<p> <strong>ಬಾಗಲಕೋಟೆ:</strong> ಕಾಶ್ಮೀರದ ಪಹಲ್ಗಾಮ್ ದಲ್ಲಿ ಹಿಂದೂಗಳ ಮೇಲೆ ಉಗ್ರರ ದಾಳಿ ಖಂಡಿಸಿ ಬಾಗಲಕೋಟೆಯಲ್ಲಿ ಬುಧವಾರ ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಪ್ರತಿಭಟನೆ ಮಾಡಲಾಯಿತು.</p>.<p>ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಿಜೆಪಿ ಉ್ರಗವಾಗಿ ಖಂಡಿಸುತ್ತದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.</p>.<p>ಬಸವೇಶ್ವರ ವೃತ್ತದಲ್ಲಿ ಬುಧವಾರ ಸಂಜೆ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದಿಂದ ಹಮ್ಮಿಕೊಂಡ ಶೃದ್ಧಾಂಜಲಿ ಸಭೆಯಲ್ಲಿ ಮೇಣದ ದೀಪ ಬೆಳಗಿ ನಮನ ಸಲ್ಲಿಸಲಾಯಿತು.</p>.<p>ಮೂಲಭೂತವಾದಿ ಉಗ್ರರನ್ನು ಬುಡ ಸಮೇತ ನಾಶ ಮಾಡಬೇಕು. ಇಂತಹ ಘಟನೆಗಳಿಗೆ ಭಾರತ ಬಗ್ಗುವುದಿಲ್ಲ. ಪ್ರಧಾನಮಂತ್ರಿ ಮೋದಿ ಅವರು ಸಮರ್ಥವಾಗಿ ಉತ್ತರ ನೀಡಲಿದ್ದಾರೆ ಎಂದರು.<br />ಸಿ.ವಿ.ಕೋಟಿ. ರಾಜು ರೇವಣಕರ, ಲಕ್ಷ್ಮೀನಾರಾಯಣ ಕಾಸಟ, ರಾಜು ನಾಯ್ಕರ, ಭಾಗೀರಥಿ ಪಾಟೀಲ, ಸವಿತಾ ಲೆಂಕೆಣ್ಣವರ, ಸರಸ್ವತಿ ಕುರಬರ, ಬಸವರಾಜ ಯಂಕಂಚಿ, ಗುಂಡುರಾವ್ ಶಿಂಧೆ, ಶಿವಾನಂದ ಟವಳಿ, ಯಲ್ಲಪ್ಪ ಬೆಂಡಿಗೇರಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಮತ್ತಿತರರು ಇದ್ದರು.</p>.<p>ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಕಚೇರಿಯಿಂದ ಬವೇಶ್ವರ ವೃತ್ತದವರೆಗೆ ಪ್ರತಿಭಟನೆ ಮಾಡಲಾಯಿತು.</p>.<p>ಪಿ.ಎಚ್. ಪೂಜಾರ, ಸಂಗನಗೌಡ ಗೌಡರ, ಡಾ. ಶೇಖರ ಮಾನೆ, ವಿರುಪಾಕ್ಷ ಅಮೃತಕರ, ಯಲ್ಲಪ್ಪ ಅಂಬಿಗೇರ, ಸಂಜು ಡಿಗ್ಗಿ, ಮಲ್ಲಿಕಾರ್ಜುನ ಸುರಪುರ, ಶೈಲು ಅಂಗಡಿ, ರಾಜು ಗೌಳಿ, ಕಳಕಪ್ಪ ಬಾದವಾಡಗಿ ಮತ್ತಿತರರು ಇದ್ದರು.</p>.<p>ಕಾಂಗ್ರೆಸ್ ವತಿಯಿಂದಲೂ ಬಸವೇಶ್ವರ ವೃತ್ತದಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಗುಪ್ತಚರ ಇಲಾಖೆ ಯಾಕೆ ವಿಫಲವಾಗುತ್ತಿದೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕು. ತಕ್ಷಣವೇ ಭದ್ರತಾ ಕ್ರಮಗಳನ್ನು ಬಲಪಡಿಸಬೇಕು. ಉಗ್ರರ ನೆಲೆಗಳನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ ಆಗ್ರಹಿಸಿದರು.</p>.<p>ಚಂದ್ರಶೇಖರ ರಾಠೋಡ, ರಮೇಶ ಬದ್ನೂರ, ಎಸ್.ಎನ್. ರಾಂಪುರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಬಾಗಲಕೋಟೆ:</strong> ಕಾಶ್ಮೀರದ ಪಹಲ್ಗಾಮ್ ದಲ್ಲಿ ಹಿಂದೂಗಳ ಮೇಲೆ ಉಗ್ರರ ದಾಳಿ ಖಂಡಿಸಿ ಬಾಗಲಕೋಟೆಯಲ್ಲಿ ಬುಧವಾರ ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಪ್ರತಿಭಟನೆ ಮಾಡಲಾಯಿತು.</p>.<p>ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಿಜೆಪಿ ಉ್ರಗವಾಗಿ ಖಂಡಿಸುತ್ತದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.</p>.<p>ಬಸವೇಶ್ವರ ವೃತ್ತದಲ್ಲಿ ಬುಧವಾರ ಸಂಜೆ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದಿಂದ ಹಮ್ಮಿಕೊಂಡ ಶೃದ್ಧಾಂಜಲಿ ಸಭೆಯಲ್ಲಿ ಮೇಣದ ದೀಪ ಬೆಳಗಿ ನಮನ ಸಲ್ಲಿಸಲಾಯಿತು.</p>.<p>ಮೂಲಭೂತವಾದಿ ಉಗ್ರರನ್ನು ಬುಡ ಸಮೇತ ನಾಶ ಮಾಡಬೇಕು. ಇಂತಹ ಘಟನೆಗಳಿಗೆ ಭಾರತ ಬಗ್ಗುವುದಿಲ್ಲ. ಪ್ರಧಾನಮಂತ್ರಿ ಮೋದಿ ಅವರು ಸಮರ್ಥವಾಗಿ ಉತ್ತರ ನೀಡಲಿದ್ದಾರೆ ಎಂದರು.<br />ಸಿ.ವಿ.ಕೋಟಿ. ರಾಜು ರೇವಣಕರ, ಲಕ್ಷ್ಮೀನಾರಾಯಣ ಕಾಸಟ, ರಾಜು ನಾಯ್ಕರ, ಭಾಗೀರಥಿ ಪಾಟೀಲ, ಸವಿತಾ ಲೆಂಕೆಣ್ಣವರ, ಸರಸ್ವತಿ ಕುರಬರ, ಬಸವರಾಜ ಯಂಕಂಚಿ, ಗುಂಡುರಾವ್ ಶಿಂಧೆ, ಶಿವಾನಂದ ಟವಳಿ, ಯಲ್ಲಪ್ಪ ಬೆಂಡಿಗೇರಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಮತ್ತಿತರರು ಇದ್ದರು.</p>.<p>ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಕಚೇರಿಯಿಂದ ಬವೇಶ್ವರ ವೃತ್ತದವರೆಗೆ ಪ್ರತಿಭಟನೆ ಮಾಡಲಾಯಿತು.</p>.<p>ಪಿ.ಎಚ್. ಪೂಜಾರ, ಸಂಗನಗೌಡ ಗೌಡರ, ಡಾ. ಶೇಖರ ಮಾನೆ, ವಿರುಪಾಕ್ಷ ಅಮೃತಕರ, ಯಲ್ಲಪ್ಪ ಅಂಬಿಗೇರ, ಸಂಜು ಡಿಗ್ಗಿ, ಮಲ್ಲಿಕಾರ್ಜುನ ಸುರಪುರ, ಶೈಲು ಅಂಗಡಿ, ರಾಜು ಗೌಳಿ, ಕಳಕಪ್ಪ ಬಾದವಾಡಗಿ ಮತ್ತಿತರರು ಇದ್ದರು.</p>.<p>ಕಾಂಗ್ರೆಸ್ ವತಿಯಿಂದಲೂ ಬಸವೇಶ್ವರ ವೃತ್ತದಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಗುಪ್ತಚರ ಇಲಾಖೆ ಯಾಕೆ ವಿಫಲವಾಗುತ್ತಿದೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕು. ತಕ್ಷಣವೇ ಭದ್ರತಾ ಕ್ರಮಗಳನ್ನು ಬಲಪಡಿಸಬೇಕು. ಉಗ್ರರ ನೆಲೆಗಳನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ ಆಗ್ರಹಿಸಿದರು.</p>.<p>ಚಂದ್ರಶೇಖರ ರಾಠೋಡ, ರಮೇಶ ಬದ್ನೂರ, ಎಸ್.ಎನ್. ರಾಂಪುರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>