಠಲ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಐವರ ಗುಂಪಿನಲ್ಲಿ ಒಬ್ಬ ವ್ಯಕ್ತಿ ಮತ್ತು ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ಅರೋಪಿ ಪರಾರಿಯಾಗಿದ್ದಾನೆ. ಆರೋಪಿಗಳಿಂದ ₹ 10 ಲಕ್ಷ ಮೌಲ್ಯದ ಕಾರು, ₹ 6.27 ಲಕ್ಷ ಮೌಲ್ಯದ 42 ಮೊಬೈಲ್ ಫೋನ್ ಮತ್ತು ದರೋಡೆ ಕೃತ್ಯಕ್ಕೆ ಬಳಸುವ ಹಗ್ಗ, ರಾಡ್ ಮತ್ತು ಕಾರದಪುಡಿಯನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಮೂವರು ಬಾಲಕರನ್ನು ಬಾಲ ನ್ಯಾಯ ಮಂಡಳಿಗೆ ಒಪ್ಪಿಸಲಾಗಿದೆ. ಪರಾರಿಯಾದ ಒಬ್ಬ ಆರೋಪಿಯ ಹುಡುಕಾಟ ಮುಂದುವರಿದಿದೆ.</p>.<p>ವಿವಿಧ ಸಂತೆಗಳಲ್ಲಿ ಮೊಬೈಲ್ ಕದಿಯುತ್ತಿದ್ದ ಬಾಲಕರು, ಅವುಗಳನ್ನು ಪರಾರಿಯಾದ ವ್ಯಕ್ತಿಗೆ ಕೊಡುತ್ತಿದ್ದರು ಎಂದು ಬಾಲಕರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>ರಾತ್ರಿ ಗಸ್ತು ತಿರುಗುತ್ತಿದ್ದಾಗ ಪೊಲೀಸರನ್ನು ಕಂಡು ಆರೋಪಿಗಳು ಓಡಿ ಪರಾರಿಯಾಗಲು ಯತ್ನಿಸಿದರು. ಅವರನ್ನು ಬೆನ್ನತ್ತಿದ ಪೊಲೀಸರು ನಾಲ್ವರನ್ನು ಸೆರೆ ಹಿಡಿದಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರಡ್ಡಿ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ, ಡಿವೈಎಸ್ಪಿ ಮಹಾಂತೇಶ ಜಿದ್ದಿ, ಹೆಚ್ಚುವರಿ ಡಿವೈಎಸ್ಪಿ ನಾರಾಯಣ ಕುಲಕರ್ಣಿ ನಿರ್ದೇಶನದಲ್ಲಿ ಸಿಪಿಐ ಕರಿಯಪ್ಪ ಬನ್ನೆ, ಅಪರಾಧ ವಿಭಾಗದ ಪಿಎಸ್ಐ ವಿಜಯಕುಮಾರ ರಾಠೋಡ ಕಾರ್ಯಾಚರಣೆ ನಡೆಸಿದರು.</p>.<p>ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>