<p><strong>ಬಾಗಲಕೋಟೆ:</strong> ನಗರದ ಎಸ್. ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿಗೆ ‘ಸ್ಟುಡೆಂಟ್ಸ್ ಬಿ ಕೇರ್ಫುಲ್’ ಕರಪತ್ರ ಹಂಚಲು ಹೋಗಿದ್ದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>ಎನ್ಎಸ್ಯುಐ ಮುಖಂಡರು ಕೇಸರಿ ಶಾಲು ಧರಿಸಿ, ಕಾಲೇಜಿನ ವಿದ್ಯಾರ್ಥಿಗಳಿಗೆ ವೀರಣ್ಣ ಚರಂತಿಮಠ ಅವರಿಗೆ ಹಾಕಿದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಪ್ರಜಾಪ್ರಭುತ್ವ ಉಳಿಸಿ ಎಂಬುದು ಸೇರಿದಂತೆ ಹಲವು ಅಂಶಗಳನ್ನು ಒಳಗೊಂಡ ಕರಪತ್ರ ಹಂಚುತ್ತಿದ್ದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಲೇಜಿನ ಸಿಬ್ಬಂದಿ, ನೀವು ಯಾರು? ಯಾಕೆ ಇಲ್ಲಿ ಬಂದಿರುವಿರಿ ಎಂದು ಪ್ರಶ್ನಿಸಿದರು. </p>.<p>ವಿಷಯ ಗೊತ್ತಾಗಿ ಕೆಲವು ಬಿಜೆಪಿ ಕಾರ್ಯಕರ್ತರು ಬಂದಾಗ ಮಾತಿನ ಚಕಮಕಿ ನಡೆಯಿತು. ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. </p>.<p>ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ಮೇಲೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ನಾಗರಾಜ ಹದ್ಲಿ, ಚಂದ್ರಶೇಖರ ರಾಠೋಡ ಮತ್ತಿತರರು ಬಂದರು.</p>.<p>ಇನ್ನೊಂದೆಡೆ ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ರಾಜು ರೇವಣಕರ, ಬಸವರಾಜ ಯಂಕಂಚಿ ಮತ್ತಿತರರೂ ಬಂದು ಸೇರಿದರು.</p>.<p>ಠಾಣೆ ಎದುರು ನೂರಾರು ಜನರು ಸೇರಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯುತ್ತಲೇ ಇದೆ.</p>.<p>ಮುಖಂಡರನ್ನು ಕರೆಯಿಸಿ ಠಾಣೆಯಲ್ಲಿ ಮಾತುಕತೆ ನಡೆಸಲಾಗುತ್ತಿದ್ದು, ಪ್ರಕರಣ ದಾಖಲಾಗಿಲ್ಲ. </p>.<p>ಈ ನಡುವೆ ಠಾಣೆಯಿಂದಲೇ ಫೇಸ್ಲೈವ್ ಬಂದಿರುವ ಎನ್ಎಸ್ಯುಐ ಮುಖಂಡರು, ಕಾಲೇಜಿನ ವಿದ್ಯಾರ್ಥಿಗಳು ಬಂದು ಇಂತಹವರಿಗೆ ಮತ ಹಾಕಬೇಕು ಎಂದು ಒತ್ತಡ ಹಾಕಲಾಗುತ್ತಿದೆ ಎಂದು ದೂರಿದ್ದರು. ಆದ್ದರಿಂದ ಜಾಗೃತಿ ಮೂಡಿಸಲು ಅಲ್ಲಿಗೆ ಹೋಗಿದ್ದೆವು’ ಎಂದು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರದ ಎಸ್. ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿಗೆ ‘ಸ್ಟುಡೆಂಟ್ಸ್ ಬಿ ಕೇರ್ಫುಲ್’ ಕರಪತ್ರ ಹಂಚಲು ಹೋಗಿದ್ದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>ಎನ್ಎಸ್ಯುಐ ಮುಖಂಡರು ಕೇಸರಿ ಶಾಲು ಧರಿಸಿ, ಕಾಲೇಜಿನ ವಿದ್ಯಾರ್ಥಿಗಳಿಗೆ ವೀರಣ್ಣ ಚರಂತಿಮಠ ಅವರಿಗೆ ಹಾಕಿದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಪ್ರಜಾಪ್ರಭುತ್ವ ಉಳಿಸಿ ಎಂಬುದು ಸೇರಿದಂತೆ ಹಲವು ಅಂಶಗಳನ್ನು ಒಳಗೊಂಡ ಕರಪತ್ರ ಹಂಚುತ್ತಿದ್ದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಲೇಜಿನ ಸಿಬ್ಬಂದಿ, ನೀವು ಯಾರು? ಯಾಕೆ ಇಲ್ಲಿ ಬಂದಿರುವಿರಿ ಎಂದು ಪ್ರಶ್ನಿಸಿದರು. </p>.<p>ವಿಷಯ ಗೊತ್ತಾಗಿ ಕೆಲವು ಬಿಜೆಪಿ ಕಾರ್ಯಕರ್ತರು ಬಂದಾಗ ಮಾತಿನ ಚಕಮಕಿ ನಡೆಯಿತು. ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. </p>.<p>ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ಮೇಲೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ನಾಗರಾಜ ಹದ್ಲಿ, ಚಂದ್ರಶೇಖರ ರಾಠೋಡ ಮತ್ತಿತರರು ಬಂದರು.</p>.<p>ಇನ್ನೊಂದೆಡೆ ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ರಾಜು ರೇವಣಕರ, ಬಸವರಾಜ ಯಂಕಂಚಿ ಮತ್ತಿತರರೂ ಬಂದು ಸೇರಿದರು.</p>.<p>ಠಾಣೆ ಎದುರು ನೂರಾರು ಜನರು ಸೇರಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯುತ್ತಲೇ ಇದೆ.</p>.<p>ಮುಖಂಡರನ್ನು ಕರೆಯಿಸಿ ಠಾಣೆಯಲ್ಲಿ ಮಾತುಕತೆ ನಡೆಸಲಾಗುತ್ತಿದ್ದು, ಪ್ರಕರಣ ದಾಖಲಾಗಿಲ್ಲ. </p>.<p>ಈ ನಡುವೆ ಠಾಣೆಯಿಂದಲೇ ಫೇಸ್ಲೈವ್ ಬಂದಿರುವ ಎನ್ಎಸ್ಯುಐ ಮುಖಂಡರು, ಕಾಲೇಜಿನ ವಿದ್ಯಾರ್ಥಿಗಳು ಬಂದು ಇಂತಹವರಿಗೆ ಮತ ಹಾಕಬೇಕು ಎಂದು ಒತ್ತಡ ಹಾಕಲಾಗುತ್ತಿದೆ ಎಂದು ದೂರಿದ್ದರು. ಆದ್ದರಿಂದ ಜಾಗೃತಿ ಮೂಡಿಸಲು ಅಲ್ಲಿಗೆ ಹೋಗಿದ್ದೆವು’ ಎಂದು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>