<p><strong>ಬಾಗಲಕೋಟೆ:</strong> ಅನುಕಂಪ, ಜನಪ್ರಿಯತೆ ಕುರಿತು ಸರ್ವೆ ಮಾಡಲಾಗುವುದು. ಎರಡನ್ನೂ ಪರಿಗಣಿಸಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಟಿಕೆಟ್ಗಾಗಿ ಮೇಟಿ ಕುಟುಂಬದಲ್ಲಿನ ಪೈಪೋಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಎಲ್ಲವೂ ಸರಿ ಮಾಡಲಾಗುವುದು. ಜಿಲ್ಲಾ ಅಧ್ಯಕ್ಷರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಗಲಭೆಯಲ್ಲಿ ಯಾರೂ ಭಾಗಿಯಾಗಿರುತ್ತಾರೆ ಅವರನ್ನು ಪೊಲೀಸರು ಬಂಧಿಸಿರುತ್ತಾರೆ. ಅದರಲ್ಲಿ ಹಿಂದೂ, ಮುಸ್ಲಿಮ ಅಂತ ವ್ಯತ್ಯಾಸ ಮಾಡುವುದಿಲ್ಲ ಎಂದು ಹೇಳಿದರು.</p>.<p>ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ವರ್ಷ ಎಂದು ಯಾರೂ ಹೇಳಿಲ್ಲ, ಎರಡೂವರ್ಷ ವರ್ಷ ಅಂತಾನೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಇರುತ್ತಾರೆ ಎಂದು ಅನಿಸುತ್ತದೆ ಎಂದರು.</p>
<p><strong>ಬಾಗಲಕೋಟೆ:</strong> ಅನುಕಂಪ, ಜನಪ್ರಿಯತೆ ಕುರಿತು ಸರ್ವೆ ಮಾಡಲಾಗುವುದು. ಎರಡನ್ನೂ ಪರಿಗಣಿಸಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಟಿಕೆಟ್ಗಾಗಿ ಮೇಟಿ ಕುಟುಂಬದಲ್ಲಿನ ಪೈಪೋಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಎಲ್ಲವೂ ಸರಿ ಮಾಡಲಾಗುವುದು. ಜಿಲ್ಲಾ ಅಧ್ಯಕ್ಷರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಗಲಭೆಯಲ್ಲಿ ಯಾರೂ ಭಾಗಿಯಾಗಿರುತ್ತಾರೆ ಅವರನ್ನು ಪೊಲೀಸರು ಬಂಧಿಸಿರುತ್ತಾರೆ. ಅದರಲ್ಲಿ ಹಿಂದೂ, ಮುಸ್ಲಿಮ ಅಂತ ವ್ಯತ್ಯಾಸ ಮಾಡುವುದಿಲ್ಲ ಎಂದು ಹೇಳಿದರು.</p>.<p>ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ವರ್ಷ ಎಂದು ಯಾರೂ ಹೇಳಿಲ್ಲ, ಎರಡೂವರ್ಷ ವರ್ಷ ಅಂತಾನೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಇರುತ್ತಾರೆ ಎಂದು ಅನಿಸುತ್ತದೆ ಎಂದರು.</p>