<p><strong>ಬಾಗಲಕೋಟೆ</strong>: ‘ರಾಯಬಾಗ ತಾಲ್ಲೂಕಿನ ಕುಡಚಿಯ ರತ್ನಾ ಎಂಟರ್ಪ್ರೈಸಸ್ನಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಪುತ್ರ ವಿನಯ್ ತಿಮ್ಮಾಪುರ ಈಗ ಪಾಲುದಾರರಾಗಿಲ್ಲ’ ಎಂದು ರತ್ನಾ ಎಂಟರ್ಪ್ರೈಸಸ್ನ ಸುಧಾಕರ ಸಾಲಿಯಾನ, ರಂಜಿತ್ಕುಮಾರ್ ಶೆಟ್ಟಿ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಾಡ್ಜ್ ಆ್ಯಂಡ್ ರೆಸ್ಟೋರೆಂಟ್ ಇದ್ದಾಗ ವಿನಯ್ ತಿಮ್ಮಾಪುರ ಶೇ23ರಷ್ಟು ಪಾಲುದಾರರಾಗಿದ್ದರು. ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಡಲಾಗುವುದು ಎಂದು ಹೇಳಿದ ಮೇಲೆ ಅವರು ಪಾಲುದಾರಿಕೆಯಿಂದ ಹಿಂದೆ ಸರಿದರು. ಅವರ ಜಾಗಕ್ಕೆ ಬೇರೆಯವರನ್ನು ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ಗ್ರಾಮೀಣ ಭಾಗದಿಂದ ನಗರ ಭಾಗಕ್ಕೆ ಸ್ಥಳಾಂತರಿಸಲಾಗಿದೆ. ಜನ ವಸತಿ ಪ್ರದೇಶ ಎಂದು ಅನಾವಶ್ಯಕವಾಗಿ ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ. ಆರು ವರ್ಷಗಳಿಂದ ಅಲ್ಲಿ ಬೇರೆ ಯಾವುದೇ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿಲ್ಲ. ಇಲಾಖೆ ಕೇಳಿದ ಎಲ್ಲ ದಾಖಲೆಗಳನ್ನು ನೀಡಲಾಗಿದೆ’ ಎಂದರು.</p>.<p>‘ವಿನಯ್ ಹಾಗೂ ನಾನು ಯಾವುದೇ ಹೂಡಿಕೆ ಮಾಡಿಲ್ಲ. ರೆಸ್ಟೋರೆಂಟ್ ನಡೆಸಿಕೊಂಡು ಹೋಗುವುದಾಗಿ ಹೇಳಿದ್ದರಿಂದ ಪಾಲುದಾರಿಕೆ ನೀಡಲಾಗಿತ್ತು’ ಎಂದು ರಂಜಿತ್ಕುಮಾರ್ ಶೆಟ್ಟಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ರಾಯಬಾಗ ತಾಲ್ಲೂಕಿನ ಕುಡಚಿಯ ರತ್ನಾ ಎಂಟರ್ಪ್ರೈಸಸ್ನಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಪುತ್ರ ವಿನಯ್ ತಿಮ್ಮಾಪುರ ಈಗ ಪಾಲುದಾರರಾಗಿಲ್ಲ’ ಎಂದು ರತ್ನಾ ಎಂಟರ್ಪ್ರೈಸಸ್ನ ಸುಧಾಕರ ಸಾಲಿಯಾನ, ರಂಜಿತ್ಕುಮಾರ್ ಶೆಟ್ಟಿ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಾಡ್ಜ್ ಆ್ಯಂಡ್ ರೆಸ್ಟೋರೆಂಟ್ ಇದ್ದಾಗ ವಿನಯ್ ತಿಮ್ಮಾಪುರ ಶೇ23ರಷ್ಟು ಪಾಲುದಾರರಾಗಿದ್ದರು. ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಡಲಾಗುವುದು ಎಂದು ಹೇಳಿದ ಮೇಲೆ ಅವರು ಪಾಲುದಾರಿಕೆಯಿಂದ ಹಿಂದೆ ಸರಿದರು. ಅವರ ಜಾಗಕ್ಕೆ ಬೇರೆಯವರನ್ನು ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ಗ್ರಾಮೀಣ ಭಾಗದಿಂದ ನಗರ ಭಾಗಕ್ಕೆ ಸ್ಥಳಾಂತರಿಸಲಾಗಿದೆ. ಜನ ವಸತಿ ಪ್ರದೇಶ ಎಂದು ಅನಾವಶ್ಯಕವಾಗಿ ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ. ಆರು ವರ್ಷಗಳಿಂದ ಅಲ್ಲಿ ಬೇರೆ ಯಾವುದೇ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿಲ್ಲ. ಇಲಾಖೆ ಕೇಳಿದ ಎಲ್ಲ ದಾಖಲೆಗಳನ್ನು ನೀಡಲಾಗಿದೆ’ ಎಂದರು.</p>.<p>‘ವಿನಯ್ ಹಾಗೂ ನಾನು ಯಾವುದೇ ಹೂಡಿಕೆ ಮಾಡಿಲ್ಲ. ರೆಸ್ಟೋರೆಂಟ್ ನಡೆಸಿಕೊಂಡು ಹೋಗುವುದಾಗಿ ಹೇಳಿದ್ದರಿಂದ ಪಾಲುದಾರಿಕೆ ನೀಡಲಾಗಿತ್ತು’ ಎಂದು ರಂಜಿತ್ಕುಮಾರ್ ಶೆಟ್ಟಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>