ಕೃಷ್ಣಾ, ಮಲಪ್ರಭಾ ನದಿ ಪಾತ್ರದಲ್ಲಿ ಸುರಿದ ಮಳೆ ಹಾಗೂ ನವಿಲುತೀರ್ಥ, ಆಲಮಟ್ಟಿ ಜಲಾಶಯದಿಂದ ನದಿಗೆ ನೀರು ಹರಿಸಿದ ಪರಿಣಾಮ ನಾರಾಯಣಪುರ ಜಲಾಶಯ ಹಿನ್ನೀರಿನ ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪ ಸುತ್ತ ಜಲರಾಶಿ ತಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಬೆಳಿಗ್ಗೆಯಿಂದ ಸಂಜೆವರೆಗೆ ಪ್ರವಾಸಿಗರು ಈ ಜಲರಾಶಿಯ ವೈಭವ ನೋಡಿ ಆನಂದಿಸುತ್ತಿದ್ದಾರೆ, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ.