<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ಕಾಂಗ್ರೆಸ್ಸಿನ ಐವರು ಶಾಸಕರಿದ್ದಾರೆ. ಆ ಪೈಕಿ ನಾಲ್ವರು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ, ಸಚಿವ ಸಂಪುಟದ ಮೊದಲ ಹಂತದಲ್ಲಿಯೇ ಜಿಲ್ಲೆಯ ನಾಯಕರಿಗೆ ಅವಕಾಶ ಸಿಗದಿರುವುದು ಅವರ ಬೆಂಬಲಿಗರಿಗೆ ನಿರಾಶೆಯುಂಟು ಮಾಡಿದೆ. </p>.<p>ಈಗಾಗಲೇ ಹಲವು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಆರ್.ಬಿ. ತಿಮ್ಮಾಪುರ ಮತ್ತೊಮ್ಮೆ ಸಚಿವ ಸಂಪುಟ ಸೇರ್ಪಡೆಗೊಳ್ಳಲು ಹೈಕಮಾಂಡ್ವರೆಗೂ ಪ್ರಯತ್ನ ಮಾಡಿದ್ದರು. ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದರು. </p>.<p>ಆರ್.ಬಿ. ತಿಮ್ಮಾಪುರ ಅವರು ಎರಡು ದಶಕಗಳ ಹಿಂದೆ ಎಸ್.ಎಂ. ಕೃಷ್ಣ ಸರ್ಕಾರದಲ್ಲಿದ್ದಾಗಲೇ ಸಚಿವರಾಗಿದ್ದರು. 2013ರಿಂದ 18ರವರೆಗಿನ ಸಿದ್ದರಾಮಯ್ಯ ಸರ್ಕಾರದ ಕೊನೆ ಅವಧಿಯಲ್ಲಿ ಶಾಸಕರಾಗಿರದಿದ್ದರೂ, ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡಲಾಗಿತ್ತು. ಮುಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ಸಿನ ಸಮ್ಮಿಶ್ರ ಸರ್ಕಾರದಲ್ಲಿ ಒಂದು ವರ್ಷ ಸಚಿವರಾಗಿದ್ದರು. 2023ರಿಂದ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮೂರು ವರ್ಷಗಳ ಕಾಲ ಸಚಿವರಾಗಿದ್ದರು. ಈಗ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ಮೊದಲ ಹಂತದಲ್ಲಿಯೇ ಸಚಿವರಾಗಲು ಯತ್ನ ನಡೆಸಿದ್ದರು. ಆದರೆ, ಪ್ರಯತ್ನ ಫಲ ನೀಡಿಲ್ಲ.</p>.<p>ಜಿಲ್ಲೆಯ ಮತ್ತೊಬ್ಬ ಹಿರಿಯ ಶಾಸಕರಾಗಿರುವ ಜೆ.ಟಿ. ಪಾಟೀಲ ಸಹ ಸಚಿವ ಸಂಪುಟ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಸಂಪುಟ ಪುನರ್ರಚನೆ ಮಾಡಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ದೆಹಲಿಯಲ್ಲಿ ಹೈಕಮಾಂಡ್ ಮುಖಂಡರನ್ನು ಭೇಟಿಯಾಗಿ ಬಂದಿದ್ದರು. ನಾಲ್ಕು ಬಾರಿ ಶಾಸಕರಾಗಿರುವ ಪಾಟೀಲ ಅವರು ಈ ಬಾರಿಯಾದರೂ ಸಚಿವರಾಗಬೇಕು ಎಂದು ಎಲ್ಲ ಯತ್ನಗಳನ್ನು ಮಾಡಿದ್ದರು.</p>.<p>ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ವಿಜಯಾನಂದ ಕಾಶಪ್ಪನವರೂ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡಿದ್ದರು. ಈ ಬಾರಿ ಸಂಪುಟದಲ್ಲಿ ಅವಕಾಶ ಸಿಕ್ಕೇ ಸಿಗುತ್ತದೆ ಎಂದುಕೊಂಡಿದ್ದರು. ಆದರೆ ಮೊದಲ ಹಂತದ ಸಂಪುಟದಲ್ಲಿ ಅವರಿಗೂ ಅವಕಾಶ ಸಿಕ್ಕಿಲ್ಲ. </p>.<p>ಮೊದಲ ಬಾರಿಗೆ ಶಾಸಕರಾಗಿರುವ ಭೀಮಸೇನ ಚಿಮ್ಮನಕಟ್ಟಿ ಅವರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಮೊದಲ ಹಂತದ ಸಚಿವ ಸಂಪುಟದಲ್ಲಿಯೇ ಇಬ್ಬರು ಕುರುಬ ಸಮುದಾದವರಿಗೆ ಅವಕಾಶ ಸಿಕ್ಕಿರುವುದರಿಂದ ಮತ್ತೊಬ್ಬರಿಗೆ ನೀಡುವರೇ ಎಂಬುದು ಪ್ರಶ್ನೆಯಾಗಿದೆ.</p>.<p>ಪಕ್ಕದ ಜಿಲ್ಲೆಗಳಾದ ವಿಜಯಪುರ, ಬೆಳಗಾವಿ ಜಿಲ್ಲೆಗಳಿಗೆ ಮೊದಲ ಹಂತದಲ್ಲಿಯೇ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ಜಿಲ್ಲೆಗೊಂದು ಸಚಿವ ಸ್ಥಾನ ನೀಡಿದರೆ ಎರಡನೇ ಹಂತದಲ್ಲಾದರೂ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ. ಜಿಲ್ಲೆಯ ಬಹುತೇಕ ಶಾಸಕರು ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಮೊದಲ ಹಂತದ ಸಂಪುಟ ರಚನೆಯಲ್ಲಿ ಅವಕಾಶ ನೀಡದಿರುವುದು ಜನಪ್ರತಿನಿಧಿಗಳ ಬೆಂಬಲಿಗರಿಗೆ ನಿರಾಶೆಯುಂಟು ಮಾಡಿದೆ. ಎರಡನೇ ಪಟ್ಟಿಯಲ್ಲಿ ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ಎರಡನೇ ಹಂತದಲ್ಲಾದರೂ ಜಿಲ್ಲೆಯವರಿಗೆ ಅವಕಾಶ ಸಿಗುವುದೇ ಎಂದು ಕಾದು ನೋಡಬೇಕಿದೆ.</p>.<div><blockquote>ಎರಡನೇ ಹಂತದಲ್ಲಿ ಇನ್ನೂ 20 ಮಂದಿ ಸಚಿವರಾಗಬೇಕಿದೆ. ಆಗ ಜಿಲ್ಲೆಗೆ ಖಂಡಿತವಾಗಲೂ ಪ್ರಾತಿನಿಧ್ಯ ಸಿಗಲಿದೆ</blockquote><span class="attribution">ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಅಧ್ಯಕ್ಷ, ಕಾಂಗ್ರೆಸ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ಕಾಂಗ್ರೆಸ್ಸಿನ ಐವರು ಶಾಸಕರಿದ್ದಾರೆ. ಆ ಪೈಕಿ ನಾಲ್ವರು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ, ಸಚಿವ ಸಂಪುಟದ ಮೊದಲ ಹಂತದಲ್ಲಿಯೇ ಜಿಲ್ಲೆಯ ನಾಯಕರಿಗೆ ಅವಕಾಶ ಸಿಗದಿರುವುದು ಅವರ ಬೆಂಬಲಿಗರಿಗೆ ನಿರಾಶೆಯುಂಟು ಮಾಡಿದೆ. </p>.<p>ಈಗಾಗಲೇ ಹಲವು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಆರ್.ಬಿ. ತಿಮ್ಮಾಪುರ ಮತ್ತೊಮ್ಮೆ ಸಚಿವ ಸಂಪುಟ ಸೇರ್ಪಡೆಗೊಳ್ಳಲು ಹೈಕಮಾಂಡ್ವರೆಗೂ ಪ್ರಯತ್ನ ಮಾಡಿದ್ದರು. ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದರು. </p>.<p>ಆರ್.ಬಿ. ತಿಮ್ಮಾಪುರ ಅವರು ಎರಡು ದಶಕಗಳ ಹಿಂದೆ ಎಸ್.ಎಂ. ಕೃಷ್ಣ ಸರ್ಕಾರದಲ್ಲಿದ್ದಾಗಲೇ ಸಚಿವರಾಗಿದ್ದರು. 2013ರಿಂದ 18ರವರೆಗಿನ ಸಿದ್ದರಾಮಯ್ಯ ಸರ್ಕಾರದ ಕೊನೆ ಅವಧಿಯಲ್ಲಿ ಶಾಸಕರಾಗಿರದಿದ್ದರೂ, ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡಲಾಗಿತ್ತು. ಮುಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ಸಿನ ಸಮ್ಮಿಶ್ರ ಸರ್ಕಾರದಲ್ಲಿ ಒಂದು ವರ್ಷ ಸಚಿವರಾಗಿದ್ದರು. 2023ರಿಂದ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮೂರು ವರ್ಷಗಳ ಕಾಲ ಸಚಿವರಾಗಿದ್ದರು. ಈಗ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ಮೊದಲ ಹಂತದಲ್ಲಿಯೇ ಸಚಿವರಾಗಲು ಯತ್ನ ನಡೆಸಿದ್ದರು. ಆದರೆ, ಪ್ರಯತ್ನ ಫಲ ನೀಡಿಲ್ಲ.</p>.<p>ಜಿಲ್ಲೆಯ ಮತ್ತೊಬ್ಬ ಹಿರಿಯ ಶಾಸಕರಾಗಿರುವ ಜೆ.ಟಿ. ಪಾಟೀಲ ಸಹ ಸಚಿವ ಸಂಪುಟ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಸಂಪುಟ ಪುನರ್ರಚನೆ ಮಾಡಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ದೆಹಲಿಯಲ್ಲಿ ಹೈಕಮಾಂಡ್ ಮುಖಂಡರನ್ನು ಭೇಟಿಯಾಗಿ ಬಂದಿದ್ದರು. ನಾಲ್ಕು ಬಾರಿ ಶಾಸಕರಾಗಿರುವ ಪಾಟೀಲ ಅವರು ಈ ಬಾರಿಯಾದರೂ ಸಚಿವರಾಗಬೇಕು ಎಂದು ಎಲ್ಲ ಯತ್ನಗಳನ್ನು ಮಾಡಿದ್ದರು.</p>.<p>ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ವಿಜಯಾನಂದ ಕಾಶಪ್ಪನವರೂ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡಿದ್ದರು. ಈ ಬಾರಿ ಸಂಪುಟದಲ್ಲಿ ಅವಕಾಶ ಸಿಕ್ಕೇ ಸಿಗುತ್ತದೆ ಎಂದುಕೊಂಡಿದ್ದರು. ಆದರೆ ಮೊದಲ ಹಂತದ ಸಂಪುಟದಲ್ಲಿ ಅವರಿಗೂ ಅವಕಾಶ ಸಿಕ್ಕಿಲ್ಲ. </p>.<p>ಮೊದಲ ಬಾರಿಗೆ ಶಾಸಕರಾಗಿರುವ ಭೀಮಸೇನ ಚಿಮ್ಮನಕಟ್ಟಿ ಅವರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಮೊದಲ ಹಂತದ ಸಚಿವ ಸಂಪುಟದಲ್ಲಿಯೇ ಇಬ್ಬರು ಕುರುಬ ಸಮುದಾದವರಿಗೆ ಅವಕಾಶ ಸಿಕ್ಕಿರುವುದರಿಂದ ಮತ್ತೊಬ್ಬರಿಗೆ ನೀಡುವರೇ ಎಂಬುದು ಪ್ರಶ್ನೆಯಾಗಿದೆ.</p>.<p>ಪಕ್ಕದ ಜಿಲ್ಲೆಗಳಾದ ವಿಜಯಪುರ, ಬೆಳಗಾವಿ ಜಿಲ್ಲೆಗಳಿಗೆ ಮೊದಲ ಹಂತದಲ್ಲಿಯೇ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ಜಿಲ್ಲೆಗೊಂದು ಸಚಿವ ಸ್ಥಾನ ನೀಡಿದರೆ ಎರಡನೇ ಹಂತದಲ್ಲಾದರೂ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ. ಜಿಲ್ಲೆಯ ಬಹುತೇಕ ಶಾಸಕರು ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಮೊದಲ ಹಂತದ ಸಂಪುಟ ರಚನೆಯಲ್ಲಿ ಅವಕಾಶ ನೀಡದಿರುವುದು ಜನಪ್ರತಿನಿಧಿಗಳ ಬೆಂಬಲಿಗರಿಗೆ ನಿರಾಶೆಯುಂಟು ಮಾಡಿದೆ. ಎರಡನೇ ಪಟ್ಟಿಯಲ್ಲಿ ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ಎರಡನೇ ಹಂತದಲ್ಲಾದರೂ ಜಿಲ್ಲೆಯವರಿಗೆ ಅವಕಾಶ ಸಿಗುವುದೇ ಎಂದು ಕಾದು ನೋಡಬೇಕಿದೆ.</p>.<div><blockquote>ಎರಡನೇ ಹಂತದಲ್ಲಿ ಇನ್ನೂ 20 ಮಂದಿ ಸಚಿವರಾಗಬೇಕಿದೆ. ಆಗ ಜಿಲ್ಲೆಗೆ ಖಂಡಿತವಾಗಲೂ ಪ್ರಾತಿನಿಧ್ಯ ಸಿಗಲಿದೆ</blockquote><span class="attribution">ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಅಧ್ಯಕ್ಷ, ಕಾಂಗ್ರೆಸ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>