<p><strong>ರಾಂಪುರ</strong>: ಬಾಗಲಕೋಟೆ-ಆಲಮಟ್ಟಿ ರಸ್ತೆಯಲ್ಲಿ ಬರುವ ಸೀತಿಮನಿ ಎಲ್.ಟಿ ಯಲ್ಲಿ ಬಸ್ ತಂಗುದಾಣ ನಿರ್ಮಿಸಿ ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಶಾಸಕ ಉಮೇಶ ಮೇಟಿ ಮಂಗಳವಾರ ತಮ್ಮ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಈ ಕುರಿತು ಮನವಿ ಸಲ್ಲಿಸಿ, ತಂಗುದಾಣ ಇರದೇ ಇರುವುದರಿಂದ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಗಾಗಿ ಕಾಯಲು ರಸ್ತೆಯಲ್ಲೇ ನಿಂತುಕೊಳ್ಳಬೇಕಾದ ಪರಿಸ್ಥಿತಿಯಿದೆ ಎಂದು ಹೇಳಿದರು.</p>.<p>ಜೊತೆಗೆ ಬಾಗಲಕೋಟೆಯಿಂದ ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ಕಡೆಗೆ ಹೋಗುವ ಬಸ್ ಗಳು ಸೀತಿಮನಿ ತಾಂಡಾ ಬಳಿ ನಿಲ್ಲದೇ ಹೋಗುತ್ತಿದ್ದು ಶಾಲಾ, ಕಾಲೇಜಿಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಕೆಲವಷ್ಟು ಬಸ್ಗಳನ್ನಾದರೂ ನಿಲುಗಡೆ ಮಾಡಿಸುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.</p>.<p>ಮುಖಂಡ ಬಸವಂತಪ್ಪ ಮೇಟಿ, ಸೀತಿಮನಿ ತಾಂಡಾದ ಸಂತೋಷ ಲಮಾಣಿ, ಗುರು ಲಮಾಣಿ, ಸಂಜು ಲಮಾಣಿ, ವಿಠ್ಠಲ ಲಮಾಣಿ, ಪ್ರಕಾಶ ಲಮಾಣಿ, ಆನಂದ ಲಮಾಣಿ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-19-212372332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ</strong>: ಬಾಗಲಕೋಟೆ-ಆಲಮಟ್ಟಿ ರಸ್ತೆಯಲ್ಲಿ ಬರುವ ಸೀತಿಮನಿ ಎಲ್.ಟಿ ಯಲ್ಲಿ ಬಸ್ ತಂಗುದಾಣ ನಿರ್ಮಿಸಿ ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಶಾಸಕ ಉಮೇಶ ಮೇಟಿ ಮಂಗಳವಾರ ತಮ್ಮ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಈ ಕುರಿತು ಮನವಿ ಸಲ್ಲಿಸಿ, ತಂಗುದಾಣ ಇರದೇ ಇರುವುದರಿಂದ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಗಾಗಿ ಕಾಯಲು ರಸ್ತೆಯಲ್ಲೇ ನಿಂತುಕೊಳ್ಳಬೇಕಾದ ಪರಿಸ್ಥಿತಿಯಿದೆ ಎಂದು ಹೇಳಿದರು.</p>.<p>ಜೊತೆಗೆ ಬಾಗಲಕೋಟೆಯಿಂದ ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ಕಡೆಗೆ ಹೋಗುವ ಬಸ್ ಗಳು ಸೀತಿಮನಿ ತಾಂಡಾ ಬಳಿ ನಿಲ್ಲದೇ ಹೋಗುತ್ತಿದ್ದು ಶಾಲಾ, ಕಾಲೇಜಿಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಕೆಲವಷ್ಟು ಬಸ್ಗಳನ್ನಾದರೂ ನಿಲುಗಡೆ ಮಾಡಿಸುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.</p>.<p>ಮುಖಂಡ ಬಸವಂತಪ್ಪ ಮೇಟಿ, ಸೀತಿಮನಿ ತಾಂಡಾದ ಸಂತೋಷ ಲಮಾಣಿ, ಗುರು ಲಮಾಣಿ, ಸಂಜು ಲಮಾಣಿ, ವಿಠ್ಠಲ ಲಮಾಣಿ, ಪ್ರಕಾಶ ಲಮಾಣಿ, ಆನಂದ ಲಮಾಣಿ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-19-212372332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>