<p>ಬಾಗಲಕೋಟೆ: ನವನಗರದಲ್ಲಿರುವ ದಿಗಂಬರೇಶ್ವರ ಮಠದ ರಥೋತ್ಸವವು ಬುಧವಾರ ಅದ್ದೂರಿಯಾಗಿ ಜರುಗಿತು.</p>.<p>ಮಠದ ಮುಂಭಾಗವಿರುವ ಕೆಂಪು ರಸ್ತೆಯಲ್ಲಿ ರಥೋತ್ಸವ ಜರುಗಿತು. ಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ಪುನೀತರಾದರು. ಸಂಜೆ 5ಕ್ಕೆ ದಿಗಂಬರೇಶ್ವರ, ಶ್ರೀಮಾತಾ ಕಪ್ಪರ ಪಡಿಯಮ್ಮನವರ ಉತ್ಸವ ಮೂರ್ತಿಗಳಿಗೆ, ತೇರಿನ ಕಳಸಕ್ಕೆ ಪೂಜೆ ಸಲ್ಲಿಸಿ, ತೇರಿನ ಕಳಸದ ಪ್ರತಿಷ್ಠಾಪನೆಯೊಂದಿಗೆ 11ನೇ ವರ್ಷದ ರಥೋತ್ಸವ ಜರುಗಿತು.</p>.<p>ಬಸವರಾಜಪ್ಪನವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳಗಿ ತಾಲ್ಲೂಕಿನ ನಾಗರಾಳದ ಶ್ರೀಶೇಷಪ್ಪಯ್ಯ ಸ್ವಾಮೀಜಿ ಭಾಗಿಯಾಗಿದ್ದರು.</p>.<p>ಬಸಪ್ಪಜ್ಜನವರ ಕುರಿತು ಗ್ರಂಥ ಲೋಕಾರ್ಪಣೆ ಮಾಡಲಾಯಿತು. ಕಲಾವಿದರಾದ ವಿನಾಯಕ ದಂಡಗಿ, ರಾಜೇಶ್ವರಿ ದೇಶಪಾಂಡೆ, ಹಣಮಂತ ಪತ್ತಾರ, ರಾಘವೇಂದ್ರ ಪವಾರ ಸುಶ್ರಾವ್ಯವಾಗಿ ಹಾಡಿ ರಂಜಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-19-795067947</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ನವನಗರದಲ್ಲಿರುವ ದಿಗಂಬರೇಶ್ವರ ಮಠದ ರಥೋತ್ಸವವು ಬುಧವಾರ ಅದ್ದೂರಿಯಾಗಿ ಜರುಗಿತು.</p>.<p>ಮಠದ ಮುಂಭಾಗವಿರುವ ಕೆಂಪು ರಸ್ತೆಯಲ್ಲಿ ರಥೋತ್ಸವ ಜರುಗಿತು. ಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ಪುನೀತರಾದರು. ಸಂಜೆ 5ಕ್ಕೆ ದಿಗಂಬರೇಶ್ವರ, ಶ್ರೀಮಾತಾ ಕಪ್ಪರ ಪಡಿಯಮ್ಮನವರ ಉತ್ಸವ ಮೂರ್ತಿಗಳಿಗೆ, ತೇರಿನ ಕಳಸಕ್ಕೆ ಪೂಜೆ ಸಲ್ಲಿಸಿ, ತೇರಿನ ಕಳಸದ ಪ್ರತಿಷ್ಠಾಪನೆಯೊಂದಿಗೆ 11ನೇ ವರ್ಷದ ರಥೋತ್ಸವ ಜರುಗಿತು.</p>.<p>ಬಸವರಾಜಪ್ಪನವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳಗಿ ತಾಲ್ಲೂಕಿನ ನಾಗರಾಳದ ಶ್ರೀಶೇಷಪ್ಪಯ್ಯ ಸ್ವಾಮೀಜಿ ಭಾಗಿಯಾಗಿದ್ದರು.</p>.<p>ಬಸಪ್ಪಜ್ಜನವರ ಕುರಿತು ಗ್ರಂಥ ಲೋಕಾರ್ಪಣೆ ಮಾಡಲಾಯಿತು. ಕಲಾವಿದರಾದ ವಿನಾಯಕ ದಂಡಗಿ, ರಾಜೇಶ್ವರಿ ದೇಶಪಾಂಡೆ, ಹಣಮಂತ ಪತ್ತಾರ, ರಾಘವೇಂದ್ರ ಪವಾರ ಸುಶ್ರಾವ್ಯವಾಗಿ ಹಾಡಿ ರಂಜಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-19-795067947</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>