<p><strong>ಬಾಗಲಕೋಟೆ</strong>: ಶಾಸಕರಾಗಿದ್ದ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ವಿಷಯವಾದರೆ, ಆಡಳಿತ ವಿರೋಧಿ ಅಲೆಯ ಸಾಬೀತು ಮಾಡುವ ಉಮೇದಿನಲ್ಲಿ ಬಿಜೆಪಿ ಇದೆ.</p>.<p>ಸಚಿವ ಸತೀಶ ಜಾರಕಿಹೊಳಿ ಈಚೆಗೆ ಬಾಗಲಕೋಟೆಗೆ ಬಂದಾಗ ಮುಖಂಡರಿಗೆ ಉಪಚುನಾವಣೆಗೆ ಸಿದ್ಧರಾಗಿರುವಂತೆ ಸೂಚಿಸಿದ್ದು ಅಲ್ಲದೇ ಕ್ಷೇತ್ರದ ಮಾಹಿತಿ ಪಡೆದಿದ್ದಾರೆ. ಅಭ್ಯರ್ಥಿ ಆಯ್ಕೆ, ಗೆಲುವಿನ ಲೆಕ್ಕಾಚಾರ ಕುರಿತು ಕಾಂಗ್ರೆಸ್ನಿಂದ ಸರ್ವೆ ಆರಂಭಗೊಂಡಿದೆ.</p>.<p>ಇನ್ನೊಂದೆಡೆ ಬೆಂಗಳೂರಿನಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಮಾಜಿ ಸಂಸದ ಸದಾನಂದಗೌಡ ಸಭೆ ನಡೆಸಿದ್ದಾರೆ. ಪಕ್ಷದಲ್ಲಿನ ಒಳಜಗಳ ಬಗೆಹರಿಸಲು ಪ್ರಯತ್ನಿಸುವುದರ ಜೊತೆಗೆ ಗೆಲುವಿಗೆ ಬೇಕಾದ ಸಿದ್ದತೆಯನ್ನು ಬಿಜೆಪಿ ಮಾಡುತ್ತಿದೆ.</p>.<p>‘ಎಚ್.ವೈ.ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು’ ಎಂಬ ಕೂಗು ಕಾಂಗ್ರೆಸ್ನಲ್ಲಿ ಜೋರಾಗಿದೆ. ಮೇಟಿ ಅವರ ಕುಟುಂಬದಲ್ಲಿ ಪುತ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಪುತ್ರರಾದ ಮಲ್ಲಿಕಾರ್ಜುನ ಮೇಟಿ ಹಾಗೂ ಉಮೇಶ ಮೇಟಿ ಹೆಸರುಗಳು ಚಾಲ್ತಿಯಲ್ಲಿವೆ.</p>.<p>ಮೇಟಿ ಅವರ ನಿಧನಕ್ಕೂ ಮುನ್ನ ಬಾಯಕ್ಕ ಮೇಟಿ ಹೊರತುಪಡಿಸಿದರೆ, ಪುತ್ರರಿಬ್ಬರೂ ಪಕ್ಷದ ಚಟುವಟಿಕೆಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ನಿಧನ ಬಳಿಕ ಎಲ್ಲ ಕಾರ್ಯಕ್ರಮಗಳಲ್ಲಿ ಪುತ್ರರಿಬ್ಬರೂ ಹಾಜರಾಗುವ ಮೂಲಕ ಉಮೇದುವಾರಿಕೆಗೆ ಸಿದ್ಧತೆ ನಡೆಸಿದ್ದಾರೆ.</p>.<p>ಎಚ್.ವೈ. ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಜತೆಗೆ ಅವರು ಮುಖ್ಯಮಂತ್ರಿಯವರ ಸಮುದಾಯಕ್ಕೆ ಸೇರಿದವರು. ಹೀಗಾಗಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಮುಖ್ಯಮಂತ್ರಿ ಮಾತೇ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.</p>.<p>ಬಿಜೆಪಿಯಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ಕಳೆದ ಚುಣಾವಣೆಯಲ್ಲಿ ಅವರ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸಹೋದರ ಮಲ್ಲಿಕಾರ್ಜುನ ಚರಂತಿಮಠ 10 ಸಾವಿರ ಮತಗಳನ್ನು ಪಡೆದು ಬಿಜೆಪಿ ಸೋಲಿಗೆ ಕಾರಣರಾಗಿದ್ದರು. ಈಗ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.</p>.<p>ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ನಡುವಿನ ಕಿತ್ತಾಟ ಮುಂದುವರೆದಿದೆ. ‘ಇಬ್ಬರೂ ನಾಯಕರ ಭಿನ್ನಮತ ಶಮನಗೊಳಿಸುವ ಕೆಲಸ ಆಗಬೇಕಿದೆ’ ಎನ್ನುವುದು ಮುಖಂಡರ ಅನಿಸಿಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಶಾಸಕರಾಗಿದ್ದ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ವಿಷಯವಾದರೆ, ಆಡಳಿತ ವಿರೋಧಿ ಅಲೆಯ ಸಾಬೀತು ಮಾಡುವ ಉಮೇದಿನಲ್ಲಿ ಬಿಜೆಪಿ ಇದೆ.</p>.<p>ಸಚಿವ ಸತೀಶ ಜಾರಕಿಹೊಳಿ ಈಚೆಗೆ ಬಾಗಲಕೋಟೆಗೆ ಬಂದಾಗ ಮುಖಂಡರಿಗೆ ಉಪಚುನಾವಣೆಗೆ ಸಿದ್ಧರಾಗಿರುವಂತೆ ಸೂಚಿಸಿದ್ದು ಅಲ್ಲದೇ ಕ್ಷೇತ್ರದ ಮಾಹಿತಿ ಪಡೆದಿದ್ದಾರೆ. ಅಭ್ಯರ್ಥಿ ಆಯ್ಕೆ, ಗೆಲುವಿನ ಲೆಕ್ಕಾಚಾರ ಕುರಿತು ಕಾಂಗ್ರೆಸ್ನಿಂದ ಸರ್ವೆ ಆರಂಭಗೊಂಡಿದೆ.</p>.<p>ಇನ್ನೊಂದೆಡೆ ಬೆಂಗಳೂರಿನಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಮಾಜಿ ಸಂಸದ ಸದಾನಂದಗೌಡ ಸಭೆ ನಡೆಸಿದ್ದಾರೆ. ಪಕ್ಷದಲ್ಲಿನ ಒಳಜಗಳ ಬಗೆಹರಿಸಲು ಪ್ರಯತ್ನಿಸುವುದರ ಜೊತೆಗೆ ಗೆಲುವಿಗೆ ಬೇಕಾದ ಸಿದ್ದತೆಯನ್ನು ಬಿಜೆಪಿ ಮಾಡುತ್ತಿದೆ.</p>.<p>‘ಎಚ್.ವೈ.ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು’ ಎಂಬ ಕೂಗು ಕಾಂಗ್ರೆಸ್ನಲ್ಲಿ ಜೋರಾಗಿದೆ. ಮೇಟಿ ಅವರ ಕುಟುಂಬದಲ್ಲಿ ಪುತ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಪುತ್ರರಾದ ಮಲ್ಲಿಕಾರ್ಜುನ ಮೇಟಿ ಹಾಗೂ ಉಮೇಶ ಮೇಟಿ ಹೆಸರುಗಳು ಚಾಲ್ತಿಯಲ್ಲಿವೆ.</p>.<p>ಮೇಟಿ ಅವರ ನಿಧನಕ್ಕೂ ಮುನ್ನ ಬಾಯಕ್ಕ ಮೇಟಿ ಹೊರತುಪಡಿಸಿದರೆ, ಪುತ್ರರಿಬ್ಬರೂ ಪಕ್ಷದ ಚಟುವಟಿಕೆಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ನಿಧನ ಬಳಿಕ ಎಲ್ಲ ಕಾರ್ಯಕ್ರಮಗಳಲ್ಲಿ ಪುತ್ರರಿಬ್ಬರೂ ಹಾಜರಾಗುವ ಮೂಲಕ ಉಮೇದುವಾರಿಕೆಗೆ ಸಿದ್ಧತೆ ನಡೆಸಿದ್ದಾರೆ.</p>.<p>ಎಚ್.ವೈ. ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಜತೆಗೆ ಅವರು ಮುಖ್ಯಮಂತ್ರಿಯವರ ಸಮುದಾಯಕ್ಕೆ ಸೇರಿದವರು. ಹೀಗಾಗಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಮುಖ್ಯಮಂತ್ರಿ ಮಾತೇ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.</p>.<p>ಬಿಜೆಪಿಯಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ಕಳೆದ ಚುಣಾವಣೆಯಲ್ಲಿ ಅವರ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸಹೋದರ ಮಲ್ಲಿಕಾರ್ಜುನ ಚರಂತಿಮಠ 10 ಸಾವಿರ ಮತಗಳನ್ನು ಪಡೆದು ಬಿಜೆಪಿ ಸೋಲಿಗೆ ಕಾರಣರಾಗಿದ್ದರು. ಈಗ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.</p>.<p>ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ನಡುವಿನ ಕಿತ್ತಾಟ ಮುಂದುವರೆದಿದೆ. ‘ಇಬ್ಬರೂ ನಾಯಕರ ಭಿನ್ನಮತ ಶಮನಗೊಳಿಸುವ ಕೆಲಸ ಆಗಬೇಕಿದೆ’ ಎನ್ನುವುದು ಮುಖಂಡರ ಅನಿಸಿಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>