<p><strong>ಹುನಗುಂದ</strong>: ತಾಲ್ಲೂಕಿನ ನಾಗೂರು ಗ್ರಾಮಕ್ಕೆ ನಿಗದಿತ ಸಮಯಕ್ಕೆ ಬಸ್ ಬಾರದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಗ್ರಾಮಸ್ಥರೊಂದಿಗೆ ಸೇರಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆಯಿತು.</p>.<p>ಗುಡೂರು ಮಾರ್ಗದಿಂದ ಹುನಗುಂದ ಪಟ್ಟಣಕ್ಕೆ ಬೆಳಿಗ್ಗೆ ಶಾಲೆ– ಕಾಲೇಜು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಹೀಗಾಗಿ ನಿಗದಿತ ಸಮಯಕ್ಕೆ ಶಾಲೆ– ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ.</p>.<p>ಈ ಮಾರ್ಗದಲ್ಲಿ ಕುಷ್ಟಗಿ ತಾಲ್ಲೂಕಿನ ಹುಚನೂರು, ಯರಿಗೋನಾಳ, ಪುರತಗೇರಿ, ಅಂಟರಠಾಣ, ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಗುಡೂರು, ಇಲಾಳ, ಮುರುಡಿ, ಗಾಣದಾಳ, ಇಲಾಳ, ನಾಗೂರು, ಯಡಹಳ್ಳಿ, ಬನ್ನಹಟ್ಟಿ, ಹಿರೇಬಾದವಾಡಗಿ ಸೇರಿದಂತೆ 15ಕ್ಕೂ ಹೆಚ್ಚು ಗ್ರಾಮಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಾರ್ಗವನ್ನು ಅವಲಂಬಿಸಿದ್ದು, ನಿತ್ಯ ಬಸ್ಗಾಗಿ ಪರದಾಡುವುದು ತಪ್ಪಿಲ್ಲ. ಜೊತೆಗೆ ಸಮಯಕ್ಕೆ ಸರಿಯಾಗಿ ಶಾಲೆ–ಕಾಲೇಜಗಳಿಗೆ ತೆರಳಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕಾಲೇಜು ವಿದ್ಯಾರ್ಥಿನಿಯೊಬ್ಬರು ದೂರಿದರು.</p>.<p>ಸರಿಸುಮಾರು 2-3 ಗಂಟೆಗಳ ಕಾಲ ಬಸ್ ತಡೆದಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಹುನಗುಂದ ಬಸ್ ಘಟಕದ ವ್ಯವಸ್ಥಾಪಕ ಎಸ್.ಆರ್. ಸೊನ್ನದ ಅವರನ್ನು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರವಾಣಿ ಮೂಲಕ ಸಂಪರ್ಕಿಸಿ ಚರ್ಚಿಸಿದರು. ಮುಂಬರುವ ದಿನಗಳಲ್ಲಿ ಬಸ್ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸೊನ್ನದ ಭರವಸೆ ನೀಡಿದರು.</p>.<p>ಶಾಲೆ–ಕಾಲೇಜುಗಳಿಗೆ ತೆರಳಲು ಸಮಯ ಮೀರಿದ್ದರಿಂದ ಕೆಲವು ವಿದ್ಯಾರ್ಥಿಗಳು ಪಟ್ಟಣದ ಬಸ್ ಘಟಕದ ಎದುರು ಜಮಾಯಿಸಿ ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದರು.</p>.<p>ಚಾಲಕ ಮತ್ತು ನಿರ್ವಾಹಕರು ವಿದ್ಯಾರ್ಥಿಗಳನ್ನು ಸಮಧಾನಪಡಿಸಲು ಮುಂದಾದರೂ ವಿದ್ಯಾರ್ಥಿಗಳ ಕೋಪ ಕಡಿಮೆಯಾಗಲಿಲ್ಲ. ನಂತರ ಸಮಯ ಮೀರಿದ್ದರಿಂದ ಬಹುತೇಕ ವಿದ್ಯಾರ್ಥಿಗಳು ಮರಳಿ ತಮ್ಮ ಊರಿಗೆ ಹೋದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಾಂತೇಶ ಮುರುಡಿ, ಗುಂಡನಗೌಡ ಪರತಗೌಡ್ರು, ಶರಣಪ್ಪ ಹೂಲಗೇರಿ, ಮಾಂತೇಶ ಮಾದರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ತಾಲ್ಲೂಕಿನ ನಾಗೂರು ಗ್ರಾಮಕ್ಕೆ ನಿಗದಿತ ಸಮಯಕ್ಕೆ ಬಸ್ ಬಾರದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಗ್ರಾಮಸ್ಥರೊಂದಿಗೆ ಸೇರಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆಯಿತು.</p>.<p>ಗುಡೂರು ಮಾರ್ಗದಿಂದ ಹುನಗುಂದ ಪಟ್ಟಣಕ್ಕೆ ಬೆಳಿಗ್ಗೆ ಶಾಲೆ– ಕಾಲೇಜು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಹೀಗಾಗಿ ನಿಗದಿತ ಸಮಯಕ್ಕೆ ಶಾಲೆ– ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ.</p>.<p>ಈ ಮಾರ್ಗದಲ್ಲಿ ಕುಷ್ಟಗಿ ತಾಲ್ಲೂಕಿನ ಹುಚನೂರು, ಯರಿಗೋನಾಳ, ಪುರತಗೇರಿ, ಅಂಟರಠಾಣ, ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಗುಡೂರು, ಇಲಾಳ, ಮುರುಡಿ, ಗಾಣದಾಳ, ಇಲಾಳ, ನಾಗೂರು, ಯಡಹಳ್ಳಿ, ಬನ್ನಹಟ್ಟಿ, ಹಿರೇಬಾದವಾಡಗಿ ಸೇರಿದಂತೆ 15ಕ್ಕೂ ಹೆಚ್ಚು ಗ್ರಾಮಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಾರ್ಗವನ್ನು ಅವಲಂಬಿಸಿದ್ದು, ನಿತ್ಯ ಬಸ್ಗಾಗಿ ಪರದಾಡುವುದು ತಪ್ಪಿಲ್ಲ. ಜೊತೆಗೆ ಸಮಯಕ್ಕೆ ಸರಿಯಾಗಿ ಶಾಲೆ–ಕಾಲೇಜಗಳಿಗೆ ತೆರಳಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕಾಲೇಜು ವಿದ್ಯಾರ್ಥಿನಿಯೊಬ್ಬರು ದೂರಿದರು.</p>.<p>ಸರಿಸುಮಾರು 2-3 ಗಂಟೆಗಳ ಕಾಲ ಬಸ್ ತಡೆದಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಹುನಗುಂದ ಬಸ್ ಘಟಕದ ವ್ಯವಸ್ಥಾಪಕ ಎಸ್.ಆರ್. ಸೊನ್ನದ ಅವರನ್ನು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರವಾಣಿ ಮೂಲಕ ಸಂಪರ್ಕಿಸಿ ಚರ್ಚಿಸಿದರು. ಮುಂಬರುವ ದಿನಗಳಲ್ಲಿ ಬಸ್ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸೊನ್ನದ ಭರವಸೆ ನೀಡಿದರು.</p>.<p>ಶಾಲೆ–ಕಾಲೇಜುಗಳಿಗೆ ತೆರಳಲು ಸಮಯ ಮೀರಿದ್ದರಿಂದ ಕೆಲವು ವಿದ್ಯಾರ್ಥಿಗಳು ಪಟ್ಟಣದ ಬಸ್ ಘಟಕದ ಎದುರು ಜಮಾಯಿಸಿ ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದರು.</p>.<p>ಚಾಲಕ ಮತ್ತು ನಿರ್ವಾಹಕರು ವಿದ್ಯಾರ್ಥಿಗಳನ್ನು ಸಮಧಾನಪಡಿಸಲು ಮುಂದಾದರೂ ವಿದ್ಯಾರ್ಥಿಗಳ ಕೋಪ ಕಡಿಮೆಯಾಗಲಿಲ್ಲ. ನಂತರ ಸಮಯ ಮೀರಿದ್ದರಿಂದ ಬಹುತೇಕ ವಿದ್ಯಾರ್ಥಿಗಳು ಮರಳಿ ತಮ್ಮ ಊರಿಗೆ ಹೋದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಾಂತೇಶ ಮುರುಡಿ, ಗುಂಡನಗೌಡ ಪರತಗೌಡ್ರು, ಶರಣಪ್ಪ ಹೂಲಗೇರಿ, ಮಾಂತೇಶ ಮಾದರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>