<p>ರಾಂಪುರ: ಬಾಗಲಕೋಟೆ ತಾಲ್ಲೂಕಿನ ಕಿರಸೂರ ಗ್ರಾಮದ ಗೌರಿಶಂಕರ ಸ್ವಾಮೀಜಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಮಹಾರಥೋತ್ಸವ ನಡೆಯಿತು.</p>.<p>ಭಗವತಿ, ಹಳ್ಳೂರ, ಭೈರಮಟ್ಟಿ, ಶಿರೂರ, ಬೇವೂರು, ಮಣ್ಣಿಕಟ್ಟಿ, ಮುಗಲೊಳ್ಳಿ, ಕಮತಗಿ, ಹೊಣ್ಣಾಕಟ್ಟಿ, ಬದಾಮಿ, ರಾಮದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗಿಗಳಾಗಿ ರಥಕ್ಕೆ ಹೂವು, ಹಣ್ಣು, ಪಳಾರ ಸಮರ್ಪಿಸಿ ನಮಿಸಿದರು.</p>.<p>ಬೆಳಿಗ್ಗೆ ಗೌರಿಶಂಕರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಕಲ ವಾದ್ಯ ವೈಭವದೊಂದಿಗೆ ಪಲ್ಲಕ್ಕಿ, ಕಳಸದ ಮೆರವಣಿಗೆ ಮಹಿಳೆಯರ ಕುಂಭ ಮೇಳದೊಂದಿಗೆ ಗ್ರಾಮದಲ್ಲಿ ನಡೆಯಿತು.</p>.<p>ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯರು, ಗುಳೇದಗುಡ್ಡದ ಅಭಿನವ ಕಾಡಸಿದ್ದೇಶ್ವರರು, ಇಟಗಿಯ ಗುರು ಶಾಂತವೀರ ಶಿವಾಚಾರ್ಯರು, ಪ್ರವಚನಕಾರ ಶಿವಕುಮಾರ ಶಾಸ್ತ್ರಿಗಳು, ಅರ್ಚಕ ಸಂಗಯ್ಯ ಹಿರೇಮಠ, ಗೌರಿಶಂಕರ ಮಠದ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-304151225</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಪುರ: ಬಾಗಲಕೋಟೆ ತಾಲ್ಲೂಕಿನ ಕಿರಸೂರ ಗ್ರಾಮದ ಗೌರಿಶಂಕರ ಸ್ವಾಮೀಜಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಮಹಾರಥೋತ್ಸವ ನಡೆಯಿತು.</p>.<p>ಭಗವತಿ, ಹಳ್ಳೂರ, ಭೈರಮಟ್ಟಿ, ಶಿರೂರ, ಬೇವೂರು, ಮಣ್ಣಿಕಟ್ಟಿ, ಮುಗಲೊಳ್ಳಿ, ಕಮತಗಿ, ಹೊಣ್ಣಾಕಟ್ಟಿ, ಬದಾಮಿ, ರಾಮದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗಿಗಳಾಗಿ ರಥಕ್ಕೆ ಹೂವು, ಹಣ್ಣು, ಪಳಾರ ಸಮರ್ಪಿಸಿ ನಮಿಸಿದರು.</p>.<p>ಬೆಳಿಗ್ಗೆ ಗೌರಿಶಂಕರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಕಲ ವಾದ್ಯ ವೈಭವದೊಂದಿಗೆ ಪಲ್ಲಕ್ಕಿ, ಕಳಸದ ಮೆರವಣಿಗೆ ಮಹಿಳೆಯರ ಕುಂಭ ಮೇಳದೊಂದಿಗೆ ಗ್ರಾಮದಲ್ಲಿ ನಡೆಯಿತು.</p>.<p>ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯರು, ಗುಳೇದಗುಡ್ಡದ ಅಭಿನವ ಕಾಡಸಿದ್ದೇಶ್ವರರು, ಇಟಗಿಯ ಗುರು ಶಾಂತವೀರ ಶಿವಾಚಾರ್ಯರು, ಪ್ರವಚನಕಾರ ಶಿವಕುಮಾರ ಶಾಸ್ತ್ರಿಗಳು, ಅರ್ಚಕ ಸಂಗಯ್ಯ ಹಿರೇಮಠ, ಗೌರಿಶಂಕರ ಮಠದ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-304151225</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>