<p><strong>ಬಾಗಲಕೋಟೆ</strong>: ವೈಜ್ಞಾನಿಕ ಬೆಲೆ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ರೈತರ ಮನವೊಲಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.</p>.<p>ಬುಧವಾರ ಬೆಳಿಗ್ಗೆಯಿಂದಲೇ ಮುದೋಳದಲ್ಲಿರುವ ಜಿಲ್ಲಾಧಿಕಾರಿ ಸಂಗಪ್ಪ, ರೈತ ಮುಖಂಡರು ಹಾಗೂ ಕಾರ್ಖಾನೆಯ ಪ್ರತಿನಿಧಿಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರು. ಆದರೆ, ಯಾವುದೇ ನಿರ್ಣಯಕ್ಕೆ ಬರಲಾಗಲಿಲ್ಲ ಎಂದು ಮೂಲಗಳು ತಿಳಿಸಿವೆ</p>.<p>ಮುಧೋಳ ತಾಲ್ಲೂಕಿನ ವಿವಿಧೆಡೆ ಬುಧವಾರ ಬೆಳಿಗ್ಗೆ ದಿಡೀರ್ ರಸ್ತೆ ತಡೆ ನಡೆಸಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.</p>.<p>ಶಾಲಾ, ಕಾಲೇಜು, ಪರೀಕ್ಷೆಗೆ ಹೋಗಬೇಕಾಗಿದ್ದ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳಬೇಕಿದ್ದ ನೌಕರರು, ಮದುವೆ, ಆಸ್ಪತ್ರೆಗೆ ತೆರಳುತ್ತಿದ್ದ ಸಾರ್ವಜನಿಕರು ತೊಂದರೆ ಎದುರಿಸಿದರು.</p>.<p>ಬಾಗಲಕೋಟ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬುಧವಾರ ನಡೆಯಬೇಕಿದ್ದ ಎಂಬಿಎ ಪರೀಕ್ಷೆಯನ್ನು ಮುಂದೂಡಲಾಯಿತು. ಬಂದ್ನಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದರೂ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು.</p>.<p>‘ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವ ಬಗ್ಗೆ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವೈಜ್ಞಾನಿಕ ಬೆಲೆ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ರೈತರ ಮನವೊಲಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.</p>.<p>ಬುಧವಾರ ಬೆಳಿಗ್ಗೆಯಿಂದಲೇ ಮುದೋಳದಲ್ಲಿರುವ ಜಿಲ್ಲಾಧಿಕಾರಿ ಸಂಗಪ್ಪ, ರೈತ ಮುಖಂಡರು ಹಾಗೂ ಕಾರ್ಖಾನೆಯ ಪ್ರತಿನಿಧಿಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರು. ಆದರೆ, ಯಾವುದೇ ನಿರ್ಣಯಕ್ಕೆ ಬರಲಾಗಲಿಲ್ಲ ಎಂದು ಮೂಲಗಳು ತಿಳಿಸಿವೆ</p>.<p>ಮುಧೋಳ ತಾಲ್ಲೂಕಿನ ವಿವಿಧೆಡೆ ಬುಧವಾರ ಬೆಳಿಗ್ಗೆ ದಿಡೀರ್ ರಸ್ತೆ ತಡೆ ನಡೆಸಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.</p>.<p>ಶಾಲಾ, ಕಾಲೇಜು, ಪರೀಕ್ಷೆಗೆ ಹೋಗಬೇಕಾಗಿದ್ದ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳಬೇಕಿದ್ದ ನೌಕರರು, ಮದುವೆ, ಆಸ್ಪತ್ರೆಗೆ ತೆರಳುತ್ತಿದ್ದ ಸಾರ್ವಜನಿಕರು ತೊಂದರೆ ಎದುರಿಸಿದರು.</p>.<p>ಬಾಗಲಕೋಟ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬುಧವಾರ ನಡೆಯಬೇಕಿದ್ದ ಎಂಬಿಎ ಪರೀಕ್ಷೆಯನ್ನು ಮುಂದೂಡಲಾಯಿತು. ಬಂದ್ನಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದರೂ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು.</p>.<p>‘ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವ ಬಗ್ಗೆ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>