ಜಿಲ್ಲಾಧಿಕಾರಿ ಕೊಠಡಿ ಪಕ್ಕದ ಚುನಾವಣಾ ಶಾಖೆಯೊಳಗೆ ತೆರಳಿದ್ದ ಸ್ವಾಮೀಜಿ, ಅಲ್ಲಿನ ಸಿಬ್ಬಂದಿಯೊಂದಿಗೆ ಮಾತನಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ನೀರು ಕುಡಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಆಂಬುಲೆನ್ಸ್ ತರಿಸಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರೊಳಗೆ ಸ್ವಾಮೀಜಿ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.