<p><strong>ಬಾಗಲಕೋಟೆ: </strong>ಪ್ರತಿ ಮೃತ ದೇಹ ಗುಣಿಯಲ್ಲಿ (ತೆಗ್ಗು) ಹಾಕುವ ಮುನ್ನ ಊದುಕಡ್ಡಿ ಬೆಳಗಿ, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಕಿರಿಯರಿಗೆ ಹಿರಿಯನಾಗಿ, ಹಿರಿಯ ಜೀವಗಳಿಗೆ ಮನೆಯ ಮಗನಾಗಿ ಮಣ್ಣು ಹಾಕುತ್ತೇನೆ..</p>.<p>ಇದು ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆ ನೆರವೇರಿಸುವ ತಂಡದ ಪ್ರಮುಖ ಕೃಷ್ಣಪ್ಪ ಮರಡಿಮನೆ ಅವರ ಮಾತು.</p>.<p>ಸ್ವತಃ ಆಂಬುಲೆನ್ಸ್ ಚಾಲಕರೂ ಆಗಿರುವ ಕೃಷ್ಣಪ್ಪ, ಜಿಲ್ಲೆಯಲ್ಲಿ ಕೋವಿಡ್ಗೆ ಮೊದಲು ಬಲಿಯಾದ 78 ವರ್ಷದ ವೃದ್ಧರಿಂದ ಮೊದಲುಗೊಂಡ ಕಲಾದಗಿಯ 43 ವರ್ಷದ ವ್ಯಕ್ತಿಯವರೆಗೆ ಎಲ್ಲರ ಅಂತ್ಯಕ್ರಿಯೆ ತಾವೇ ಮುಂದೆ ನಿಂತು ಮಾಡಿದ್ದಾರೆ.</p>.<p>’ಮೊದಲಿಗೆ ಭಯ ಅನ್ನಿಸುತ್ತಿತ್ತು. ಮನಸ್ಸಿಗೆ ಬೇಸರವಾಗುತ್ತಿತ್ತು. ಈಗ ಇಲ್ಲ. ಸಾವಿಗೆ ಮಾತ್ರ ಬಡವ–ಶ್ರೀಮಂತ, ಜಾತಿಯ ಬೇಧವಿಲ್ಲ. ದೇವರು ದೊಡ್ಡವನು. ಯಾವ ಜನ್ಮದ ಋಣವೋ ಎಲ್ಲ ಜಾತಿಯವರಿಗೂ ಮಣ್ಣು ಮಾಡುವ ಪುಣ್ಯದ ಕೆಲಸ ನನಗೆ ವಹಿಸಿದ್ದಾನೆ ಎಂದು ನಂಬಿ ಕೆಲಸ ಮಾಡುತ್ತಿದ್ದೇನೆ‘ ಎನ್ನುತ್ತಾರೆ.</p>.<p>ವೈದ್ಯರು ಆಸ್ಪತ್ರೆಯಲ್ಲಿ ಸಾವಿನ ಘೋಷಣೆ ಮಾಡುತ್ತಿದ್ದಂತೆಯೇ ಮೃತರ ಮುಖವನ್ನು ಒಮ್ಮೆ ದೂರದಲ್ಲಿಯೇ ನಿಂತುಕೊಂಡ ಕುಟುಂಬದವರಿಗೆ ತೋರಿಸುತ್ತೇವೆ. ನಂತರ ವೈಜ್ಞಾನಿಕವಾಗಿ ಪ್ಯಾಕ್ ಮಾಡಿ ಆಂಬುಲೆನ್ಸ್ನಲ್ಲಿ ಸ್ಮಶಾನಕ್ಕೆ ಕೊಂಡೊಯ್ಯುತ್ತೇವೆ. ಈ ವೇಳೆ ನಾವು ಪಿಪಿಇ ಕಿಟ್ ಸೇರಿದಂತೆ ಸುರಕ್ಷತಾ ಸಾಧನಗಳ ಧರಿಸಿರುತ್ತೇವೆ. ಉಪವಿಭಾಗಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಂತ್ಯಕ್ರಿಯೆ ವಿಧಿ–ವಿಧಾನ ನೆರವೇರುತ್ತದೆ ಎಂದು ಕೃಷ್ಣಪ್ಪ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಪ್ರತಿ ಮೃತ ದೇಹ ಗುಣಿಯಲ್ಲಿ (ತೆಗ್ಗು) ಹಾಕುವ ಮುನ್ನ ಊದುಕಡ್ಡಿ ಬೆಳಗಿ, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಕಿರಿಯರಿಗೆ ಹಿರಿಯನಾಗಿ, ಹಿರಿಯ ಜೀವಗಳಿಗೆ ಮನೆಯ ಮಗನಾಗಿ ಮಣ್ಣು ಹಾಕುತ್ತೇನೆ..</p>.<p>ಇದು ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆ ನೆರವೇರಿಸುವ ತಂಡದ ಪ್ರಮುಖ ಕೃಷ್ಣಪ್ಪ ಮರಡಿಮನೆ ಅವರ ಮಾತು.</p>.<p>ಸ್ವತಃ ಆಂಬುಲೆನ್ಸ್ ಚಾಲಕರೂ ಆಗಿರುವ ಕೃಷ್ಣಪ್ಪ, ಜಿಲ್ಲೆಯಲ್ಲಿ ಕೋವಿಡ್ಗೆ ಮೊದಲು ಬಲಿಯಾದ 78 ವರ್ಷದ ವೃದ್ಧರಿಂದ ಮೊದಲುಗೊಂಡ ಕಲಾದಗಿಯ 43 ವರ್ಷದ ವ್ಯಕ್ತಿಯವರೆಗೆ ಎಲ್ಲರ ಅಂತ್ಯಕ್ರಿಯೆ ತಾವೇ ಮುಂದೆ ನಿಂತು ಮಾಡಿದ್ದಾರೆ.</p>.<p>’ಮೊದಲಿಗೆ ಭಯ ಅನ್ನಿಸುತ್ತಿತ್ತು. ಮನಸ್ಸಿಗೆ ಬೇಸರವಾಗುತ್ತಿತ್ತು. ಈಗ ಇಲ್ಲ. ಸಾವಿಗೆ ಮಾತ್ರ ಬಡವ–ಶ್ರೀಮಂತ, ಜಾತಿಯ ಬೇಧವಿಲ್ಲ. ದೇವರು ದೊಡ್ಡವನು. ಯಾವ ಜನ್ಮದ ಋಣವೋ ಎಲ್ಲ ಜಾತಿಯವರಿಗೂ ಮಣ್ಣು ಮಾಡುವ ಪುಣ್ಯದ ಕೆಲಸ ನನಗೆ ವಹಿಸಿದ್ದಾನೆ ಎಂದು ನಂಬಿ ಕೆಲಸ ಮಾಡುತ್ತಿದ್ದೇನೆ‘ ಎನ್ನುತ್ತಾರೆ.</p>.<p>ವೈದ್ಯರು ಆಸ್ಪತ್ರೆಯಲ್ಲಿ ಸಾವಿನ ಘೋಷಣೆ ಮಾಡುತ್ತಿದ್ದಂತೆಯೇ ಮೃತರ ಮುಖವನ್ನು ಒಮ್ಮೆ ದೂರದಲ್ಲಿಯೇ ನಿಂತುಕೊಂಡ ಕುಟುಂಬದವರಿಗೆ ತೋರಿಸುತ್ತೇವೆ. ನಂತರ ವೈಜ್ಞಾನಿಕವಾಗಿ ಪ್ಯಾಕ್ ಮಾಡಿ ಆಂಬುಲೆನ್ಸ್ನಲ್ಲಿ ಸ್ಮಶಾನಕ್ಕೆ ಕೊಂಡೊಯ್ಯುತ್ತೇವೆ. ಈ ವೇಳೆ ನಾವು ಪಿಪಿಇ ಕಿಟ್ ಸೇರಿದಂತೆ ಸುರಕ್ಷತಾ ಸಾಧನಗಳ ಧರಿಸಿರುತ್ತೇವೆ. ಉಪವಿಭಾಗಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಂತ್ಯಕ್ರಿಯೆ ವಿಧಿ–ವಿಧಾನ ನೆರವೇರುತ್ತದೆ ಎಂದು ಕೃಷ್ಣಪ್ಪ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>