ಬಾಗಲಕೋಟೆ: ತಾಲ್ಲೂಕಿನ ವೀರಾಪುರ ಗ್ರಾಮದ 47 ವರ್ಷದ ವ್ಯಕ್ತಿ ಶುಕ್ರವಾರ ತಡರಾತ್ರಿ ಕೋವಿಡ್-19 ಗೆ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮೂಲತಃ ಬಾಗಲಕೋಟೆ ಸಮೀಪದ ಸಿಕ್ಕೇರಿ ಗ್ರಾಮದವರಾದ ವ್ಯಕ್ತಿ ಕುಟುಂಬದೊಂದಿಗೆ ವೀರಾಪುರದಲ್ಲಿ ನೆಲೆಸಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಶುಕ್ರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಸಾವಿನ ನಂತರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್ ಬಂದಿದೆ.