ಇದಕ್ಕೂ ಮುನ್ನ ಬಾದಾಮಿಯ ಐತಿಹಾಸಿಕ ಮೇಣದ ಬಸದಿ ಹಾಗೂ ಗುಹೆಗಳನ್ನು ವೀಕ್ಷಣೆ ಮಾಡಿದ ಸಿದ್ದರಾಮಯ್ಯ, ಆ ಪರಿಸರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಪವಿಭಾಗಾಧಿಕಾರಿ ಜೆ.ಜಯಾ ಸಿದ್ದರಾಮಯ್ಯ ಅವರಿಗೆ ಅಲ್ಲಿನ ವಾಸ್ತವ ಸ್ಥಿತಿಗತಿ, ಸಾರ್ವಜನಿಕರ ಬೇಡಿಕೆಗಳು ಹಾಗೂ ಕೈಗೊಳ್ಳಲಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.