<p><strong>ಬಾಗಲಕೋಟೆ/ದಾವಣಗೆರೆ:</strong> ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಬೆಳಿಗ್ಗೆ ಆರಂಭವಾಗಿದೆ.</p><p>ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸ್ಥಾನಕ್ಕೆ ಹೊಸ ಪ್ರತಿನಿಧಿಯ ಆಯ್ಕೆಗಾಗಿ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ.</p><p>ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಮರ್ಥ್ ಶಾಮನೂರು ಹಾಗೂ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ನಡುವೆ ತೀವ್ರ ಪೈಪೋಟಿ ಇದೆ. ಎಸ್ಡಿಪಿಐ ಕೂಡ ಕಣದಲ್ಲಿದೆ.</p><p>ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಲು ಮುಂದಾಗಿದ್ದಾರೆ. ಗ್ರಾಮೀಣ ಪ್ರದೇಶದ ಜನರೂ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಬಿಸಿಲು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಳಿಗ್ಗೆಯೇ ಮತದಾನ ಕೇಂದ್ರತಳತ್ತ ಸಾಗುತ್ತಿದ್ದಾರೆ.</p><p>ಮತಗಟ್ಟೆಗಳ ಮುಂದೆ ಕಾಂಗ್ರೆಸ್, ಬಿಜೆಪಿ ಏಜೆಂಟರು ಮತ ಚೀಟಿಗಳನ್ನು ನೀಡುತ್ತಿದ್ದಾರೆ. ಮತದಾನ ಚುರುಕು ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ/ದಾವಣಗೆರೆ:</strong> ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಬೆಳಿಗ್ಗೆ ಆರಂಭವಾಗಿದೆ.</p><p>ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸ್ಥಾನಕ್ಕೆ ಹೊಸ ಪ್ರತಿನಿಧಿಯ ಆಯ್ಕೆಗಾಗಿ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ.</p><p>ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಮರ್ಥ್ ಶಾಮನೂರು ಹಾಗೂ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ನಡುವೆ ತೀವ್ರ ಪೈಪೋಟಿ ಇದೆ. ಎಸ್ಡಿಪಿಐ ಕೂಡ ಕಣದಲ್ಲಿದೆ.</p><p>ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಲು ಮುಂದಾಗಿದ್ದಾರೆ. ಗ್ರಾಮೀಣ ಪ್ರದೇಶದ ಜನರೂ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಬಿಸಿಲು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಳಿಗ್ಗೆಯೇ ಮತದಾನ ಕೇಂದ್ರತಳತ್ತ ಸಾಗುತ್ತಿದ್ದಾರೆ.</p><p>ಮತಗಟ್ಟೆಗಳ ಮುಂದೆ ಕಾಂಗ್ರೆಸ್, ಬಿಜೆಪಿ ಏಜೆಂಟರು ಮತ ಚೀಟಿಗಳನ್ನು ನೀಡುತ್ತಿದ್ದಾರೆ. ಮತದಾನ ಚುರುಕು ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>