<p><strong>ಇಳಕಲ್:</strong> ನಗರದ ಜೋಶಿಗಲ್ಲಿಯಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಿಇ ಪದವೀಧರ ಅರುಣಕುಮಾರ ವೀರಣ್ಣ ಜೀರಗಿ (30) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.</p>.<p>ಮನೆಯ ಚಾವಣಿಯಿಂದ ಕಬ್ಬಿಣದ ಸರಳೊಂದನ್ನು ಕೆಳಗೆ ಇಳಿಸುವ ಸಂದರ್ಭದಲ್ಲಿ ಮನೆಯಿಂದ ಕೇವಲ 3 ಅಡಿ ಅಂತರದಲ್ಲಿ ಹಾಯ್ದು ಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿ ಆಕಸ್ಮಿಕವಾಗಿ ಸರಳಿಗೆ ತಗುಲಿದ ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ.</p>.<p>ಇವರು ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ವಿ.ಬಿ.ಜೀರಗಿ ಹಾಗೂ ಬಾಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ನಾಗರತ್ನಾ ಕಾಚೆಟ್ಟಿಯವರ ಏಕೈಕ ಪುತ್ರ. ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಸತಿ ಪ್ರದೇಶದಲ್ಲಿ ಎಚ್ಟಿ ಲೈನ್ ಒಂದನ್ನು ಮನೆಗಳಿಂದ 2–3 ಅಡಿಗಳ ಅಂತರದಲ್ಲಿ ಹಾಕಿರುವ ಹೆಸ್ಕಾಂ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರದ ವಸತಿ ಪ್ರದೇಶದಲ್ಲಿ ಹಾಯ್ದಿರುವ ಎಚ್ಟಿ ಲೈನ್ಗಳ ಬಗ್ಗೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳನ್ನು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಳಕಲ್:</strong> ನಗರದ ಜೋಶಿಗಲ್ಲಿಯಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಿಇ ಪದವೀಧರ ಅರುಣಕುಮಾರ ವೀರಣ್ಣ ಜೀರಗಿ (30) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.</p>.<p>ಮನೆಯ ಚಾವಣಿಯಿಂದ ಕಬ್ಬಿಣದ ಸರಳೊಂದನ್ನು ಕೆಳಗೆ ಇಳಿಸುವ ಸಂದರ್ಭದಲ್ಲಿ ಮನೆಯಿಂದ ಕೇವಲ 3 ಅಡಿ ಅಂತರದಲ್ಲಿ ಹಾಯ್ದು ಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿ ಆಕಸ್ಮಿಕವಾಗಿ ಸರಳಿಗೆ ತಗುಲಿದ ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ.</p>.<p>ಇವರು ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ವಿ.ಬಿ.ಜೀರಗಿ ಹಾಗೂ ಬಾಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ನಾಗರತ್ನಾ ಕಾಚೆಟ್ಟಿಯವರ ಏಕೈಕ ಪುತ್ರ. ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಸತಿ ಪ್ರದೇಶದಲ್ಲಿ ಎಚ್ಟಿ ಲೈನ್ ಒಂದನ್ನು ಮನೆಗಳಿಂದ 2–3 ಅಡಿಗಳ ಅಂತರದಲ್ಲಿ ಹಾಕಿರುವ ಹೆಸ್ಕಾಂ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರದ ವಸತಿ ಪ್ರದೇಶದಲ್ಲಿ ಹಾಯ್ದಿರುವ ಎಚ್ಟಿ ಲೈನ್ಗಳ ಬಗ್ಗೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳನ್ನು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>