<p><strong>ಬಾಗಲಕೋಟೆ:</strong> ಹಿಂಗಾರು ಮಳೆ ಜಿಲ್ಲೆಯಲ್ಲಿ ಉತ್ತಮವಾಗಿ ಸುರಿದಿದ್ದರೂ, ಬಿತ್ತನೆ ಮಾತ್ರ ಮಂದಗತಿಯಲ್ಲಿ ಸಾಗಿದೆ. ಜೋಳದ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದ ರೈತರು, ಈ ವರ್ಷ ಜೋಳದಿಂದ ಕಡಲೆ ಬೆಳೆಯತ್ತ ವಾಲಿದ್ದಾರೆ.</p>.<p>ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 2,29,813 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ 89,709 (ಶೇ40ರಷ್ಟು) ಬಿತ್ತನೆಯಾಗಿದೆ. ಮಳೆ ಬಿಡುವು ನೀಡದ್ದರಿಂದ ಕೆಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಮಂದಗತಿಯಲ್ಲಿ ಸಾಗಿದೆ.</p>.<p>ಜಿಲ್ಲೆಯಲ್ಲಿ 61,234 ಹೆಕ್ಟೇರ್ ಪ್ರದೇಶದಲ್ಲಿ ಜೋಳದ ಬಿತ್ತನೆ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ ಕೇವಲ 13,314 ಹೆಕ್ಟೇರ್ನಷ್ಟು ಮಾತ್ರ ಬಿತ್ತನೆಯಾಗಿದೆ. ಜೋಳದ ಬಿತ್ತನೆ ಅವಧಿ ಮುಗಿಯುತ್ತಾ ಬಂದಿದ್ದರೂ, ಬಿತ್ತನೆ ಕಾರ್ಯ ಚುರುಕುಗೊಂಡಿಲ್ಲ.</p>.<p>ಜೋಳ ಬಿತ್ತನೆ ಸಮಯದಲ್ಲಿ ಮಳೆ ಕೊರತೆಯಾಗಿತ್ತು. ಜೊತೆಗೆ ಬೆಲೆಯು ಪ್ರತಿ ಕ್ವಿಂಟಲ್ಗೆ ₹3 ಸಾವಿರ ಆಸು–ಪಾಸಿನಲ್ಲಿದೆ. ಉತ್ತಮ ಬೆಲೆಗಾಗಿ ಜೋಳವನ್ನು ವರ್ಷಗಟ್ಟಲೇ ಕಾಯ್ದಿಟ್ಟುಕೊಳ್ಳುವುದು ಸವಾಲಾಗಿರುವ ಕಾರಣ ರೈತರು ಜೋಳ ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ 55 ಸಾವಿರ ಹೆಕ್ಟೇರ್ ಕಡಲೆ ಬಿತ್ತನೆಯ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ 34,590 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಅದರಲ್ಲೂ ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳೆರಡರಲ್ಲಿಯೇ 23 ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ.</p>.<p>ಕಡಲೆ ಬಿತ್ತನೆಗೆ ಇನ್ನೂ ಸಮಯವಿರುವುದರಿಂದ ಈ ಬಾರಿ ಕಡಲೆ ಬೆಳೆ ಗುರಿ ಮೀರಿದ ಸಾಧನೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಇನ್ನುಳಿದಂತೆ ಗೋಧಿ ಬಿತ್ತನೆ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಲಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.</p>.<p><strong>ಮಳೆ ಕೊರತೆ</strong>: ಜಿಲ್ಲೆಯಲ್ಲಿ ಹಿಂಗಾರು ಮಳೆ ಕೊರತೆಯಾಗಿದೆ. ಅ.23ರವರೆಗೆ 9.2 ಸೆ.ಮೀ. ಮಳೆಯಾಗಬೇಕಿತ್ತು. ಆದರೆ, 2.4 ಸೆ.ಮೀ. ನಷ್ಟು ಮಳೆಯಾಗಿದೆ. ಬಹುತೇಕ ತಾಲ್ಲೂಕುಗಳಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಬೀಳಗಿ ತಾಲ್ಲೂಕಿನಲ್ಲಿ ಇದರ ಕೊರತೆ ಹೆಚ್ಚಿದೆ.</p>.<p>ಮೂರು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ. ಹೊಲಗಳಲ್ಲಿ ನೀರು ಹರಿದಾಡಿದೆ. ಈಗ ಮಳೆ ಬಿಡುವು ನೀಡಿದರೆ ಬಿತ್ತನೆ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚಾಗಲಿದೆ.</p>.<div><blockquote>ಎರಡು ದಿನಗಳಲ್ಲಿ ಜಿಲ್ಲೆಯಾದ್ಯಂತ ಮಳೆಯಾಗಿದೆ. ಮಳೆ ಬಿಡುವುದು ನೀಡಿದರೆ ಬಿತ್ತನೆ ಪ್ರಮಾಣ ಹೆಚ್ಚಾಗಲಿದೆ</blockquote><span class="attribution"> ಲಕ್ಷ್ಮಣ ಕಳ್ಳೇನ್ನವರ ಜಂಟಿ ನಿರ್ದೇಶಕ ಕೃಷಿ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಹಿಂಗಾರು ಮಳೆ ಜಿಲ್ಲೆಯಲ್ಲಿ ಉತ್ತಮವಾಗಿ ಸುರಿದಿದ್ದರೂ, ಬಿತ್ತನೆ ಮಾತ್ರ ಮಂದಗತಿಯಲ್ಲಿ ಸಾಗಿದೆ. ಜೋಳದ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದ ರೈತರು, ಈ ವರ್ಷ ಜೋಳದಿಂದ ಕಡಲೆ ಬೆಳೆಯತ್ತ ವಾಲಿದ್ದಾರೆ.</p>.<p>ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 2,29,813 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ 89,709 (ಶೇ40ರಷ್ಟು) ಬಿತ್ತನೆಯಾಗಿದೆ. ಮಳೆ ಬಿಡುವು ನೀಡದ್ದರಿಂದ ಕೆಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಮಂದಗತಿಯಲ್ಲಿ ಸಾಗಿದೆ.</p>.<p>ಜಿಲ್ಲೆಯಲ್ಲಿ 61,234 ಹೆಕ್ಟೇರ್ ಪ್ರದೇಶದಲ್ಲಿ ಜೋಳದ ಬಿತ್ತನೆ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ ಕೇವಲ 13,314 ಹೆಕ್ಟೇರ್ನಷ್ಟು ಮಾತ್ರ ಬಿತ್ತನೆಯಾಗಿದೆ. ಜೋಳದ ಬಿತ್ತನೆ ಅವಧಿ ಮುಗಿಯುತ್ತಾ ಬಂದಿದ್ದರೂ, ಬಿತ್ತನೆ ಕಾರ್ಯ ಚುರುಕುಗೊಂಡಿಲ್ಲ.</p>.<p>ಜೋಳ ಬಿತ್ತನೆ ಸಮಯದಲ್ಲಿ ಮಳೆ ಕೊರತೆಯಾಗಿತ್ತು. ಜೊತೆಗೆ ಬೆಲೆಯು ಪ್ರತಿ ಕ್ವಿಂಟಲ್ಗೆ ₹3 ಸಾವಿರ ಆಸು–ಪಾಸಿನಲ್ಲಿದೆ. ಉತ್ತಮ ಬೆಲೆಗಾಗಿ ಜೋಳವನ್ನು ವರ್ಷಗಟ್ಟಲೇ ಕಾಯ್ದಿಟ್ಟುಕೊಳ್ಳುವುದು ಸವಾಲಾಗಿರುವ ಕಾರಣ ರೈತರು ಜೋಳ ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ 55 ಸಾವಿರ ಹೆಕ್ಟೇರ್ ಕಡಲೆ ಬಿತ್ತನೆಯ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ 34,590 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಅದರಲ್ಲೂ ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳೆರಡರಲ್ಲಿಯೇ 23 ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ.</p>.<p>ಕಡಲೆ ಬಿತ್ತನೆಗೆ ಇನ್ನೂ ಸಮಯವಿರುವುದರಿಂದ ಈ ಬಾರಿ ಕಡಲೆ ಬೆಳೆ ಗುರಿ ಮೀರಿದ ಸಾಧನೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಇನ್ನುಳಿದಂತೆ ಗೋಧಿ ಬಿತ್ತನೆ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಲಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.</p>.<p><strong>ಮಳೆ ಕೊರತೆ</strong>: ಜಿಲ್ಲೆಯಲ್ಲಿ ಹಿಂಗಾರು ಮಳೆ ಕೊರತೆಯಾಗಿದೆ. ಅ.23ರವರೆಗೆ 9.2 ಸೆ.ಮೀ. ಮಳೆಯಾಗಬೇಕಿತ್ತು. ಆದರೆ, 2.4 ಸೆ.ಮೀ. ನಷ್ಟು ಮಳೆಯಾಗಿದೆ. ಬಹುತೇಕ ತಾಲ್ಲೂಕುಗಳಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಬೀಳಗಿ ತಾಲ್ಲೂಕಿನಲ್ಲಿ ಇದರ ಕೊರತೆ ಹೆಚ್ಚಿದೆ.</p>.<p>ಮೂರು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ. ಹೊಲಗಳಲ್ಲಿ ನೀರು ಹರಿದಾಡಿದೆ. ಈಗ ಮಳೆ ಬಿಡುವು ನೀಡಿದರೆ ಬಿತ್ತನೆ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚಾಗಲಿದೆ.</p>.<div><blockquote>ಎರಡು ದಿನಗಳಲ್ಲಿ ಜಿಲ್ಲೆಯಾದ್ಯಂತ ಮಳೆಯಾಗಿದೆ. ಮಳೆ ಬಿಡುವುದು ನೀಡಿದರೆ ಬಿತ್ತನೆ ಪ್ರಮಾಣ ಹೆಚ್ಚಾಗಲಿದೆ</blockquote><span class="attribution"> ಲಕ್ಷ್ಮಣ ಕಳ್ಳೇನ್ನವರ ಜಂಟಿ ನಿರ್ದೇಶಕ ಕೃಷಿ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>