<p><strong>ಬಾಗಲಕೋಟೆ</strong>: ‘ಬಾಗಲಕೋಟೆಯ ಉಪಚುನಾವಣೆ ಗೆಲುವು ಮುಂದಿನ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ಬಾಗಲಕೋಟೆ ಉಪ ಚುನಾವಣಾ ಉಸ್ತುವಾರಿ ಅರುಣ ಶಹಾಪುರ ಹೇಳಿದರು.</p>.<p>ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಬಾಗಲಕೋಟೆ ಉಪಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಅಭಿವೃದ್ಧಿ ಕೆಲಸಗಳ ಮೂಲಕ ಬಾಗಲಕೋಟೆಯನ್ನು ಬಿಜೆಪಿ ಭದ್ರಕೋಟೆಯಾಗಿಸಿಕೊಂಡಿದೆ. ಅದನ್ನು ಮತ್ತೇ ಮರುಸ್ಥಾಪಿಸುವ ಸಂಕಲ್ಪ ನಮ್ಮೆಲ್ಲರಲ್ಲಿ ಇದೆ’ ಎಂದರು.</p>.<p>ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ‘ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಕಷ್ಟು ಅವಕಾಶಗಳಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ. ಬಾಗಲಕೋಟೆಯಲ್ಲಿ ಗೆಲುವು ಶತಸಿದ್ಧ’ ಎಂದು ಹೇಳಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾತನಾಡಿ, ‘ಜಿಲ್ಲೆಯ ಎಲ್ಲ ನಾಯಕರೂ ಒಂದಾಗಿದ್ದೇವೆ. ಎಲ್ಲರೂ ಕೂಡಿ ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೇಲ್ಲಿಸೋಣ. ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದರು.</p>.<p>ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು.</p>.<p>ಮಾಜಿ ಶಾಸಕ ವೀರಣ್ಣ ಚರಂತಿಮಠ, ಶಾಸಕ ಜಗದೀಶ ಗುಡುಗುಂಟಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ದೊಡ್ಡನಗೌಡ ಪಾಟೀಲ, ಜಿ.ಎಸ್.ನ್ಯಾಮಗೌಡ, ರಾಜಶೇಖರ ಶೀಲವಂತ, ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ, ಅಶೋಕ ಲಿಂಬಾವಳಿ, ಬಸವರಾಜ ಯಂಕಂಚಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಬಾಗಲಕೋಟೆಯ ಉಪಚುನಾವಣೆ ಗೆಲುವು ಮುಂದಿನ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ಬಾಗಲಕೋಟೆ ಉಪ ಚುನಾವಣಾ ಉಸ್ತುವಾರಿ ಅರುಣ ಶಹಾಪುರ ಹೇಳಿದರು.</p>.<p>ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಬಾಗಲಕೋಟೆ ಉಪಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಅಭಿವೃದ್ಧಿ ಕೆಲಸಗಳ ಮೂಲಕ ಬಾಗಲಕೋಟೆಯನ್ನು ಬಿಜೆಪಿ ಭದ್ರಕೋಟೆಯಾಗಿಸಿಕೊಂಡಿದೆ. ಅದನ್ನು ಮತ್ತೇ ಮರುಸ್ಥಾಪಿಸುವ ಸಂಕಲ್ಪ ನಮ್ಮೆಲ್ಲರಲ್ಲಿ ಇದೆ’ ಎಂದರು.</p>.<p>ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ‘ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಕಷ್ಟು ಅವಕಾಶಗಳಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ. ಬಾಗಲಕೋಟೆಯಲ್ಲಿ ಗೆಲುವು ಶತಸಿದ್ಧ’ ಎಂದು ಹೇಳಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾತನಾಡಿ, ‘ಜಿಲ್ಲೆಯ ಎಲ್ಲ ನಾಯಕರೂ ಒಂದಾಗಿದ್ದೇವೆ. ಎಲ್ಲರೂ ಕೂಡಿ ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೇಲ್ಲಿಸೋಣ. ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದರು.</p>.<p>ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು.</p>.<p>ಮಾಜಿ ಶಾಸಕ ವೀರಣ್ಣ ಚರಂತಿಮಠ, ಶಾಸಕ ಜಗದೀಶ ಗುಡುಗುಂಟಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ದೊಡ್ಡನಗೌಡ ಪಾಟೀಲ, ಜಿ.ಎಸ್.ನ್ಯಾಮಗೌಡ, ರಾಜಶೇಖರ ಶೀಲವಂತ, ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ, ಅಶೋಕ ಲಿಂಬಾವಳಿ, ಬಸವರಾಜ ಯಂಕಂಚಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>