<p><strong>ಬಾಗಲಕೋಟೆ</strong>: ‘ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಬಿಜೆಪಿ ನಾಯಕರು ಪರೋಕ್ಷವಾಗಿ ಸಮ್ಮತಿ ನೀಡಿದ್ದಾರಾ’ ಎಂಬ ಪ್ರಶ್ನೆ ಕ್ಷೇತ್ರದಲ್ಲಿ ಚರ್ಚೆಯಾಗುತ್ತಿದೆ.</p>.<p>ನಾಮಪತ್ರ ಸಲ್ಲಿಕೆ ದಿನ ಬೃಹತ್ ರ್ಯಾಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತಿತರರು ಭಾಗವಹಿಸಿದ್ದರು.</p>.<p>ಬಿಜೆಪಿ ಕೆಲ ಕಾರ್ಯಕರ್ತರು ‘ಮುಂದಿನ ಸಿಎಂ ಯತ್ನಾಳ’ ಎಂಬ ಭಿತ್ತಿಚಿತ್ರ ಪ್ರದರ್ಶಿಸಿದ್ದರು. ಕೂಡಲೇ ಕೆಲ ನಾಯಕರು ಅದನ್ನು ಕಸಿದುಕೊಂಡಿದ್ದರು.</p>.<p>ನಂತರ ದಿನಗಳಲ್ಲೂ ಯುವಕರ, ಹಿಂದುತ್ವದ ಪರ ಒಲವುಳ್ಳವರ ಮತ ಸೆಳೆಯಲು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರಚಾರಕ್ಕೆ ಕರೆಯಿಸಬೇಕು ಎಂಬ ಕೂಗು ಪಕ್ಷದ ವೇದಿಕೆಗಳಲ್ಲಿ ಕೇಳಿ ಬಂದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕ ಯತ್ನಾಳ ಅವರೂ, ‘ವೀರಣ್ಣ ಚರಂತಿಮಠ ಹಲವು ಸಂದರ್ಭಗಳಲ್ಲಿ ನೆರವು ನೀಡಿದ್ದಾರೆ. ನಮ್ಮಿಬ್ಬರದು ಬಹಳ ಹಳೆಯ ಸಂಬಂಧ. ಅವಶ್ಯಕತೆ ಬಿದ್ದರೆ ನೋಡೋಣ’ ಎಂದಿದ್ದರು.</p>.<p>‘ಪಕ್ಷದಿಂದ ಉಚ್ಚಾಟನೆಗೊಂಡಿರುವ ಯತ್ನಾಳ ಅವರನ್ನು ಪ್ರಚಾರಕ್ಕೆ ಕರೆಯಿಸುವುದು ಹೇಗೆ’ ಎಂಬ ಪ್ರಶ್ನೆ ಬಿಜೆಪಿ ನಾಯಕರನ್ನು ಕಾಡುತ್ತಿತ್ತು. ಕರೆಸದಿದ್ದರೆ, ಕಾರ್ಯಕರ್ತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಕರೆಯಿಸಿದರೆ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂಬ ಸಂಕಟಕ್ಕೆ ಸಿಲುಕಿದ್ದರು.</p>.<p>ಜಿಲ್ಲೆಯ ಬಿಜೆಪಿ ನಾಯಕರು ಬಾಗಲಕೋಟೆ ಕ್ಷೇತ್ರದಲ್ಲಿ ಗೆಲುವಿನ ಯಾವುದೇ ಪ್ರಯತ್ನವನ್ನು ಬಿಡುವುದು ಬೇಡ. ಕೊನೆಗೂ ಬಿ.ವೈ. ವಿಜಯೇಂದ್ರ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಪಕ್ಷದ ಬ್ಯಾನರಡಿ ಮಾಡುವಂತಿಲ್ಲ. ಮುಖಂಡರೂ ಭಾಗವಹಿಸಬಾರದು ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>‘ಶಾಸಕ ಯತ್ನಾಳ ಅವರು ನಮ್ಮ ನಾಯಕರು. ಅವರು ಪ್ರಚಾರಕ್ಕೆ ಬಂದರೆ ಶಕ್ತಿಯೇ. ಹಿಂದುತ್ವ ಗೆಲ್ಲಬೇಕು’ ಎಂದು ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದರು.</p>.<p>ಯತ್ನಾಳ ಪ್ರಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ‘ಕೆಲ ಕಾಂಗ್ರೆಸ್ ಮುಖಂಡರೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿ ಗೆಲುವಿಗೆ ಯಾರೇ ಸಹಕರಿಸಿದರೂ ಸ್ವಾಗತಿಸುವೆ’ ಎಂದಿದ್ದಾರೆ. </p>.ಬಾಗಲಕೋಟೆ ಕ್ಷೇತ್ರ: ನಾಯಕರ ಉಳಿಸಿಕೊಳ್ಳಲು, ಸೆಳೆಯಲು ಪ್ರಯತ್ನ.ಮಹದೇವಪ್ಪ ನಮ್ಮ ಹೈಕಮಾಂಡ್ನ ಭಾಗ, ಸಮಯ ಬಂದಾಗ ಸಿಎಂನೇ ಎಲ್ಲಾ ಹೇಳ್ತಾರೆ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಬಿಜೆಪಿ ನಾಯಕರು ಪರೋಕ್ಷವಾಗಿ ಸಮ್ಮತಿ ನೀಡಿದ್ದಾರಾ’ ಎಂಬ ಪ್ರಶ್ನೆ ಕ್ಷೇತ್ರದಲ್ಲಿ ಚರ್ಚೆಯಾಗುತ್ತಿದೆ.</p>.<p>ನಾಮಪತ್ರ ಸಲ್ಲಿಕೆ ದಿನ ಬೃಹತ್ ರ್ಯಾಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತಿತರರು ಭಾಗವಹಿಸಿದ್ದರು.</p>.<p>ಬಿಜೆಪಿ ಕೆಲ ಕಾರ್ಯಕರ್ತರು ‘ಮುಂದಿನ ಸಿಎಂ ಯತ್ನಾಳ’ ಎಂಬ ಭಿತ್ತಿಚಿತ್ರ ಪ್ರದರ್ಶಿಸಿದ್ದರು. ಕೂಡಲೇ ಕೆಲ ನಾಯಕರು ಅದನ್ನು ಕಸಿದುಕೊಂಡಿದ್ದರು.</p>.<p>ನಂತರ ದಿನಗಳಲ್ಲೂ ಯುವಕರ, ಹಿಂದುತ್ವದ ಪರ ಒಲವುಳ್ಳವರ ಮತ ಸೆಳೆಯಲು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರಚಾರಕ್ಕೆ ಕರೆಯಿಸಬೇಕು ಎಂಬ ಕೂಗು ಪಕ್ಷದ ವೇದಿಕೆಗಳಲ್ಲಿ ಕೇಳಿ ಬಂದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕ ಯತ್ನಾಳ ಅವರೂ, ‘ವೀರಣ್ಣ ಚರಂತಿಮಠ ಹಲವು ಸಂದರ್ಭಗಳಲ್ಲಿ ನೆರವು ನೀಡಿದ್ದಾರೆ. ನಮ್ಮಿಬ್ಬರದು ಬಹಳ ಹಳೆಯ ಸಂಬಂಧ. ಅವಶ್ಯಕತೆ ಬಿದ್ದರೆ ನೋಡೋಣ’ ಎಂದಿದ್ದರು.</p>.<p>‘ಪಕ್ಷದಿಂದ ಉಚ್ಚಾಟನೆಗೊಂಡಿರುವ ಯತ್ನಾಳ ಅವರನ್ನು ಪ್ರಚಾರಕ್ಕೆ ಕರೆಯಿಸುವುದು ಹೇಗೆ’ ಎಂಬ ಪ್ರಶ್ನೆ ಬಿಜೆಪಿ ನಾಯಕರನ್ನು ಕಾಡುತ್ತಿತ್ತು. ಕರೆಸದಿದ್ದರೆ, ಕಾರ್ಯಕರ್ತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಕರೆಯಿಸಿದರೆ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂಬ ಸಂಕಟಕ್ಕೆ ಸಿಲುಕಿದ್ದರು.</p>.<p>ಜಿಲ್ಲೆಯ ಬಿಜೆಪಿ ನಾಯಕರು ಬಾಗಲಕೋಟೆ ಕ್ಷೇತ್ರದಲ್ಲಿ ಗೆಲುವಿನ ಯಾವುದೇ ಪ್ರಯತ್ನವನ್ನು ಬಿಡುವುದು ಬೇಡ. ಕೊನೆಗೂ ಬಿ.ವೈ. ವಿಜಯೇಂದ್ರ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಪಕ್ಷದ ಬ್ಯಾನರಡಿ ಮಾಡುವಂತಿಲ್ಲ. ಮುಖಂಡರೂ ಭಾಗವಹಿಸಬಾರದು ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>‘ಶಾಸಕ ಯತ್ನಾಳ ಅವರು ನಮ್ಮ ನಾಯಕರು. ಅವರು ಪ್ರಚಾರಕ್ಕೆ ಬಂದರೆ ಶಕ್ತಿಯೇ. ಹಿಂದುತ್ವ ಗೆಲ್ಲಬೇಕು’ ಎಂದು ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದರು.</p>.<p>ಯತ್ನಾಳ ಪ್ರಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ‘ಕೆಲ ಕಾಂಗ್ರೆಸ್ ಮುಖಂಡರೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿ ಗೆಲುವಿಗೆ ಯಾರೇ ಸಹಕರಿಸಿದರೂ ಸ್ವಾಗತಿಸುವೆ’ ಎಂದಿದ್ದಾರೆ. </p>.ಬಾಗಲಕೋಟೆ ಕ್ಷೇತ್ರ: ನಾಯಕರ ಉಳಿಸಿಕೊಳ್ಳಲು, ಸೆಳೆಯಲು ಪ್ರಯತ್ನ.ಮಹದೇವಪ್ಪ ನಮ್ಮ ಹೈಕಮಾಂಡ್ನ ಭಾಗ, ಸಮಯ ಬಂದಾಗ ಸಿಎಂನೇ ಎಲ್ಲಾ ಹೇಳ್ತಾರೆ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>