<p><strong>ಬಾಗಲಕೋಟೆ:</strong> ಅನುಕಂಪ, ಜನಪ್ರಿಯತೆ ಕುರಿತು ಸರ್ವೆ ಮಾಡಲಾಗುವುದು. ಎರಡನ್ನೂ ಪರಿಗಣಿಸಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಟಿಕೆಟ್ಗಾಗಿ ಮೇಟಿ ಕುಟುಂಬದಲ್ಲಿನ ಪೈಪೋಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಎಲ್ಲವೂ ಸರಿ ಮಾಡಲಾಗುವುದು. ಜಿಲ್ಲಾ ಅಧ್ಯಕ್ಷರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಗಲಭೆಯಲ್ಲಿ ಯಾರೂ ಭಾಗಿಯಾಗಿರುತ್ತಾರೆ ಅವರನ್ನು ಪೊಲೀಸರು ಬಂಧಿಸಿರುತ್ತಾರೆ. ಅದರಲ್ಲಿ ಹಿಂದೂ, ಮುಸ್ಲಿಮ ಅಂತ ವ್ಯತ್ಯಾಸ ಮಾಡುವುದಿಲ್ಲ ಎಂದು ಹೇಳಿದರು.</p>.<p>ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ವರ್ಷ ಎಂದು ಯಾರೂ ಹೇಳಿಲ್ಲ, ಎರಡೂವರ್ಷ ವರ್ಷ ಅಂತಾನೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಇರುತ್ತಾರೆ ಎಂದು ಅನಿಸುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಅನುಕಂಪ, ಜನಪ್ರಿಯತೆ ಕುರಿತು ಸರ್ವೆ ಮಾಡಲಾಗುವುದು. ಎರಡನ್ನೂ ಪರಿಗಣಿಸಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಟಿಕೆಟ್ಗಾಗಿ ಮೇಟಿ ಕುಟುಂಬದಲ್ಲಿನ ಪೈಪೋಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಎಲ್ಲವೂ ಸರಿ ಮಾಡಲಾಗುವುದು. ಜಿಲ್ಲಾ ಅಧ್ಯಕ್ಷರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಗಲಭೆಯಲ್ಲಿ ಯಾರೂ ಭಾಗಿಯಾಗಿರುತ್ತಾರೆ ಅವರನ್ನು ಪೊಲೀಸರು ಬಂಧಿಸಿರುತ್ತಾರೆ. ಅದರಲ್ಲಿ ಹಿಂದೂ, ಮುಸ್ಲಿಮ ಅಂತ ವ್ಯತ್ಯಾಸ ಮಾಡುವುದಿಲ್ಲ ಎಂದು ಹೇಳಿದರು.</p>.<p>ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ವರ್ಷ ಎಂದು ಯಾರೂ ಹೇಳಿಲ್ಲ, ಎರಡೂವರ್ಷ ವರ್ಷ ಅಂತಾನೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಇರುತ್ತಾರೆ ಎಂದು ಅನಿಸುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>