<p><strong>ಬಾಗಲಕೋಟೆ:</strong> ಅಂಗನವಾಡಿ ಫಲಾನುಭವಿಗಳಿಗೆ ಆಹಾರ ನಿಡಲು ಕಡ್ಡಾಯವಾಗಿ ಪೇಸ್ ಕ್ಯಾಪ್ಚರ್ ಮಾಡಬೇಕು ಎಂದು ಕೇಂದ್ರ ಸರ್ಕಾರ ಜಾರಿಗೂಳಿಸಿದ ಆದೇಶ ಹಿಂದಕ್ಕೆ ಪಡೆಯಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರಗೆ ಶನಿವಾರರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಸದಸ್ಯರು ಮನವಿ ಸಲ್ಲಿಸಿದರು.</p>.<p>ಬಾಣಂತಿ, ಮಕ್ಕಳಿಗೆ ಸೌಲಭ್ಯ ನಿಡಲು ಅವರ ಫೇಸ್ ಕ್ಯಾಪ್ಚರ್ ಮಾಡುವ ಸಂದರ್ಭದಲ್ಲಿ ಸರ್ವರ್ ಸಮಸ್ಯೆ, ಇಲಾಖೆಯ ಪೋನ್ ನಲ್ಲಿ ಎಂಟ್ರಿ ಆಗದಿರುವುದು, ಫಲಾನುಭವಿಗಳು ಸರಿಯಾಗಿ ಒಟಿಪಿ ಹೇಳದಿರುವುದು, ಬಹುತೇಕ ಜನ ಫಲಾನುಭವಿಗಳು ಬಡವರಾಗಿರುವುದರಿಂದ ಫೋನ್ ರಿಚಾರ್ಜ್ ಮಾಡಿಸಿರುವುದಿಲ್ಲ ಎಂದು ತಿಳಿಸಿದರು.</p>.<p>ಫಲಾನುಭವಿ ಪೋನ್ಗೆ ಒಟಿಪಿ ಹೋಗುವುದಿಲ್ಲ. ನಂಬರ್ ಬದಲಾವಣೆ ಮಾಡಿರುತ್ತಾರೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗೆ ಹೂಗಿ ಪೇಸ್ ಕ್ಯಾಪ್ಚರ್ ಮಾಡುವಲ್ಲಿ ಈ ಎಲ್ಲ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಕೆಲಸದಿಂದ ಅಂಗನವಾಡಿ ಕೇಂದ್ರದಲ್ಲಿ ಶಾಲಾಪೂರ್ವ ಶಿಕ್ಷಣ ಮಕ್ಕಳಿಗೆ ಕಲಿಸುವುದು ಆಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಕೇಂದ್ರದ ಸಚಿವರು ಗಮನಕ್ಕೆ ತಂದು ಸಮಸ್ಯೆಯನ್ನು ಪರಿಹರಿಸಬೇಕು ಎಂದು ಕೋರಲಾಯಿತು.</p>.<p>ಮನವಿ ಪತ್ರ ಸ್ವಿಕರಿಸಿದ ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಕಮಲಾಬಾಯಿ ತೇಲಿ ಉಪಾದ್ಯಕ್ಷೆ ಕಸ್ತೂರಿ ಅಂಗಡಿ, ಮಂಜುಳಾ ನಾಯಕ, ಅಕ್ಕಮ್ಮ ಚಿತ್ತರಗಿ, ಹೇಮಾ ಪುರಾಣಿಕಮಠ, ಲಲಿತಾ ಮುಧೋಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಅಂಗನವಾಡಿ ಫಲಾನುಭವಿಗಳಿಗೆ ಆಹಾರ ನಿಡಲು ಕಡ್ಡಾಯವಾಗಿ ಪೇಸ್ ಕ್ಯಾಪ್ಚರ್ ಮಾಡಬೇಕು ಎಂದು ಕೇಂದ್ರ ಸರ್ಕಾರ ಜಾರಿಗೂಳಿಸಿದ ಆದೇಶ ಹಿಂದಕ್ಕೆ ಪಡೆಯಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರಗೆ ಶನಿವಾರರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಸದಸ್ಯರು ಮನವಿ ಸಲ್ಲಿಸಿದರು.</p>.<p>ಬಾಣಂತಿ, ಮಕ್ಕಳಿಗೆ ಸೌಲಭ್ಯ ನಿಡಲು ಅವರ ಫೇಸ್ ಕ್ಯಾಪ್ಚರ್ ಮಾಡುವ ಸಂದರ್ಭದಲ್ಲಿ ಸರ್ವರ್ ಸಮಸ್ಯೆ, ಇಲಾಖೆಯ ಪೋನ್ ನಲ್ಲಿ ಎಂಟ್ರಿ ಆಗದಿರುವುದು, ಫಲಾನುಭವಿಗಳು ಸರಿಯಾಗಿ ಒಟಿಪಿ ಹೇಳದಿರುವುದು, ಬಹುತೇಕ ಜನ ಫಲಾನುಭವಿಗಳು ಬಡವರಾಗಿರುವುದರಿಂದ ಫೋನ್ ರಿಚಾರ್ಜ್ ಮಾಡಿಸಿರುವುದಿಲ್ಲ ಎಂದು ತಿಳಿಸಿದರು.</p>.<p>ಫಲಾನುಭವಿ ಪೋನ್ಗೆ ಒಟಿಪಿ ಹೋಗುವುದಿಲ್ಲ. ನಂಬರ್ ಬದಲಾವಣೆ ಮಾಡಿರುತ್ತಾರೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗೆ ಹೂಗಿ ಪೇಸ್ ಕ್ಯಾಪ್ಚರ್ ಮಾಡುವಲ್ಲಿ ಈ ಎಲ್ಲ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಕೆಲಸದಿಂದ ಅಂಗನವಾಡಿ ಕೇಂದ್ರದಲ್ಲಿ ಶಾಲಾಪೂರ್ವ ಶಿಕ್ಷಣ ಮಕ್ಕಳಿಗೆ ಕಲಿಸುವುದು ಆಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಕೇಂದ್ರದ ಸಚಿವರು ಗಮನಕ್ಕೆ ತಂದು ಸಮಸ್ಯೆಯನ್ನು ಪರಿಹರಿಸಬೇಕು ಎಂದು ಕೋರಲಾಯಿತು.</p>.<p>ಮನವಿ ಪತ್ರ ಸ್ವಿಕರಿಸಿದ ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಕಮಲಾಬಾಯಿ ತೇಲಿ ಉಪಾದ್ಯಕ್ಷೆ ಕಸ್ತೂರಿ ಅಂಗಡಿ, ಮಂಜುಳಾ ನಾಯಕ, ಅಕ್ಕಮ್ಮ ಚಿತ್ತರಗಿ, ಹೇಮಾ ಪುರಾಣಿಕಮಠ, ಲಲಿತಾ ಮುಧೋಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>