ಅವಕಾಶ ಕೊಟ್ಟರೆ ನಿಭಾಯಿಸುವೆ: ಕೆಪಿಸಿಸಿ ಎಲ್ಲ ಸಮಿತಿಗಳನ್ನು ಪುನಾರಚನೆ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲ ಸ್ಥಾನಗಳೂ ಬದಲಾವಣೆ ಆಗಲಿವೆ ಎಂದು ತಿಳಿಸಿದ ನಂಜಯ್ಯನಮಠ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಆದರೆ ಜಿಲ್ಲೆಯಲ್ಲಿ ಪಕ್ಷದ ನಾಯಕರು ಒಪ್ಪಿಗೆ ಸೂಚಿಸಿ ನನಗೆ ಜವಾಬ್ದಾರಿ ಕೊಡಲು ಮುಂದಾದರೆ ಒಪ್ಪಿಕೊಳ್ಳಲು ಸಿದ್ಧ ಎಂದರು.